AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಷಕರ ಮೇಲಿನ ಸೇಡಿಗೆ ಮಕ್ಕಳ ಮೇಲೆ ರಿವೇಂಜ್​​: ಕಿಡಿಗೇಡಿಗಳಿಂದ ಮಕ್ಕಳಿಗೆ ವಿಷಪ್ರಾಶನ

Devanahalli News: ಪೋಷಕರ ಮೇಲಿನ ದ್ವೇಷಕ್ಕೆ ದುಷ್ಕರ್ಮಿಗಳು ಇಬ್ಬರು ಮಕ್ಕಳಿಗೆ ವಿಷಪ್ರಾಶನ ಮಾಡಿರುವಂತಹ ಘಟನೆ ಜಿಲ್ಲೆಯ ದೇವನಹಳ್ಳಿ ತಾಲೂಕಿನ ದೊಡ್ಡಸಣ್ಣೆ ಗ್ರಾಮದಲ್ಲಿ ನಡೆದಿದೆ.

ಪೋಷಕರ ಮೇಲಿನ ಸೇಡಿಗೆ ಮಕ್ಕಳ ಮೇಲೆ ರಿವೇಂಜ್​​: ಕಿಡಿಗೇಡಿಗಳಿಂದ ಮಕ್ಕಳಿಗೆ ವಿಷಪ್ರಾಶನ
ವಿಷಪ್ರಾಶನಕ್ಕೊಳಗಾದ ಹೆಣ್ಣುಮಕ್ಕಳು
ನವೀನ್ ಕುಮಾರ್ ಟಿ
| Edited By: |

Updated on:Aug 03, 2023 | 9:55 PM

Share

ಬೆಂಗಳೂರು ಗ್ರಾಮಾಂತರ, ಆಗಸ್ಟ್​ 03: ಪೋಷಕರ ಮೇಲಿನ ದ್ವೇಷಕ್ಕೆ ದುಷ್ಕರ್ಮಿಗಳು ಇಬ್ಬರು ಮಕ್ಕಳಿಗೆ ವಿಷಪ್ರಾಶನ (poisoned) ಮಾಡಿರುವಂತಹ ಘಟನೆ ಜಿಲ್ಲೆಯ ದೇವನಹಳ್ಳಿ ತಾಲೂಕಿನ ದೊಡ್ಡಸಣ್ಣೆ ಗ್ರಾಮದಲ್ಲಿ ನಡೆದಿದೆ. ಅನುಷ ಮತ್ತು ಪಲ್ಲವಿ ಇಬ್ಬರಿಗೆ ಬಲವಂತವಾಗಿ ವಿಷ ಕುಡಿಸಲಾಗಿದೆ. ಇತ್ತೀಚೆಗೆ ನಡೆದ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾ ಸೇಡಿನಿಂದ ಕೃತ್ಯವೆಸಗಲಾಗಿದೆ ಎಂದು ಶಂಕಿಸಲಾಗಿದೆ. ಸದ್ಯ ಮಾನಸ ಆಸ್ಪತ್ರೆಯಲ್ಲಿ ಹೆಣ್ಣುಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ದೊಡ್ಡಸಣ್ಣೆ ಗ್ರಾಮದ ಅಶೋಕ್ ಮತ್ತು ಶಿಲ್ಪಾ ದಂಪತಿ ನೆನ್ನೆ ಬೆಳಗ್ಗೆ ನಿದ್ದೆಯೆದ್ದವರೆ ಕೆಲಸಕ್ಕೆ ಅಂತ ತಮ್ಮ ಹೂತೋಟಕ್ಕೆ ತೆರಳಿದ್ದಾರೆ. ಇತ್ತ ಪೋಷಕರು ತೋಟದ ಕಡೆ ತೆರಳುತ್ತಿದ್ದಂತೆ ಮನೆಗೆ ನುಗ್ಗಿದ ಕಿಡಿಗೇಡಿಗಳು ಮನೆಯಲ್ಲಿದ್ದ ಪಲ್ಲವಿಯನ್ನ ಹೆದರಿಸಿ ವಿಷದ ಬಾಟಲ್ ಅನ್ನ ಕುಡಿಸಿ ಎಸ್ಕೇಪ್ ಆಗಿದ್ದರು.

ಇನ್ನೂ ನಿನ್ನೆ ಘಟನೆಯಿಂದಲೇ ಆತಂಕಕ್ಕೀಡಾಗಿದ್ದ ದಂಪತಿಗಳು ಚೇತರಿಸಿಕೊಳ್ಳುವ ಮುನ್ನ ಇಂದು ಬೆಳಗ್ಗೆ ಮತ್ತೆ ಬಂದ ಕಿಡಿಗೇಡಿಗಳು ಪಕ್ಕದ ಮನೆಯ ಪಲ್ಲವಿಯ ಚಿಕ್ಕಪ್ಪನ ಮಗಳಾದ ಅನುಷಾಳಿಗೂ ಇದೇ ರೀತಿ ಹೆದರಿಸಿ ವಿಷ ಕುಡಿಸಿದ್ದು ನಂತರ ಮನೆಯಿಂದ ಕಾಲ್ಕಿತ್ತಿದ್ದಾರೆ.

ಇದನ್ನೂ ಓದಿ: Crime News: ಇಬ್ಬರು ಹೆಣ್ಣುಮಕ್ಕಳನ್ನು ಕೊಂದು ತಾವೂ ಆತ್ಮಹತ್ಯೆಗೆ ಶರಣಾದ ತಂದೆ-ತಾಯಿ

ವಿಷ ಕುಡಿಸಿ ಕಿಡಿಗೇಡಿಗಳು ಎಸ್ಕೇಪ್ ಆಗ್ತಿದ್ದಂತೆ ಪಲ್ಲವಿ ಮನೆಯಿಂದ ಹೊರಗಡೆ ಬಂದು ಕಿರುಚಾಡಿದ್ದು ನಂತರ ಸ್ಥಳಿಯರು ದೇವನಹಳ್ಳಿಯ ಖಾಸಗಿ ಆಸ್ವತ್ರೆಗೆ ಬಾಲಕಿಯನ್ನ ಕರೆತಂದಿದ್ದಾರೆ. ನಿನ್ನೆ ಮತ್ತು ಇಂದು ಸರಣಿ ಒಂದೇ ಕುಟುಂಬದ ಇಬ್ಬರು ಮಕ್ಕಳ ಮೇಲೆ ವಿಷಪ್ರಾಷನ ಕೃತ್ಯ ನಡೆಸಿರುವುದು ಗ್ರಾಮಕ್ಕೆ ಗ್ರಾಮವನ್ನೆ ಒಂದು ಕ್ಷಣ ಬೆಚ್ಚಿ ಬೀಳಿಸಿದೆ.

ನಿನ್ನೆ ಪಲ್ಲವಿಗೆ ವಿಷ ಕುಡಿಸಿ ಎಸ್ಕೇಪ್ ಆಗಿದ್ದ ಖದೀಮರು ಪೊಲೀಸ್ ಕೇಸ್ ಆಗಿದ್ದರು ಇಂದು ಬೆಳಗ್ಗೆ ಮತ್ತೆ ಬಂದು ಅದೇ ಕೃತ್ಯ ಮಾಡಿರುವುದು ಕುಟುಂಬಸ್ಥರಲ್ಲಿ ಆತಂಕ ಮೂಡಿಸಿದೆ. ಅಲ್ಲದೆ ಇಂದು ಮುಂಜಾನೆ ಬಾಲಕಿ ವಿರೋಧ ವ್ಯಕ್ತಪಡಿಸುತ್ತಿದ್ದಂತೆ ಚಾಕುವಿನಿಂದ ಕೈ ಕೊಯ್ದಿದ್ದು ವಿಷ ಕುಡಿಯದಿದ್ದರೆ ಕೊಲೆ ಮಾಡುವುದಾಗಿ ಬೆದರಿಸಿ ವಿಷ ಕುಡಿಸಿದ್ದಾರೆ.

ಇದನ್ನೂ ಓದಿ: ಜಮೀನು ವಿಚಾರಕ್ಕಾಗಿ‌ ಎರಡು ಸಮುದಾಯಗಳ ನಡುವೆ ಮಾರಾಮಾರಿ: ದೂರು ದಾಖಲು

ಪಲ್ಲವಿ ತಾಯಿ ಶಿಲ್ಪ ಗ್ರಾಮ ಪಂಚಾಯಿತಿ ಸದಸ್ಯೆಯಾಗಿದ್ದು, ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್​ ಪರ ಮತ ಚಲಾಯಿಸಿ ಗೆಲ್ಲಿಸಿದ್ದರಂತೆ. ಹೀಗಾಗಿ ರಾಜಕೀಯ ದ್ವೇಷದಿಂದ ಈ ರೀತಿ ಮಕ್ಕಳಿಗೆ ವಿಷ ಕುಡಿಸಿ ನಮ್ಮ ಮೇಲಿನ ಸೇಡನ್ನ ಮಕ್ಕಳ ಮೇಲೆ ತೋರಿಸುತ್ತಿದ್ದಾರೆ ಅಂತ ಆರೋಪಿಸಿದ್ದು, ಗ್ರಾಮಸ್ಥರೆ ಕೃತ್ಯವೆಸಗಿರುವ ಶಂಕೆಯನ್ನ ವ್ಯಕ್ತಪಡಿಸಿದ್ದಾರೆ.

ವೈಯುಕ್ತಿಕ ದ್ವೇಷಗಳಿದಲ್ಲಿ ನೇರ ನೇರವಾಗಿ ಗುದ್ದಾಡುವುದನ್ನ ಬಿಟ್ಟು ಮನೆಯಲ್ಲಿದ್ದ ಮಕ್ಕಳಿಗೆ ವಿಷ ಕುಡಿಸಿ ಅಮಾನವೀಯವಾಗಿ ನಡೆದುಕೊಂಡಿರುವುದು ನಿಜಕ್ಕೂ ವಿಪರ್ಯಾಸ. ಈ ಬಗ್ಗೆ ದೇವನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದು ಆರೋಪಿಗಳ ಬಂಧನದ ನಂತರ ವಿಷಪ್ರಾಷನದ ಹಿಂದಿನ ಅಸಲಿ ಸತ್ಯ ಬೆಳಕಿಗೆ ಬರಬೇಕಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:27 pm, Thu, 3 August 23

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್