AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳನ್ನು ಆಚೆ ಬಿಡುವ ಪೋಷಕರೇ ಎಚ್ಚರ; 4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ, ಮುಖಕ್ಕೆ ಗಾಯ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ 4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು ಬಾಲಕನ ಮುಖಕ್ಕೆ ಗಾಯಗಳಾಗಿವೆ. ಅದೃಷ್ಟವಶಾತ್ ಸ್ಥಳೀಯರ ಸಮಯ ಪ್ರಜ್ಞೆಯಿಂದಾಗಿ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಬೀದಿ ನಾಯಿಗಳ ಹಾವಳಿ ತಡೆಗಟ್ಟುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಮಕ್ಕಳನ್ನು ಆಚೆ ಬಿಡುವ ಪೋಷಕರೇ ಎಚ್ಚರ; 4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ, ಮುಖಕ್ಕೆ ಗಾಯ
ದೇವನಹಳ್ಳಿ: 4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ, ಮುಖಕ್ಕೆ ಗಾಯ
ನವೀನ್ ಕುಮಾರ್ ಟಿ
| Updated By: ಆಯೇಷಾ ಬಾನು|

Updated on: Jul 08, 2024 | 10:07 AM

Share

ದೇವನಹಳ್ಳಿ, ಜುಲೈ.08: 4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು (Street Dogs) ದಾಳಿ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ 4 ವರ್ಷದ ಅವಾಜ್ ಬಾಷಾ ಎಂಬ ಬಾಲಕನ ಮೇಲೆ ಬೀದಿನಾಯಿಗಳು ದಾಳಿ ನಡೆಸಿದ್ದು ಬಾಲಕನ ಮುಖಕ್ಕೆ ಗಾಯಗಳಾಗಿವೆ. ಸ್ಥಳೀಯರ ಸಮಯ ಪ್ರಜ್ಞೆಯಿಂದಾಗಿ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ನಿನ್ನೆ ಸಂಜೆ ಮಕ್ಕಳ‌ ಜೊತೆ ಅಂಗಡಿಗೆ ಹೋಗುತ್ತಿದ್ದ ವೇಳೆ ಏಕಾಏಕಿ ದಾಳಿ ನಡೆಸಿದ ಬೀದಿನಾಯಿಗಳು ಮಗುವನ್ನು ಕಚ್ಚಿ ಘಾಸಿಗೊಳಿಸಿದೆ. ಸ್ಥಳೀಯರ ಸಮಯ ಪ್ರಜ್ಞೆಯಿಂದಾಗಿ ಮಗು ಪಾರಾಗಿದೆ. ಬೀದಿ ನಾಯಿಗಳ ಹಾವಳಿ ತಡೆಗಟ್ಟುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೂರು ತಿಂಗಳ ಹೆಣ್ಣು ಮಗುವನ್ನು ಅನಾಥ ಮಾಡಿದ ತಾಯಿ

ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆ ಬಳಿಯ ಹೆಡಗರಹಳ್ಳಿ ಗ್ರಾಮದಲ್ಲಿ ಮುದ್ದಾದ ಮೂರು ತಿಂಗಳ ಹೆಣ್ಣು ಮಗುವನ್ನ ನಿರ್ದಯಿ ತಾಯಿ ಅನಾಥವಾಗಿ ಬಿಟ್ಟುಹೋಗಿದ್ದಾಳೆ. ಆಶಾ ಕಾರ್ಯಕರ್ತೆಯೊಬ್ಬರು ವಾಕಿಂಗ್ ಮಾಡುವ ವೇಳೆ ಮಗುವಿನ ಅಳುವಿನ ಶಬ್ಧ ಕೇಳಿಸಿದ್ದು ಸ್ಥಳಕ್ಕೆ ಹೋಗಿ ನೋಡಿದಾಗ ಮಗು ಪತ್ತೆಯಾಗಿದೆ. ಆಶಾ ಕಾರ್ಯಕರ್ತೆ ಕಲಾವತಿಯವರು ತಕ್ಷಣ ನೊಣವಿನಕೆರೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದು ಆಂಬುಲೆನ್ಸ್ ಮೂಲಕ ಮಗುವನ್ನ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಮಗು ಆರೋಗ್ಯವಾಗಿದೆ. ಮಗು 4.5ಕೆ.ಜಿ ತೂಕವಿದ್ದು ಮಕ್ಕಳ ತಜ್ಞೆ ಡಾ.ಶಿರಿಷ ಅವರಿಂದ ಮಗುವಿನ ಆರೋಗ್ಯ ತಪಾಸಣೆ ನಡೆಸಲಾಗಿದೆ. ಮಗುವಿನ ಪೋಷಕರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ಇದನ್ನೂ ಓದಿ: ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿ; ಗಂಡು ಮಗುವಿಗೆ ಜನ್ಮ ನೀಡಿದ ರೀಟಾ, ವಿಡಿಯೋ ನೋಡಿ

ಗೋಮಾಂಸ ಮಾರುತ್ತಿದ್ದವರ ವಿರುದ್ಧ FIR

ಗೋಮಾಂಸ ಮಾರಾಟ ಮಾಡುತ್ತಿದ್ದವರನ್ನ ಹಿಂದೂ ಕಾರ್ಯಕರ್ತರು ತಡೆದು, ದೂರು ದಾಖಲಿಸಿದ್ದಾರೆ. ಬಾಗಲಕೋಟೆ ‌ಜಿಲ್ಲೆ ಹುನಗುಂದ ತಾಲ್ಲೂಕಿನ ಕಮತಗಿಯಲ್ಲಿ ಘಟನೆ ನಡೆದಿದ್ದು, ಮನೆ ಮನೆಗೂ ತೆರಳಿ ಗೋಮಾಂಸ ಮಾರಾಟ ಮಾಡುತ್ತಿದ್ದ ನಾಲ್ವರ ವಿರುದ್ಧ ಎಫ್​ಐಆರ್​​ ದಾಖಲಿಸಲಾಗಿದೆ. ಶಬ್ಬೀರ್ ಬೇಪಾರಿ, ಕಮಲಸಾಬ್ ಬೇಪಾರಿ, ಮಹಿಬೂಬಸಾಬ ಬೇಪಾರಿ, ಮೌಲಾಲಿ ವಿರುದ್ಧ ಅಮೀನಗಢ ಠಾಣೆಯಲ್ಲಿ ಕೇಸ್​ ದಾಖಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?