AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಕಿ ಜೀವನಕ್ಕಾಗಿ ಕಳ್ಳತನ: ಬರೋಬ್ಬರಿ 32 ಬೈಕ್ ಕದ್ದಿದ್ದ ಆಸಾಮಿ ಸಿಕ್ಕಿಬಿದ್ದ

ದೇವನಹಳ್ಳಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಆಂಧ್ರಪ್ರದೇಶ ಮೂಲದ ಬೈಕ್​ ಕಳ್ಳನನ್ನು ಅರೆಸ್ಟ್​ ಮಾಡಿದ್ದಾರೆ. ಆರೋಪಿ ನಕಲಿ ಕೀ ಬಳಸಿ ಬೈಕ್ ಕದ್ದು ಪರಾರಿಯಾಗುತ್ತಿದ್ದ. ಶೋಕಿ ಜೀವನ ನಡೆಸಲು ಕಳ್ಳತನವನ್ನೇ ಕಾಯಕವನ್ನಾಗಿ ಮಾಡಿಕೊಂಡಿದ್ದ. ಸದ್ಯ ಬಂಧಿತ ಆರೋಪಿಯಿಂದ 10 ವಿವಿಧ ಬೈಕ್​ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಶೋಕಿ ಜೀವನಕ್ಕಾಗಿ ಕಳ್ಳತನ: ಬರೋಬ್ಬರಿ 32 ಬೈಕ್ ಕದ್ದಿದ್ದ ಆಸಾಮಿ ಸಿಕ್ಕಿಬಿದ್ದ
ಬಂಧಿತ ಆರೋಪಿ
ನವೀನ್ ಕುಮಾರ್ ಟಿ
| Updated By: ಗಂಗಾಧರ​ ಬ. ಸಾಬೋಜಿ|

Updated on: Aug 26, 2025 | 5:23 PM

Share

ದೇವನಹಳ್ಳಿ, ಆಗಸ್ಟ್ 26: ನಕಲಿ ಕೀ ಬಳಸಿ ಸುಮಾರು 32 ಬೈಕ್​ಗಳನ್ನು ಕಳ್ಳತನ (theft) ಮಾಡಿದ್ದ ಖದೀಮನನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಬೈಕ್​ ಕದ್ದು ಪರಾರಿಯಾಗುತ್ತಿದ್ದ ಆಂದ್ರ ಮೂಲದ ಆನಂದ್​ ಬಂಧಿತ ಆರೋಪಿ. ದೇವನಹಳ್ಳಿ (Devanahalli) ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆಸಿ ಅರೆಸ್ಟ್​ ಮಾಡಲಾಗಿದ್ದು, 22 ಸ್ಪ್ಲೆಂಡರ್​ ಬೈಕ್​, 10 ವಿವಿಧ ಬೈಕ್​ಗಳನ್ನು ಸೀಜ್ ಮಾಡಲಾಗಿದೆ.​

ಬಂಧಿತ ಆರೋಪಿ ಆನಂದ್​, ದೇವನಹಳ್ಳಿ ಸೇರಿದಂತೆ ನಗರದಲ್ಲಿ ನಕಲಿ ಕೀ ಬಳಸಿ ಬೈಕ್​ ಕಳ್ಳತನ ಮಾಡುತ್ತಿದ್ದ. ಕದ್ದ ಬೈಕ್​ಗಳನ್ನು 10 ರಿಂದ 20 ಸಾವಿರ ರೂ ಮಾರುತ್ತಿದ್ದ. ಶೋಕಿ ಜೀವನ ನಡೆಸುತ್ತಿದ್ದ. ಈ ಹಿಂದೆಯೂ ಬೈಕ್​ ಕದ್ದು ಜೈಲು ಸೇರಿದ್ದ. ಬಳಿಕ ಬೇಲ್​ ಮೇಲೆ ಹೊರಬಂದು ಮತ್ತೆ ಕಳ್ಳತನಕ್ಕೆ ಇಳಿದ್ದಿದ್ದ. ಇದೀಗ ಮತ್ತೊಮ್ಮೆ ಲಾಕ್​ ಆಗಿದ್ದಾನೆ.

230 ಗ್ರಾಂ ಚಿನ್ನಾಭರಣ ಕಳ್ಳತನ: ಆರೋಪಿ ಅಂದರ್​

ಬೇಗೂರು ಪೊಲೀಸರಿಂದ ಮನೆಕಳವು ಆರೋಪಿ ಬಂಧಿಸಿರುವಂತಹ ಘಟನೆ ನಡೆದಿದೆ. ಶಾಂತಕುಮಾರ್ ಅಲಿಯಾಸ್ ಶಾಂತ ಬಂಧಿತ ಆರೋಪಿ. ಓರ್ವ ನಾಪತ್ತೆ ಆಗಿದ್ದಾನೆ. 230 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದ. ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಬೆಂಗಳೂರು: ಸಾಲ ಕೊಟ್ಟವರ ಮನೆಯಲ್ಲೇ ಕನ್ನ; ತಂಗಿ ಕೃತ್ಯಕ್ಕೆ ಅಣ್ಣ ಸಾಥ್,​ ಆರು ಜನರ ಬಂಧನ

ಬೀಗ ಹಾಕಿದ್ದ ಮನೆಗಳನ್ನು ಟಾರ್ಗೆಟ್ ಮಾಡುತ್ತಿದ್ದ ಆರೋಪಿಗಳು, ಕೆ.ಜಿ.ಎಫ್​ನಿಂದ ಟ್ರೈನ್​ನಲ್ಲಿ ಬಂದು ಕಳ್ಳತನ ಮಾಡುತ್ತಿದ್ದರು. ಸದ್ಯ ಶಾಂತ್ ಕುಮಾರ್ ಸ್ನೇಹಿತನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಆರೋಪಿಗಳ ಮೇಲೆ ವಿವಿಧ ಪೊಲೀಸ್ ಠಾಣೆಗಳಲ್ಲಿ 20ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಚಿತ್ರದುರ್ಗದಲ್ಲಿ ಇಬ್ಬರು ಬೈಕ್​​ ಕಳ್ಳರ ಬಂಧನ

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಠಾಣೆ ಪೊಲೀಸರ ಕಾರ್ಯಾಚರಣೆ ನಡೆಸಿ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಿದ್ದಾರೆ. ಹೊಸದುರ್ಗ ಠಾಣೆ ಸಿಪಿಐ ರಮೇಶ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದ್ದು, ಚಿತ್ರದುರ್ಗ ಮೂಲದ ದಾದಾಪೀರ್ ಮತ್ತು ನಬೀವುಲ್ಲಾ ಎಂಬುವವರನ್ನು ಅರೆಸ್ಟ್​ ಮಾಡಲಾಗಿದೆ. ಬಂಧಿತರಿಂದ 7ಲಕ್ಷ ರೂ. ಮೌಲ್ಯದ ಒಟ್ಟು 11ಬೈಕ್​ಗಳನ್ನು ವಶಕ್ಕೆ ಪಡೆಯಲಾಗಿದೆ. ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ