AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಸತಿ ಶಾಲೆಯ ಬಾಲಕಿಯರ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಶಾಲೆ ನಡೆಸಲು ಅನುಮತಿಯೇ ಪಡೆದಿರಲಿಲ್ಲ ಆಸಾಮಿ!

ದೇವನಹಳ್ಳಿಯ ವಸತಿ ಶಾಲೆಯಲ್ಲಿ ಬಾಲಕಿಯರ ಮೇಲೆ ನಡೆದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಮಾಲೀಕ ಧನಂಜಯ್, ಬಾಲಕರ ಹಾಸ್ಟೆಲ್‌ಗೆ ಮಾತ್ರ ಅನುಮತಿ ಪಡೆದಿದ್ದರೂ, ಬಾಲಕಿಯರ ಹಾಸ್ಟೆಲ್ ಅನ್ನು ಅನಧಿಕೃತವಾಗಿ ನಡೆಸುತ್ತಿದ್ದ ಎನ್ನಲಾಗಿದೆ. ಲೈಸೆನ್ಸ್ ನವೀಕರಿಸದೇ ಹಾಗೂ ಪರವಾನಗಿ ಇಲ್ಲದೆ ವಸತಿ ಶಾಲೆ ನಡೆಸುತ್ತಿದ್ದ ಧನಂಜಯ್ಗೆ ಆತನ ಪತ್ನಿ ಶೈಲಜಾ ದೌರ್ಜನ್ಯಕ್ಕೆ ಕುಮ್ಮಕ್ಕು ನೀಡಿದ್ದಾರೆ ಎಂದು ತಿಳಿದು ಬಂದಿದೆ.

ವಸತಿ ಶಾಲೆಯ ಬಾಲಕಿಯರ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಶಾಲೆ ನಡೆಸಲು ಅನುಮತಿಯೇ ಪಡೆದಿರಲಿಲ್ಲ ಆಸಾಮಿ!
ವಸತಿ ಶಾಲೆಯ ಬಾಲಕಿಯರ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಶಾಲೆ ನಡೆಸಲು ಅನುಮತಿಯೇ ಪಡೆದಿರಲಿಲ್ಲ ಆಸಾಮಿ!
ನವೀನ್ ಕುಮಾರ್ ಟಿ
| Edited By: |

Updated on: Feb 28, 2026 | 3:20 PM

Share

ದೇವನಹಳ್ಳಿ, ಫೆಬ್ರವರಿ 28: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ (Devanahalli) ಪಟ್ಟಣದಲ್ಲಿನ ವಸತಿ ಶಾಲೆಯಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಆರೋಪಿ ಧನಂಜಯ್ ಬಾಲಕರ ಹಾಸ್ಟೆಲ್‌ಗೆ ಮಾತ್ರ ಅನುಮತಿ ಪಡೆದಿದ್ದರೂ, ಬಾಲಕಿಯರ ವಸತಿ ವ್ಯವಸ್ಥೆಯನ್ನು ಅನುಮತಿ ಇಲ್ಲದೆ ಅಕ್ರಮವಾಗಿ ನಡೆಸುತ್ತಿದ್ದ ಎಂಬ ಮಾಹಿತಿ ಹೊರಬಿದ್ದಿದೆ.

ಬಾಲಕರ ವಸತಿ ಶಾಲೆಯ ಪರವಾನಗಿಯನ್ನೂ ನವೀಕರಿಸಿಲ್ಲ

ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಬೆನ್ನಲ್ಲೇ ಧನಂಜಯ್​ನ ಮತ್ತೊಂದು ಅವ್ಯವಹಾರ ಬಟಾಬಯಲಾಗಿದೆ. ಬಾಲಕ ಮತ್ತು ಬಾಲಕಿಯರ ವಸತಿ ಶಾಲೆ ನಡೆಸುತ್ತಿದ್ದ ಧನಂಜಯ್ ಕೇವಲ ಬಾಲಕರ ಶಾಲೆಗೆ ಮಾತ್ರ ಅನುಮತಿ ಪಡೆದಿದ್ದು, ಬಾಲಕಿಯರ ವಸತಿ ಶಾಲೆ ನಡೆಸಲು ಪರವಾನಗಿ ಪಡೆದಿರಲಿಲ್ಲ ಎಂಬುದು ತಿಳಿದು ಬಂದಿದೆ. ಇದಲ್ಲದೆ ಕಳೆದ ವರ್ಷದಿಂದ ಬಾಲಕರ ಹಾಸ್ಟೆಲ್ ಲೈಸನ್ಸ್‌ ನವೀಕರಣವೂ ಮಾಡಿಸದ ಆಡಳಿತ ಮಂಡಳಿ ವಸತಿ ಶಾಲೆ ನಡೆಸುತ್ತಿತ್ತು ಎನ್ನಲಾಗಿದೆ.

ದೌರ್ಜನ್ಯದ ಘಟನೆ ಬಹಿರಂಗವಾದ ನಂತರವೇ ಹಾಸ್ಟೆಲ್ ಕಾರ್ಯಾಚರಣೆ ಕುರಿತು ಗಮನಕ್ಕೆ ಬಂದಿದೆ ಎಂದು ಶಿಕ್ಷಣ ಇಲಾಖೆ ಹೇಳಿದೆ. ವಸತಿ ಶಾಲೆ ನಡೆಸಲು ಸಮಾಜ ಕಲ್ಯಾಣ ಇಲಾಖೆಯ ಅನುಮತಿ ಅಗತ್ಯವೆಂದು ಡಿಡಿಪಿಐ ಸ್ಪಷ್ಟಪಡಿಸಿದ್ದರೆ, ಖಾಸಗಿ ಶಾಲೆಗಳು ತಮ್ಮ ವ್ಯಾಪ್ತಿಗೆ ಬರುವುದಿಲ್ಲವೆಂದು ಸಮಾಜ ಕಲ್ಯಾಣ ಇಲಾಖೆ ಹೇಳಿದೆ. ಇದರಿಂದ ಅಧಿಕಾರಿಗಳ ನಡುವೆ ಸಮನ್ವಯದ ಕೊರತೆ ಹಾಗೂ ನಿರ್ಲಕ್ಷ್ಯ ಬಯಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

ಇದನ್ನೂ ಓದಿ ವಸತಿ ಶಾಲೆಯ ಬಾಲಕಿಯರಿಗೆ ಲೈಂಗಿಕ ಕಿರುಕುಳ; ಶಾಲೆ ನಡೆಸುತ್ತಿದ್ದ ದಂಪತಿ ಮೇಲೆ ಪೋಕ್ಸೋ ಕೇಸ್!

ನಡೆದಿದ್ದೇನು?

ವಸತಿ ಶಾಲೆಯಲ್ಲಿ ವಾಸಿಸುತ್ತಿದ್ದ ಇಬ್ಬರು ಬಾಲಕಿಯರಿಗೆ ಅದರ ಮಾಲೀಕ ಧನಂಜಯ್ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬ ಆರೋಪದಡಿ ದೂರು ದಾಖಲಿಸಿದ್ದಾರೆ. ಧನಂಜಯ್ ರಾತ್ರಿವೇಳೆ ಮದ್ಯದ ಅಮಲಿನಲ್ಲಿ ಬಾಲಕಿಯರ ಕೊಠಡಿಗೆ ತೆರಳಿ, ಒಮ್ಮೊಮ್ಮೆ ವಾರ್ಡನ್ ಕೊಠಡಿಗೆ ಕರೆಸಿ ಕಿರುಕುಳ ನೀಡುತ್ತಿದ್ದ. ತಾತನ ವಯಸ್ಸಾಗಿದ್ದರೂ ಪುಟ್ಟ ಬಾಲಕಿಯರ ಮೇಲೆ ದೌರ್ಜನ್ಯ ಎಸಗುತ್ತಿದ್ದವನ ಕರ್ಮಕಾಂಡವನ್ನು ಸಹಿಸಲಾಗದ ಮಕ್ಕಳು ಆತನ ಪತ್ನಿ ಶೈಲಜಾಗೆ ಈ ಬಗ್ಗೆ ಹೇಳಿದ್ದರು. ಆದರೆ ಆಕೆಯೂ ಗಂಡನ ನೀಚ ಕೃತ್ಯಕ್ಕೆ ಸಾಥ್ ನೀಡಿ, ಕಿರುಕುಳದ ಬಗ್ಗೆ ಯಾರಿಗೂ ಹೇಳದಂತೆ ತಾಕೀತು ಮಾಡಿದ್ದಳು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More