AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿ: ತಂದೆಯ ಸಿಂಗಲ್ ಬ್ಯಾರಲ್ ಗನ್​​ನಿಂದ ಫೈರಿಂಗ್ ಮಾಡಿಕೊಂಡು ಮಗ ಆತ್ಮಹತ್ಯೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಗ್ರಾಮದಲ್ಲಿ ಫೈರಿಂಗ್ ಮಾಡಿಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಮತ್ತೊಂದು ಪ್ರಕರಣದಲ್ಲಿ ಟೆಂಪೋ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಚಿಕ್ಕಹುಲ್ಲೂರು ಗ್ರಾಮದ ಬಳಿ ನಡೆದಿದೆ.

ದೇವನಹಳ್ಳಿ: ತಂದೆಯ ಸಿಂಗಲ್ ಬ್ಯಾರಲ್ ಗನ್​​ನಿಂದ ಫೈರಿಂಗ್ ಮಾಡಿಕೊಂಡು ಮಗ ಆತ್ಮಹತ್ಯೆ
ಆತ್ಮಹತ್ಯೆ ಮಾಡಿಕೊಂಡ ಬೈಯೇಶ್
ನವೀನ್ ಕುಮಾರ್ ಟಿ
| Edited By: |

Updated on:May 12, 2025 | 3:09 PM

Share

ದೇವನಹಳ್ಳಿ, ಮೇ 12: ತಂದೆಯ ಸಿಂಗಲ್ ಬ್ಯಾರಲ್​ ಗನ್​ನಿಂದ ಫೈರಿಂಗ್ (shooting)​ ಮಾಡಿಕೊಂಡು ಮಗ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ (Devanahalli) ತಾಲೂಕಿನ ಗ್ರಾಮದಲ್ಲಿ ನಡೆದಿದೆ. ಇಂದು ಮುಂಜಾನೆ ಫಾರ್ಮ್​ಹೌಸ್​ನಲ್ಲಿ ಬೈಯೇಶ್(28) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೈಯೇಶ್ ಇತ್ತೀಚೆಗಷ್ಟೆ ವಿದೇಶದಲ್ಲಿ ವಿದ್ಯಾಭ್ಯಾಸ ಮುಗಿಸಿ ಬಂದಿದ್ದ. ಸದ್ಯ ಸ್ಥಳಕ್ಕೆ ತಿರುಮಲಶೆಟ್ಟಿಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ನಿನ್ನೆ ಮನೆಯ ಕುಟುಂಬಸ್ಥರು ಎಲ್ಲಾ ತಿರುಪತಿಗೆ ಹೋಗಿದ್ದಾರೆ. ಬೈಯೇಶ್​​ ಮನೆಯಲ್ಲಿ ಒಬ್ಬಂಟಿಯಾಗಿದ್ದರು. ಏಕಾಏಕಿ ಫೈರಿಂಗ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಮುಂಜಾನೆ ಕುಟುಂಬಸ್ಥರು ವಾಪಸ್ ಬಂದು ನೋಡಿದಾಗ ಆತ್ಮಹತ್ಯೆ ಬೆಳಕಿಗೆ ಬಂದಿದೆ.

ಟೆಂಪೋ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ

ಟೆಂಪೋ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಚಿಕ್ಕಹುಲ್ಲೂರು ಗ್ರಾಮದ ಬಳಿ ನಡೆದಿದೆ. ಮತ್ತೊಬ್ಬನಿಗೆ ಗಂಭೀರ ಗಾಯವಾಗಿದ್ದು, ಹೊಸಕೋಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಆಕಸ್ಮಿಕವಾಗಿ ಫೈರಿಂಗ್: ಯುವಕನ‌ ತೊಡೆ ಸೀಳಿದ ಗುಂಡು

ಆಕಸ್ಮಿಕವಾಗಿ ಫೈರಿಂಗ್​ ಹಿನ್ನಲೆ ಗುಂಡು ಯುವಕನ‌ ತೊಡೆ ಸೀಳಿರುವಂತಹ ಘಟನೆ ರಾಯಚೂರು ನಗರದ ಹೆಚ್‌ಆರ್‌ಬಿ ಬಡವಾಣೆಯಲ್ಲಿ ನಡೆದಿದೆ. ಮೊಹಮ್ಮದ್ ಸೊಹೈಲ್(16) ಗಾಯಗೊಂಡಿರುವ ವಿದ್ಯಾರ್ಥಿ. ಪಿಸ್ತೂಲ್ ಹೊಂದಿದ್ದ ಜಿಯಾ ಸೌದಾಗರ ವಿರುದ್ಧ ಸದರಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಚಿತ್ರದುರ್ಗ: ಕಾರು-ಲಾರಿ ಮುಖಾಮುಖಿ ಡಿಕ್ಕಿ, ಇಬ್ಬರು ಪುರುಷರು, ಓರ್ವ ಮಹಿಳೆ ಸಾವು

ನಗರದ ಜಾಕೀರ್ ಹುಸೇನ್ ಸರ್ಕಲ್‌‌ನಲ್ಲಿ ಮೊಹಮ್ಮದ್​ ಸೊಹೈಲ್​​​ ತಿಂಡಿ ಮಾಡುತ್ತಿದ್ದ. ಈ ವೇಳೆ ಸ್ನೇಹಿತ ಜಿಯಾ ಸೌದಾಗರ್ ಭೇಟಿ ಆಗಿದ್ದಾನೆ. ಆಗ ಜಿಯಾ ಸೌದಾಗರ್ ಜೊತೆ ಆತನ ಮನೆಗೆ ಹೋಗಿದ್ದಾನೆ. ಮನೆಯಲ್ಲಿ ಪಿಸ್ತೂಲ್ ತೆಗೆದುಕೊಂಡ ಸೌದಾಗರ್, ಅದಕ್ಕೆ 4 ಬುಲೆಟ್ ಲೋಡ್ ಮಾಡಿದ್ದಾನ. ನಂತರ ಪಿಸ್ತೂಲ್ ಬೆಡ್ ಮೇಲೆ ಇಟ್ಟಾಗ ಏಕಾಏಕಿ ಮಿಸ್ ಫೈರ್ ಆಗಿದ್ದು, ಸೊಹೈಲ್​ನ ಬಲ ತೊಡೆ ಸೀಳಿ, ಎಡ ತೊಡೆಗೆ ತಗುಲಿದೆ.  ಸದ್ಯ ಗಾಯಾಳುವನ್ನು ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:59 pm, Mon, 12 May 25

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!