ಮಕ್ಕಳನ್ನು ಆಚೆ ಬಿಡುವ ಪೋಷಕರೇ ಎಚ್ಚರ; 4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ, ಮುಖಕ್ಕೆ ಗಾಯ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ 4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು ಬಾಲಕನ ಮುಖಕ್ಕೆ ಗಾಯಗಳಾಗಿವೆ. ಅದೃಷ್ಟವಶಾತ್ ಸ್ಥಳೀಯರ ಸಮಯ ಪ್ರಜ್ಞೆಯಿಂದಾಗಿ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಬೀದಿ ನಾಯಿಗಳ ಹಾವಳಿ ತಡೆಗಟ್ಟುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಮಕ್ಕಳನ್ನು ಆಚೆ ಬಿಡುವ ಪೋಷಕರೇ ಎಚ್ಚರ; 4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ, ಮುಖಕ್ಕೆ ಗಾಯ
ದೇವನಹಳ್ಳಿ: 4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ, ಮುಖಕ್ಕೆ ಗಾಯ
Edited By: ಆಯೇಷಾ ಬಾನು

Updated on: Jul 08, 2024 | 10:07 AM

ದೇವನಹಳ್ಳಿ, ಜುಲೈ.08: 4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು (Street Dogs) ದಾಳಿ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ 4 ವರ್ಷದ ಅವಾಜ್ ಬಾಷಾ ಎಂಬ ಬಾಲಕನ ಮೇಲೆ ಬೀದಿನಾಯಿಗಳು ದಾಳಿ ನಡೆಸಿದ್ದು ಬಾಲಕನ ಮುಖಕ್ಕೆ ಗಾಯಗಳಾಗಿವೆ. ಸ್ಥಳೀಯರ ಸಮಯ ಪ್ರಜ್ಞೆಯಿಂದಾಗಿ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ನಿನ್ನೆ ಸಂಜೆ ಮಕ್ಕಳ‌ ಜೊತೆ ಅಂಗಡಿಗೆ ಹೋಗುತ್ತಿದ್ದ ವೇಳೆ ಏಕಾಏಕಿ ದಾಳಿ ನಡೆಸಿದ ಬೀದಿನಾಯಿಗಳು ಮಗುವನ್ನು ಕಚ್ಚಿ ಘಾಸಿಗೊಳಿಸಿದೆ. ಸ್ಥಳೀಯರ ಸಮಯ ಪ್ರಜ್ಞೆಯಿಂದಾಗಿ ಮಗು ಪಾರಾಗಿದೆ. ಬೀದಿ ನಾಯಿಗಳ ಹಾವಳಿ ತಡೆಗಟ್ಟುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೂರು ತಿಂಗಳ ಹೆಣ್ಣು ಮಗುವನ್ನು ಅನಾಥ ಮಾಡಿದ ತಾಯಿ

ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆ ಬಳಿಯ ಹೆಡಗರಹಳ್ಳಿ ಗ್ರಾಮದಲ್ಲಿ ಮುದ್ದಾದ ಮೂರು ತಿಂಗಳ ಹೆಣ್ಣು ಮಗುವನ್ನ ನಿರ್ದಯಿ ತಾಯಿ ಅನಾಥವಾಗಿ ಬಿಟ್ಟುಹೋಗಿದ್ದಾಳೆ. ಆಶಾ ಕಾರ್ಯಕರ್ತೆಯೊಬ್ಬರು ವಾಕಿಂಗ್ ಮಾಡುವ ವೇಳೆ ಮಗುವಿನ ಅಳುವಿನ ಶಬ್ಧ ಕೇಳಿಸಿದ್ದು ಸ್ಥಳಕ್ಕೆ ಹೋಗಿ ನೋಡಿದಾಗ ಮಗು ಪತ್ತೆಯಾಗಿದೆ. ಆಶಾ ಕಾರ್ಯಕರ್ತೆ ಕಲಾವತಿಯವರು ತಕ್ಷಣ ನೊಣವಿನಕೆರೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದು ಆಂಬುಲೆನ್ಸ್ ಮೂಲಕ ಮಗುವನ್ನ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಮಗು ಆರೋಗ್ಯವಾಗಿದೆ. ಮಗು 4.5ಕೆ.ಜಿ ತೂಕವಿದ್ದು ಮಕ್ಕಳ ತಜ್ಞೆ ಡಾ.ಶಿರಿಷ ಅವರಿಂದ ಮಗುವಿನ ಆರೋಗ್ಯ ತಪಾಸಣೆ ನಡೆಸಲಾಗಿದೆ. ಮಗುವಿನ ಪೋಷಕರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ಇದನ್ನೂ ಓದಿ: ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿ; ಗಂಡು ಮಗುವಿಗೆ ಜನ್ಮ ನೀಡಿದ ರೀಟಾ, ವಿಡಿಯೋ ನೋಡಿ

ಗೋಮಾಂಸ ಮಾರುತ್ತಿದ್ದವರ ವಿರುದ್ಧ FIR

ಗೋಮಾಂಸ ಮಾರಾಟ ಮಾಡುತ್ತಿದ್ದವರನ್ನ ಹಿಂದೂ ಕಾರ್ಯಕರ್ತರು ತಡೆದು, ದೂರು ದಾಖಲಿಸಿದ್ದಾರೆ. ಬಾಗಲಕೋಟೆ ‌ಜಿಲ್ಲೆ ಹುನಗುಂದ ತಾಲ್ಲೂಕಿನ ಕಮತಗಿಯಲ್ಲಿ ಘಟನೆ ನಡೆದಿದ್ದು, ಮನೆ ಮನೆಗೂ ತೆರಳಿ ಗೋಮಾಂಸ ಮಾರಾಟ ಮಾಡುತ್ತಿದ್ದ ನಾಲ್ವರ ವಿರುದ್ಧ ಎಫ್​ಐಆರ್​​ ದಾಖಲಿಸಲಾಗಿದೆ. ಶಬ್ಬೀರ್ ಬೇಪಾರಿ, ಕಮಲಸಾಬ್ ಬೇಪಾರಿ, ಮಹಿಬೂಬಸಾಬ ಬೇಪಾರಿ, ಮೌಲಾಲಿ ವಿರುದ್ಧ ಅಮೀನಗಢ ಠಾಣೆಯಲ್ಲಿ ಕೇಸ್​ ದಾಖಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us