AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಕಿ ಜೀವನಕ್ಕಾಗಿ ಕಳ್ಳತನ: ಬರೋಬ್ಬರಿ 32 ಬೈಕ್ ಕದ್ದಿದ್ದ ಆಸಾಮಿ ಸಿಕ್ಕಿಬಿದ್ದ

ದೇವನಹಳ್ಳಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಆಂಧ್ರಪ್ರದೇಶ ಮೂಲದ ಬೈಕ್​ ಕಳ್ಳನನ್ನು ಅರೆಸ್ಟ್​ ಮಾಡಿದ್ದಾರೆ. ಆರೋಪಿ ನಕಲಿ ಕೀ ಬಳಸಿ ಬೈಕ್ ಕದ್ದು ಪರಾರಿಯಾಗುತ್ತಿದ್ದ. ಶೋಕಿ ಜೀವನ ನಡೆಸಲು ಕಳ್ಳತನವನ್ನೇ ಕಾಯಕವನ್ನಾಗಿ ಮಾಡಿಕೊಂಡಿದ್ದ. ಸದ್ಯ ಬಂಧಿತ ಆರೋಪಿಯಿಂದ 10 ವಿವಿಧ ಬೈಕ್​ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಶೋಕಿ ಜೀವನಕ್ಕಾಗಿ ಕಳ್ಳತನ: ಬರೋಬ್ಬರಿ 32 ಬೈಕ್ ಕದ್ದಿದ್ದ ಆಸಾಮಿ ಸಿಕ್ಕಿಬಿದ್ದ
ಬಂಧಿತ ಆರೋಪಿ
ನವೀನ್ ಕುಮಾರ್ ಟಿ
| Edited By: |

Updated on: Aug 26, 2025 | 5:23 PM

Share

ದೇವನಹಳ್ಳಿ, ಆಗಸ್ಟ್ 26: ನಕಲಿ ಕೀ ಬಳಸಿ ಸುಮಾರು 32 ಬೈಕ್​ಗಳನ್ನು ಕಳ್ಳತನ (theft) ಮಾಡಿದ್ದ ಖದೀಮನನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಬೈಕ್​ ಕದ್ದು ಪರಾರಿಯಾಗುತ್ತಿದ್ದ ಆಂದ್ರ ಮೂಲದ ಆನಂದ್​ ಬಂಧಿತ ಆರೋಪಿ. ದೇವನಹಳ್ಳಿ (Devanahalli) ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆಸಿ ಅರೆಸ್ಟ್​ ಮಾಡಲಾಗಿದ್ದು, 22 ಸ್ಪ್ಲೆಂಡರ್​ ಬೈಕ್​, 10 ವಿವಿಧ ಬೈಕ್​ಗಳನ್ನು ಸೀಜ್ ಮಾಡಲಾಗಿದೆ.​

ಬಂಧಿತ ಆರೋಪಿ ಆನಂದ್​, ದೇವನಹಳ್ಳಿ ಸೇರಿದಂತೆ ನಗರದಲ್ಲಿ ನಕಲಿ ಕೀ ಬಳಸಿ ಬೈಕ್​ ಕಳ್ಳತನ ಮಾಡುತ್ತಿದ್ದ. ಕದ್ದ ಬೈಕ್​ಗಳನ್ನು 10 ರಿಂದ 20 ಸಾವಿರ ರೂ ಮಾರುತ್ತಿದ್ದ. ಶೋಕಿ ಜೀವನ ನಡೆಸುತ್ತಿದ್ದ. ಈ ಹಿಂದೆಯೂ ಬೈಕ್​ ಕದ್ದು ಜೈಲು ಸೇರಿದ್ದ. ಬಳಿಕ ಬೇಲ್​ ಮೇಲೆ ಹೊರಬಂದು ಮತ್ತೆ ಕಳ್ಳತನಕ್ಕೆ ಇಳಿದ್ದಿದ್ದ. ಇದೀಗ ಮತ್ತೊಮ್ಮೆ ಲಾಕ್​ ಆಗಿದ್ದಾನೆ.

230 ಗ್ರಾಂ ಚಿನ್ನಾಭರಣ ಕಳ್ಳತನ: ಆರೋಪಿ ಅಂದರ್​

ಬೇಗೂರು ಪೊಲೀಸರಿಂದ ಮನೆಕಳವು ಆರೋಪಿ ಬಂಧಿಸಿರುವಂತಹ ಘಟನೆ ನಡೆದಿದೆ. ಶಾಂತಕುಮಾರ್ ಅಲಿಯಾಸ್ ಶಾಂತ ಬಂಧಿತ ಆರೋಪಿ. ಓರ್ವ ನಾಪತ್ತೆ ಆಗಿದ್ದಾನೆ. 230 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದ. ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಬೆಂಗಳೂರು: ಸಾಲ ಕೊಟ್ಟವರ ಮನೆಯಲ್ಲೇ ಕನ್ನ; ತಂಗಿ ಕೃತ್ಯಕ್ಕೆ ಅಣ್ಣ ಸಾಥ್,​ ಆರು ಜನರ ಬಂಧನ

ಬೀಗ ಹಾಕಿದ್ದ ಮನೆಗಳನ್ನು ಟಾರ್ಗೆಟ್ ಮಾಡುತ್ತಿದ್ದ ಆರೋಪಿಗಳು, ಕೆ.ಜಿ.ಎಫ್​ನಿಂದ ಟ್ರೈನ್​ನಲ್ಲಿ ಬಂದು ಕಳ್ಳತನ ಮಾಡುತ್ತಿದ್ದರು. ಸದ್ಯ ಶಾಂತ್ ಕುಮಾರ್ ಸ್ನೇಹಿತನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಆರೋಪಿಗಳ ಮೇಲೆ ವಿವಿಧ ಪೊಲೀಸ್ ಠಾಣೆಗಳಲ್ಲಿ 20ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಚಿತ್ರದುರ್ಗದಲ್ಲಿ ಇಬ್ಬರು ಬೈಕ್​​ ಕಳ್ಳರ ಬಂಧನ

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಠಾಣೆ ಪೊಲೀಸರ ಕಾರ್ಯಾಚರಣೆ ನಡೆಸಿ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಿದ್ದಾರೆ. ಹೊಸದುರ್ಗ ಠಾಣೆ ಸಿಪಿಐ ರಮೇಶ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದ್ದು, ಚಿತ್ರದುರ್ಗ ಮೂಲದ ದಾದಾಪೀರ್ ಮತ್ತು ನಬೀವುಲ್ಲಾ ಎಂಬುವವರನ್ನು ಅರೆಸ್ಟ್​ ಮಾಡಲಾಗಿದೆ. ಬಂಧಿತರಿಂದ 7ಲಕ್ಷ ರೂ. ಮೌಲ್ಯದ ಒಟ್ಟು 11ಬೈಕ್​ಗಳನ್ನು ವಶಕ್ಕೆ ಪಡೆಯಲಾಗಿದೆ. ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ