Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿ: ತಹಶೀಲ್ದಾರ್ ಸಹಿ‌ ನಕಲು ಮಾಡಿ ಮುಜರಾಯಿ ಇಲಾಖೆಯ 63 ಲಕ್ಷ ರೂ. ಲಪಟಾಯಿಸಿದ ಆರ್​ಐ!

ಆತ ಸರ್ಕಾರಿ ಅಧಿಕಾರಿ, ಸರ್ಕಾರದ ಕೆಲಸ ಮಾಡಿಕೊಂಡು ಸಂಬಳ ತೆಗೆದುಕೊಳ್ಳುವ ಬದಲು ಮುಜರಾಯಿ ಇಲಾಖೆಯ ಲಕ್ಷ ಲಕ್ಷ ಹಣವನ್ನು ತಹಶೀಲ್ದಾರ್ ಸಹಿ ಹಾಗೂ ಸೀಲ್ ದುರ್ಬಳಕೆ ಮಾಡಿಕೊಂಡು ನುಂಗಿ ನೀರು ಕುಡಿದು ಅರೆಸ್ಟ್ ಆಗಿದ್ದ. ಆದರೆ, ಇದೀಗ ವಂಚಕ ಆರ್​ಐಯನ್ನು ಅಮಾನತು ಮಾಡಿ ಆದೇಶಿಸಲಾಗಿದ್ದು, ಆತ ಲಪಾಟಾಯಿಸಿದ್ದ ಲಕ್ಷಾಂತರ ರೂ. ಹಣವನ್ನು ಪುನಃ ಸರ್ಕಾರದ ವಶಕ್ಕೆ ಪಡೆಯಲಾಗಿದೆ.

ದೇವನಹಳ್ಳಿ: ತಹಶೀಲ್ದಾರ್ ಸಹಿ‌ ನಕಲು ಮಾಡಿ ಮುಜರಾಯಿ ಇಲಾಖೆಯ 63 ಲಕ್ಷ ರೂ. ಲಪಟಾಯಿಸಿದ ಆರ್​ಐ!
ರೆವಿನ್ಯೂ ಇನ್ಸ್​ಪೆಕ್ಟರ್ ಹೇಮಂತ್ ಕುಮಾರ್
Follow us
ನವೀನ್ ಕುಮಾರ್ ಟಿ
| Updated By: Ganapathi Sharma

Updated on:Feb 20, 2025 | 7:34 AM

ದೇವನಹಳ್ಳಿ, ಫೆಬ್ರವರಿ 20: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ರೆವಿನ್ಯೂ ಇನ್ಸ್​ಪೆಕ್ಟರ್ ಹೇಮಂತ್ ಕುಮಾರ್ ಮುಜರಾಯಿ ಇಲಾಖೆಯ ಲಕ್ಷಾಂತರ ರೂಪಾಯಿ ಲಪಟಾಯಿಸಿ ಸಿಕ್ಕಿ ಬಿದ್ದಿದ್ದಾರೆ. ರೆವಿನ್ಯೂ ಇನ್ಸ್​ಪೆಕ್ಟರ್ (ಆರ್​ಐ) ಆಗಿ ಬರುವ ಮೊದಲು ಮುಜರಾಯಿ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಹೇಮಂತ್ ಇಲಾಖೆಯ ಬಗ್ಗೆ ಹೆಚ್ಚು ಮಾಹಿತಿ ತಿಳಿದಿದ್ದರಿಂದ, 2023 ರಿಂದ ಇಲ್ಲಿಯವರೆಗೆ ಇಬ್ಬರು ತಹಶಿಲ್ದಾರ್, ಓರ್ವ ಕೇಸ್ ವರ್ಕರ್ ಸಹಿ ಮತ್ತು ಸೀಲ್ ಬಳಸಿ ಮುಜುರಾಯಿ‌ ಇಲಾಖೆಯಲ್ಲಿನ ಸುಮಾರು 63 ಲಕ್ಷ ರೂ. ಹಣವನ್ನು ಲಪಟಾಯಿಸಿದ್ದರು.

ಹಣ ಲಪಟಾಯಿಸಿದ್ದು ಗೊತ್ತಾಗಿದ್ಹೇಗೆ?

ಮುಜರಾಯಿ ಇಲಾಖೆಯ ದೇವಾಲಯದಿಂದ ಸರ್ಕಾರಕ್ಕೆ ಹಣ ಸಂದಾಯವಾಗಿಲ್ಲ ಎಂಬ ಬಗ್ಗೆ ದೊಡ್ಡಬಳ್ಳಾಪುರ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್​ಗೆ ದೂರು ಬಂದಿತ್ತು. ಈ ಬಗ್ಗೆ ತನಿಖೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಜೊತೆಗೆ‌ ಖಾತೆಯಲ್ಲಿನ ಹಣ‌ ಮಾಯವಾದ ಬಗ್ಗೆ ದೊಡ್ಡಬಳ್ಳಾಪುರ ತಹಶೀಲ್ದಾರ್ ನಗರ ಪೊಲೀಸ್ ಠಾಣೆಯಲ್ಲಿ ದೂರ ನೀಡಿದ್ದರು. ಅದರಂತೆ, ಪೊಲೀಸರು ಪ್ರಕರಣ ದಾಖಲಿಸಿಕೊಂಡು‌ ತನಿಖೆ ನಡೆಸಿದ್ದು, ಆರೋಪಿ ಆರ್​ಐ ಹೇಮಂತ್​ನನ್ನು ಬಂಧಿಸಿ ಪ್ರಕರಣ ಬಯಲಿಗೆಳೆದಿದ್ದಾರೆ. ಇದೀಗ ಸರ್ಕಾರದ ಹಣ ಗುಳುಂ ಮಾಡಿದ್ದ ರೆವಿನ್ಯೂ ಇನ್ಸ್​​ಪೆಕ್ಟರ್​​ನನ್ನು ಅಮಾನತ್ತು ಮಾಡಿ‌ ತಹಶಿಲ್ದಾರ್ ಆದೇಶಿಸಿದ್ದಾರೆ.

ಅಂದಹಾಗೆ ಅಮಾನತು ಮಾಡಿರುವ ಆರ್​​ಐ ಮುಜರಾಯಿ ಹಣವನ್ನು ಬೇರೆ ಬೇರೆ ಖಾತೆಗೆ ವರ್ಗಾವಣೆ ಮಾಡಿಕೊಂಡು ನಂತರ ಆ ಹಣವನ್ನ ಡ್ರಾ ಮಾಡಿಕೊಂಡಿರುವುದು ಪೊಲೀಸರ ವಿಚಾರಣೆಯಲ್ಲಿ ಬೆಳಕಿಗೆ‌ ಬಂದಿದೆ. ಅಲ್ಲದೆ ಆರ್​ಐ ಹೇಮಂತ್ ಬೆಂಗಳೂರಿನ ಮಹಿಳೆಯೊಬ್ಬರ ಕೆನರಾ ಬ್ಯಾಂಕ್ ಖಾತೆಗೆ ಹಂತ ಹಂತವಾಗಿ ಮುಜರಾಯಿ ಇಲಾಖೆಯಲ್ಲಿನ ಹಣ ವರ್ಗಾವಣೆ ಮಾಡಿದ್ದು, ಬಳಿಕ ಮಹಿಳೆಯ ಖಾತೆಯಿಂದ ಬೇರೊಂದು ಖಾತೆಗೆ ಹಣ ಬದಲಾವಣೆ ಮಾಡಿಕೊಂಡು ಸರ್ಕಾರಕ್ಕೆ ಮಂಕು ಬೂದಿ ಎರಚಿರುವುದು ಬೆಳಕಿಗೆ ಬಂದಿದೆ. ಅಲ್ಲದೆ ಆರೋಪಿ ಹಣ ಡ್ರಾ ಮಾಡಿಕೊಂಡು, ಐಷರಾಮಿ ಜೀವನ ನಡೆಸಲು ಸೈಟ್ ಖರೀದಿ ಮಾಡಿ ಮನೆ ನಿರ್ಮಾಣ ಮಾಡಲು ಹೊರಟಿದ್ದ ಎಂಬ ಆರೋಪ ಸಹ ಕೇಳಿ ಬಂದಿದೆ. ಈ ಬಗ್ಗೆ ಪೊಲೀಸರ ಮುಂದೆ ತನಿಖೆ ವೇಳೆ ಆರೋಪಿ ಬಾಯ್ಬಿಟ್ಟಿದ್ದಾನೆ.

ಇದನ್ನೂ ಓದಿ: ರೀಲ್ಸ್​ ಮಾಡುವಾಗ ರೈಲು ಡಿಕ್ಕಿಯಾಗಿ ಯುಪಿ ಮೂಲದ ಮೂವರು ಕಾರ್ಮಿಕರು ಸಾವು

ಮುಜರಾಯಿ ಇಲಾಖೆಯ ಖಾತೆಯಿಂದ ವರ್ಗಾವಣೆ ಮಾಡಿಕೊಂಡಿದ್ದ ಹಣವನ್ನು ಪೊಲೀಸರು ವಿವಿಧ ಖಾತೆಗಳಿಂದ ವಶಕ್ಕೆ ಪಡೆದಿದ್ದು ಆರ್​​ಐ ಹೇಮಂತ್ ಕುಮಾರ್​​ನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸುತ್ತಿದ್​ದಾರೆ. ಸಂಪೂರ್ಣ ತನಿಖೆ ನಂತರ, ಬೇರೆ ಯಾವುದಾದರೂ ಅಕ್ರಮಗಳನ್ನೂ ಎಸಗಿದ್ದಾರೆಯೇ ಎಂಬುದು ಬೆಳಕಿಗೆ‌ ಬರಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:32 am, Thu, 20 February 25

ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಸತೀಶ್ ಜಾರಕಿಹೊಳಿ ದೆಹಲಿಗೆ ಯಾಕೆ ಹೋಗಿದ್ದು ಅಂತ ಗೊತ್ತಿಲ್ಲ: ರಾಜಣ್ಣ
ಸತೀಶ್ ಜಾರಕಿಹೊಳಿ ದೆಹಲಿಗೆ ಯಾಕೆ ಹೋಗಿದ್ದು ಅಂತ ಗೊತ್ತಿಲ್ಲ: ರಾಜಣ್ಣ
ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು
ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ