AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿ: ತಹಶೀಲ್ದಾರ್ ಸಹಿ‌ ನಕಲು ಮಾಡಿ ಮುಜರಾಯಿ ಇಲಾಖೆಯ 63 ಲಕ್ಷ ರೂ. ಲಪಟಾಯಿಸಿದ ಆರ್​ಐ!

ಆತ ಸರ್ಕಾರಿ ಅಧಿಕಾರಿ, ಸರ್ಕಾರದ ಕೆಲಸ ಮಾಡಿಕೊಂಡು ಸಂಬಳ ತೆಗೆದುಕೊಳ್ಳುವ ಬದಲು ಮುಜರಾಯಿ ಇಲಾಖೆಯ ಲಕ್ಷ ಲಕ್ಷ ಹಣವನ್ನು ತಹಶೀಲ್ದಾರ್ ಸಹಿ ಹಾಗೂ ಸೀಲ್ ದುರ್ಬಳಕೆ ಮಾಡಿಕೊಂಡು ನುಂಗಿ ನೀರು ಕುಡಿದು ಅರೆಸ್ಟ್ ಆಗಿದ್ದ. ಆದರೆ, ಇದೀಗ ವಂಚಕ ಆರ್​ಐಯನ್ನು ಅಮಾನತು ಮಾಡಿ ಆದೇಶಿಸಲಾಗಿದ್ದು, ಆತ ಲಪಾಟಾಯಿಸಿದ್ದ ಲಕ್ಷಾಂತರ ರೂ. ಹಣವನ್ನು ಪುನಃ ಸರ್ಕಾರದ ವಶಕ್ಕೆ ಪಡೆಯಲಾಗಿದೆ.

ದೇವನಹಳ್ಳಿ: ತಹಶೀಲ್ದಾರ್ ಸಹಿ‌ ನಕಲು ಮಾಡಿ ಮುಜರಾಯಿ ಇಲಾಖೆಯ 63 ಲಕ್ಷ ರೂ. ಲಪಟಾಯಿಸಿದ ಆರ್​ಐ!
ರೆವಿನ್ಯೂ ಇನ್ಸ್​ಪೆಕ್ಟರ್ ಹೇಮಂತ್ ಕುಮಾರ್
ನವೀನ್ ಕುಮಾರ್ ಟಿ
| Edited By: |

Updated on:Feb 20, 2025 | 7:34 AM

Share

ದೇವನಹಳ್ಳಿ, ಫೆಬ್ರವರಿ 20: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ರೆವಿನ್ಯೂ ಇನ್ಸ್​ಪೆಕ್ಟರ್ ಹೇಮಂತ್ ಕುಮಾರ್ ಮುಜರಾಯಿ ಇಲಾಖೆಯ ಲಕ್ಷಾಂತರ ರೂಪಾಯಿ ಲಪಟಾಯಿಸಿ ಸಿಕ್ಕಿ ಬಿದ್ದಿದ್ದಾರೆ. ರೆವಿನ್ಯೂ ಇನ್ಸ್​ಪೆಕ್ಟರ್ (ಆರ್​ಐ) ಆಗಿ ಬರುವ ಮೊದಲು ಮುಜರಾಯಿ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಹೇಮಂತ್ ಇಲಾಖೆಯ ಬಗ್ಗೆ ಹೆಚ್ಚು ಮಾಹಿತಿ ತಿಳಿದಿದ್ದರಿಂದ, 2023 ರಿಂದ ಇಲ್ಲಿಯವರೆಗೆ ಇಬ್ಬರು ತಹಶಿಲ್ದಾರ್, ಓರ್ವ ಕೇಸ್ ವರ್ಕರ್ ಸಹಿ ಮತ್ತು ಸೀಲ್ ಬಳಸಿ ಮುಜುರಾಯಿ‌ ಇಲಾಖೆಯಲ್ಲಿನ ಸುಮಾರು 63 ಲಕ್ಷ ರೂ. ಹಣವನ್ನು ಲಪಟಾಯಿಸಿದ್ದರು.

ಹಣ ಲಪಟಾಯಿಸಿದ್ದು ಗೊತ್ತಾಗಿದ್ಹೇಗೆ?

ಮುಜರಾಯಿ ಇಲಾಖೆಯ ದೇವಾಲಯದಿಂದ ಸರ್ಕಾರಕ್ಕೆ ಹಣ ಸಂದಾಯವಾಗಿಲ್ಲ ಎಂಬ ಬಗ್ಗೆ ದೊಡ್ಡಬಳ್ಳಾಪುರ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್​ಗೆ ದೂರು ಬಂದಿತ್ತು. ಈ ಬಗ್ಗೆ ತನಿಖೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಜೊತೆಗೆ‌ ಖಾತೆಯಲ್ಲಿನ ಹಣ‌ ಮಾಯವಾದ ಬಗ್ಗೆ ದೊಡ್ಡಬಳ್ಳಾಪುರ ತಹಶೀಲ್ದಾರ್ ನಗರ ಪೊಲೀಸ್ ಠಾಣೆಯಲ್ಲಿ ದೂರ ನೀಡಿದ್ದರು. ಅದರಂತೆ, ಪೊಲೀಸರು ಪ್ರಕರಣ ದಾಖಲಿಸಿಕೊಂಡು‌ ತನಿಖೆ ನಡೆಸಿದ್ದು, ಆರೋಪಿ ಆರ್​ಐ ಹೇಮಂತ್​ನನ್ನು ಬಂಧಿಸಿ ಪ್ರಕರಣ ಬಯಲಿಗೆಳೆದಿದ್ದಾರೆ. ಇದೀಗ ಸರ್ಕಾರದ ಹಣ ಗುಳುಂ ಮಾಡಿದ್ದ ರೆವಿನ್ಯೂ ಇನ್ಸ್​​ಪೆಕ್ಟರ್​​ನನ್ನು ಅಮಾನತ್ತು ಮಾಡಿ‌ ತಹಶಿಲ್ದಾರ್ ಆದೇಶಿಸಿದ್ದಾರೆ.

ಅಂದಹಾಗೆ ಅಮಾನತು ಮಾಡಿರುವ ಆರ್​​ಐ ಮುಜರಾಯಿ ಹಣವನ್ನು ಬೇರೆ ಬೇರೆ ಖಾತೆಗೆ ವರ್ಗಾವಣೆ ಮಾಡಿಕೊಂಡು ನಂತರ ಆ ಹಣವನ್ನ ಡ್ರಾ ಮಾಡಿಕೊಂಡಿರುವುದು ಪೊಲೀಸರ ವಿಚಾರಣೆಯಲ್ಲಿ ಬೆಳಕಿಗೆ‌ ಬಂದಿದೆ. ಅಲ್ಲದೆ ಆರ್​ಐ ಹೇಮಂತ್ ಬೆಂಗಳೂರಿನ ಮಹಿಳೆಯೊಬ್ಬರ ಕೆನರಾ ಬ್ಯಾಂಕ್ ಖಾತೆಗೆ ಹಂತ ಹಂತವಾಗಿ ಮುಜರಾಯಿ ಇಲಾಖೆಯಲ್ಲಿನ ಹಣ ವರ್ಗಾವಣೆ ಮಾಡಿದ್ದು, ಬಳಿಕ ಮಹಿಳೆಯ ಖಾತೆಯಿಂದ ಬೇರೊಂದು ಖಾತೆಗೆ ಹಣ ಬದಲಾವಣೆ ಮಾಡಿಕೊಂಡು ಸರ್ಕಾರಕ್ಕೆ ಮಂಕು ಬೂದಿ ಎರಚಿರುವುದು ಬೆಳಕಿಗೆ ಬಂದಿದೆ. ಅಲ್ಲದೆ ಆರೋಪಿ ಹಣ ಡ್ರಾ ಮಾಡಿಕೊಂಡು, ಐಷರಾಮಿ ಜೀವನ ನಡೆಸಲು ಸೈಟ್ ಖರೀದಿ ಮಾಡಿ ಮನೆ ನಿರ್ಮಾಣ ಮಾಡಲು ಹೊರಟಿದ್ದ ಎಂಬ ಆರೋಪ ಸಹ ಕೇಳಿ ಬಂದಿದೆ. ಈ ಬಗ್ಗೆ ಪೊಲೀಸರ ಮುಂದೆ ತನಿಖೆ ವೇಳೆ ಆರೋಪಿ ಬಾಯ್ಬಿಟ್ಟಿದ್ದಾನೆ.

ಇದನ್ನೂ ಓದಿ: ರೀಲ್ಸ್​ ಮಾಡುವಾಗ ರೈಲು ಡಿಕ್ಕಿಯಾಗಿ ಯುಪಿ ಮೂಲದ ಮೂವರು ಕಾರ್ಮಿಕರು ಸಾವು

ಮುಜರಾಯಿ ಇಲಾಖೆಯ ಖಾತೆಯಿಂದ ವರ್ಗಾವಣೆ ಮಾಡಿಕೊಂಡಿದ್ದ ಹಣವನ್ನು ಪೊಲೀಸರು ವಿವಿಧ ಖಾತೆಗಳಿಂದ ವಶಕ್ಕೆ ಪಡೆದಿದ್ದು ಆರ್​​ಐ ಹೇಮಂತ್ ಕುಮಾರ್​​ನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸುತ್ತಿದ್​ದಾರೆ. ಸಂಪೂರ್ಣ ತನಿಖೆ ನಂತರ, ಬೇರೆ ಯಾವುದಾದರೂ ಅಕ್ರಮಗಳನ್ನೂ ಎಸಗಿದ್ದಾರೆಯೇ ಎಂಬುದು ಬೆಳಕಿಗೆ‌ ಬರಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:32 am, Thu, 20 February 25

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More