ಸಾಕು ನಾಯಿ ಬೊಗಳಿದ್ದಕ್ಕೆ ಮಾಲೀಕನಿಗೆ ಚಾಕು ಇರಿದ ದುಷ್ಕರ್ಮಿಗಳು; ಆರೋಪಿಗಳಿಗಾಗಿ ಶೋಧ

ಸಾಕು ನಾಯಿ ಬೊಗಳಿದ್ದಕ್ಕೆ ದುಷ್ಕರ್ಮಿಗಳು ಮಾಲೀಕನಿಗೆ ಚಾಕುವಿನಿಂದ ಇರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ(Devanahalli) ತಾಲೂಕಿನ ದೊಡ್ಡಚೀಮನಹಳ್ಳಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಮಧುಕುಮಾರ್ (34) ಚಾಕು ಇರಿತಕ್ಕೊಳಗಾದ ವ್ಯಕ್ತಿ.

ಸಾಕು ನಾಯಿ ಬೊಗಳಿದ್ದಕ್ಕೆ ಮಾಲೀಕನಿಗೆ ಚಾಕು ಇರಿದ ದುಷ್ಕರ್ಮಿಗಳು; ಆರೋಪಿಗಳಿಗಾಗಿ ಶೋಧ
ಸಾಂದರ್ಭಿಕ ಚಿತ್ರ
Edited By: ಕಿರಣ್ ಹನುಮಂತ್​ ಮಾದಾರ್

Updated on: Dec 12, 2023 | 4:59 PM

ಬೆಂಗಳೂರು ಗ್ರಾಮಾಂತರ, ಡಿ.12: ಸಾಕು ನಾಯಿ ಬೊಗಳಿದ್ದಕ್ಕೆ ದುಷ್ಕರ್ಮಿಗಳು ಮಾಲೀಕನಿಗೆ ಚಾಕುವಿನಿಂದ ಇರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ(Devanahalli) ತಾಲೂಕಿನ ದೊಡ್ಡಚೀಮನಹಳ್ಳಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಮಧುಕುಮಾರ್ (34) ಚಾಕು ಇರಿತಕ್ಕೊಳಗಾದ ವ್ಯಕ್ತಿ. ಇನ್ನು ಚಾಕು ಇರಿತದ ರಭಸಕ್ಕೆ ಚಾಕುವಿನ ತುದಿಯ ಚೂರು, ದೇಹದೊಳಗೆ ಉಳಿದಿದೆ. ಆಸ್ಪತ್ರೆಯಲ್ಲಿ ವೈದ್ಯರು ಸ್ಕ್ಯಾನಿಂಗ್ ಮಾಡಿದಾಗ ಚಾಕುವಿನ ಚೂರು ಇರುವುದು ಬೆಳಕಿಗೆ ಬಂದಿದೆ.

ಘಟನೆ ವಿವರ

ನಿನ್ನೆ ರಾತ್ರಿ ಅದೇ ಗ್ರಾಮದ ಕಿಡಿಗೇಡಿಗಳು, ಮಧುಕುಮಾರ್​ ಜೊತೆಗೆ ನಮ್ಮನ್ನು ನೋಡಿ ನಿಮ್ಮ ನಾಯಿ ಬೊಗಳುತ್ತಿದೆ ಬುದ್ದಿ ಹೇಳುವುದಕ್ಕೆ ಆಗಲ್ವಾ ಎಂದು ಕ್ಯಾತೆ ತೆಗೆದು ಗಲಾಟೆ ಮಾಡಿದ್ದಾರೆ. ಜೊತೆಗೆ ನಾಯಿ ಮಾಲೀಕ ಮತ್ತು ಆಕೆಯ ಪತ್ನಿ ಮಮತಾ ಎಂಬುವವರಿಗೂ ದುಷ್ಕರ್ಮಿಗಳು ಥಳಿಸಿದ್ದಾರೆ. ಕೂಡಲೇ ಗಾಯಾಳು ಮಧುಕುಮಾರ್​ಗೆ ದೊಡ್ಡಬಳ್ಳಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಕುರಿತು ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು, ಅದೇ ಗ್ರಾಮದ ಸುನೀಲ್, ಅನೀಲ್ ದೇವರಾಜ್ ಹಾಗೂ ಅಜಯ್ ಎಂಬುವವರಿಂದ ಕೃತ್ಯ ನಡೆದಿರುವ ಆರೋಪ ಕೇಳಿಬಂದಿದೆ. ಇನ್ನು ತಲೆ ಮರೆಸಿಕೊಂಡಿರುವ ಆರೋಪಿಗಳಿಗಾಗಿ ಪೊಲೀಸರು ಶೋಧಕಾರ್ಯ ಆರಂಭಿಸಿದ್ದಾರೆ.

ಇದನ್ನೂ ಓದಿ:ಬೀದಿ ನಾಯಿಗಳಿಗೆ ಆಹಾರ ಹಾಕಿದ ನೌಕಾಪಡೆಯ ಮಾಜಿ ಎಂಜಿನಿಯರ್​ ಮೇಲೆ ಕಟ್ಟಿಗೆಯಿಂದ ಬಡಿದು ಹಲ್ಲೆ

ಇನ್ನು ಚಿಕ್ಕಮಗಳೂರು ಜಿಲ್ಲೆಯ N.R. ಪುರ ತಾಲೂಕಿನ ಹಾಳ್ ಕರಗುಂದ ಗ್ರಾಮದಲ್ಲಿ ಸಾಕು ನಾಯಿ ಬೊಗಳಿದಕ್ಕೆ ಆ್ಯಸಿಡ್ ಹಾಕಿದ ಘಟನೆ ನಡೆದಿದೆ.  ಅಕ್ಕಪಕ್ಕದ ಮನೆಯವರ ನಡುವೆ ಹಳೆಯ ದ್ವೇಷ, ಮನಸ್ತಾಪ ಮಿತಿಮೀರಿ ಆಸಿಡ್ ದಾಳಿ ನಡೆಸುವರೆಗೂ ಬಂದು ತಲುಪಿದ್ದು ಜಸ್ಟ್‌ ಒಂದು ಸಾಕುನಾಯಿ ವಿಷಯಕ್ಕೆ ಈ ಕೃತ್ಯ ನಡೆದಿದೆ. ಜೇಮ್ಸ್ ಮತ್ತು ಸುಂದರಾಜ್ ಎಂಬ ಎರಡು ಕುಟುಂಬಗಳು ಅಕ್ಕಪಕ್ಕದಲ್ಲಿ ವಾಸವಿದ್ದು, ಹಳೆಯ ದ್ವೇಷ ಇದೀಗ ಆ್ಯಸಿಡ್​ ದಾಳಿ ನಡೆಸುವ ಮಟ್ಟಕ್ಕೆ ತಂದು ನಿಲ್ಲಿಸಿತ್ತು. ಇದೀಗ ಮತ್ತೊಂದು ಇಂತಹ ಘಟನೆ ಬೆಳಕಿಗೆ ಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:17 pm, Tue, 12 December 23

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us