AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Devanahalli: ಮೊಬೈಲ್ ಸ್ಟೇಟಸ್ ವಿಚಾರಕ್ಕೆ ಕಾಂಗ್ರೆಸ್ ಮುಖಂಡರ ನಡುವೆ ಅವಾಚ್ಯ ಶಬ್ದಗಳ ಟಾಕ್​ವಾರ್; ​ ಆಡಿಯೋ ವೈರಲ್​

ದೇವನಹಳ್ಳಿಯ ಪ್ರಬಲ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿ ಶಾಂತ್​ಕುಮಾರ್ ಮತ್ತು ಯುವ ಮುಖಂಡ ಸಂದೀಪ್ ನಡುವೆ ಟಾಕ್​ವಾರ್ ನಡೆದಿದ್ದು. ಮೊಬೈಲ್‌ನಲ್ಲಿ ಪರಸ್ಪರ ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡಿದ್ದಾರೆ.

Devanahalli: ಮೊಬೈಲ್ ಸ್ಟೇಟಸ್ ವಿಚಾರಕ್ಕೆ ಕಾಂಗ್ರೆಸ್ ಮುಖಂಡರ ನಡುವೆ ಅವಾಚ್ಯ ಶಬ್ದಗಳ ಟಾಕ್​ವಾರ್; ​ ಆಡಿಯೋ ವೈರಲ್​
ಶಾಂತ್​ ಕುಮಾರ್​, ಸಂದೀಪ್​
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on:Dec 06, 2022 | 10:06 AM

Share

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೇವನಹಳ್ಳಿ ಪಟ್ಟಣದ ಪ್ರಬಲ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಶಾಂತ್​ಕುಮಾರ್ ಮತ್ತು ಯುವ ಮುಖಂಡ ಸಂದೀಪ್ ಇಬ್ಬರು ಪೋನ್​ನಲ್ಲಿ ಬೈದಾಡಿಕೊಂಡಿರುವ ಆಡಿಯೋ ಇದೀಗ ಪುಲ್ ವೈರಲ್ ಆಗಿದೆ. 2023 ರ ಚುನಾವಣೆಗೆ ದೇವನಹಳ್ಳಿ ಟಿಕೆಟ್ ಪಡೆಯಲು ಪ್ರಬಲ ಪೈಟ್ ನೀಡುತ್ತಿರುವ ಶಾಂತ್​ಕುಮಾರ್. ಈ ವಿಚಾರವಾಗಿ ಕ್ಷೇತ್ರದ ಕಾಂಗ್ರೇಸ್​ನಲ್ಲಿ ನಡೆಯುತಿದೆ ಶೀತಲ ಸಮರ. ಈ ಮಧ್ಯೆ ಟಿಕೆಟ್ ಆಕಾಂಕ್ಷಿ ಶಾಂತ್​ ಕುಮಾರ್ ಬಗ್ಗೆ ಯುವ ಮುಖಂಡ ಸಂದೀಪ್ ಅವಹೇಳನವಾಗಿ ಸ್ಟೇಟಸ್ ಹಾಕಿದ್ದಾನೆ ಎನ್ನುವ ವಿಚಾರಕ್ಕೆ ಕಿರಿಕ್ ಆಗಿದ್ದು, ಇದೇ ವಿಚಾರವಾಗಿ ಇಬ್ಬರು ಮಾತನಾಡಿರುವ ಆಡಿಯೋ  ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಪೋನ್​ನಲ್ಲಿ ಅವಾಚ್ಯ ಶಬ್ದಗಳಿಂದ ಕೈ ಮುಖಂಡರ ಟಾಕ್ ವಾರ್

ಮೊಬೈಲ್​ನಲ್ಲಿ ತನ್ನ ವಿರುದ್ದ ಅವಹೇಳನಕಾರಿ ಸ್ಟೇಟಸ್ ಹಾಕಿದ್ದ ಎನ್ನುವ ವಿಚಾರಕ್ಕೆ ಕೈ ನಾಯಕರಿಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡಿರುವ ಆಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿ ಶಾಂತ್ ಕುಮಾರ್ ಮತ್ತು ಯುವ ಮುಖಂಡ ಸಂದೀಪ್ ನಡುವೆ ನಡೆದಿರುವ ಸಂಬಾಷಣೆ ಎನ್ನಲಾಗಿದ್ದು, ಕೈ ನಾಯಕರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಟೀಕೆ ವ್ಯಕ್ತವಾಗ್ತಿದೆ. ಯುವ ಮುಖಂಡ ಸಂದೀಪ್ ದೇವನಹಳ್ಳಿ‌ ಕ್ಷೇತ್ರದ ಸಮಾಜ ಸೇವಕ ಮತ್ತು ಪ್ರಬಲ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಶಾಂತಕುಮಾರ್ ವಿರುದ್ದ ಪೋನ್​ನಲ್ಲಿ ಅಪಮಾನ ಮಾಡುವ ರೀತಿಯಲ್ಲಿ ಸ್ಟೇಟಸ್ ಹಾಕಿದ್ದ ಎನ್ನುವ ವಿಚಾರಕ್ಕೆ ಕರೆ ಮಾಡಿದ್ದಾರೆ ಎನ್ನಲಾಗಿದೆ. ಅಲ್ಲದೆ ಕರೆ ಮಾಡಿದ ವೇಳೆ ಇಬ್ಬರು ಪರಸ್ಪರ ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡಿರುವ ಆಡಿಯೋ ಇದಾಗಿದ್ದು ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್​ನಲ್ಲಿ ಒಳಜಗಳ‌ ನಡೆಯುತ್ತಿದೆ

ಇದನ್ನೂ ಓದಿ:ಬೆಳಗಾವಿ: ರಾಜಕೀಯ ಬದ್ಧವೈರಿ ಲಕ್ಷ್ಮೀ ಹೆಬ್ಬಾಳ್ಕರ್ ಸೋಲಿಸಲು ಜಿದ್ದಿಗೆ ಬಿದ್ದ ಸಾಹುಕಾರ್

ನಮ್ಮ ವಿರುದ್ದ ಮಿಮಿಕ್ರಿ ಆಡಿಯೋ ಪಿತೂರಿ ಆಡಿಯೋ ಬಗ್ಗೆ ದೂರು ನೀಡಿ ತನಿಖೆಗೆ ಒತ್ತಾಯ

ಇನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಆಡಿಯೋ‌ ಬಗ್ಗೆ ಸ್ವತಃ ಟಿಕೆಟ್ ಆಕಾಂಕ್ಷಿ ಶಾಂತ್ ಕುಮಾರ್ ಮತ್ತು ಸಂದೀಪ್ ಒಂದಾಗಿ ಬಂದು ಆರೋಪವನ್ನ ತಳ್ಳಿ ಹಾಕಿದ್ದಾರೆ. ನಾನು ಕ್ಷೇತ್ರದಲ್ಲಿ ಕೆಲಸ ಮಾಡಿ ಉತ್ತಮ ಜನ ಸಂಪರ್ಕಗಳಿಸಿದ್ದೇನೆ ಜತೆಗೆ ಪ್ರಬಲ ಟಿಕೆಟ್ ಆಕಾಂಕ್ಷಿ, ಈ ರೀತಿ ನಮ್ಮ ವಿರುದ್ದ ಪಿತೂರಿ ಮಾಡಿ ಆಡಿಯೋ ಹರಿಬಿಟ್ಟಿದ್ದಾರೆ ಎಂದು ಶಾಂತ್ ಕುಮಾರ್ ತಿಳಿಸಿದ್ದಾರೆ. ಅಲ್ಲದೆ ಇದರಲ್ಲಿರುವ ಧ್ವನಿ ನಮ್ಮದಲ್ಲ ಮಿಮಿಕ್ರಿ ಮಾಡಿ ಈ ರೀತಿ ಹರಿಬಿಟ್ಟಿದ್ದು, ಈ ಬಗ್ಗೆ ದೂರು ನೀಡಿ ಹರಿಬಿಟ್ಟಿರುವವರ ವಿರುದ್ದ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತೇನೆ ಎಂದಿದ್ದಾರೆ. ಇನ್ನು ಇದೇ ವೇಳೆ ಸಂದೀಪ್ ಸಹ ನಾವಿಬ್ಬರು ಚೆನ್ನಾಗಿದ್ದೇವೆ. ನಮ್ಮ ಪಕ್ಷ ಮುಂದೆ ಗೆಲ್ಲುತ್ತೆ. ಈ ರೀತಿ ಡ್ಯಾಮೇಜ್ ಮಾಡಲು ಆಡಿಯೋ‌ ಹರಿಬಿಟ್ಟಿದ್ದಾರೆ ಎಂದು ಇಬ್ಬರು ಸಹ ಆಡಿಯೋವನ್ನ ಅಲ್ಲಗೆಳೆದಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:19 am, Tue, 6 December 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ