AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿ: ಜನರನ್ನ ಕಂಡು ಕದ್ದಿದ್ದ ದೇಗುಲದ ಹಣ ಬಿಟ್ಟು ಕಳ್ಳರು ಪರಾರಿ

ಸಿಲಿಕಾನ್​ ಸಿಟಿಯಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ. ಇದಕ್ಕೆ ಬ್ರೇಕ್​ ಹಾಕಲು ಪೊಲೀಸರು ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರು ಯಾವುದೇ ಪ್ರಯೋಜನವಾಗಿಲ್ಲ. ಅದರಂತೆ ದೇವನಹಳ್ಳಿ ತಾಲೂಕಿನ ಗೋಪಸಂದ್ರ ಗ್ರಾಮದ ಮಾರಮ್ಮ ಬಳಿಯಿರುವ ಪೂಜಮ್ಮ ದೇವಾಲಯ (Temple)ವನ್ನ ಕಳ್ಳತನ ಮಾಡಲು ಖದೀಮರು ಎಂಟ್ರಿಕೊಟ್ಟು, ಕದ್ದಿದ್ದ ಹಣವನ್ನು ಕೂಡ ಬಿಟ್ಟು ಹೋಗಿದ್ದಾರೆ.

ನವೀನ್ ಕುಮಾರ್ ಟಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Feb 07, 2024 | 3:51 PM

Share

ಬೆಂಗಳೂರು ಗ್ರಾಮಾಂತರ, ಫೆ.07: ಮಧ್ಯರಾತ್ರಿ ಬೇರೆಡೆ ದೇವಸ್ಥಾನದ ಹಣ ಕದ್ದು ದೇವನಹಳ್ಳಿ (Devanahalli) ತಾಲೂಕಿನ ಗೋಪಸಂದ್ರ ಗ್ರಾಮದ ಮಾರಮ್ಮ ಬಳಿಯಿರುವ ಪೂಜಮ್ಮ ದೇವಾಲಯ(Temple)ವನ್ನ ಕಳ್ಳತನ ಮಾಡಲು ಖದೀಮರು ಎಂಟ್ರಿಕೊಟ್ಟಿದ್ದಾರೆ. ಈ ವೇಳೆ ಜನರು ಬರುತ್ತಿದ್ದನ್ನು ಕಂಡು ಕದ್ದಿದ್ದ ದೇಗುಲದ ಬಳಿಯೇ 20 ಸಾವಿರಕ್ಕೂ ಅಧಿಕ ಹಣ ಹಾಗೂ ಚಿಲ್ಲರೆ, ಜೊತೆಗೆ ಬೈಕ್​ ಬಿಟ್ಟು ಕಳ್ಳರು ಪರಾರಿಯಾಗಿದ್ದಾರೆ. ಪಲ್ಸರ್​ ಬೈಕ್​ನಲ್ಲಿ ದೇವಸ್ಥಾನಕ್ಕೆ ಬಂದಿದ್ದ ಖದೀಮರು, ಸ್ಥಳದಲ್ಲಿಯೇ ಹಣ ಬಿಟ್ಟು ಪರಾರಿಯಾಗಿದ್ದು, ಸ್ಥಳೀಯರು ನಗದು ಹಾಗೂ ಬೈಕ್​ನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಕುರಿತು ಚನ್ನರಾಯಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಯುವಕನ ಮೇಲೆ ಚಿರತೆ ದಾಳಿ; ಕೂದಲೆಳೆ ಅಂತರಲ್ಲಿ ಪಾರಾದ ಯುವಕ

ಗದಗ: ರಾಜ್ಯದ ಕೆಲ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು ಸೇರಿದಂತೆ ಹಲವು ಕಡೆಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಜೊತೆಗೆ ಕೆಲವು ಜನ ಸಾವನ್ನಪ್ಪಿದ್ದಾರೆ. ವನ್ಯ ಜೀವಿಗಳು ನಾಡಿಗೆ ಬರದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಕೂಡ ಪ್ರಯತ್ನಿಸುತ್ತಿದ್ದಾರೆ. ಆದರೆ, ಆಗಾಗ ಚಿರತೆ, ಆನೆ, ಕರಡಿ ಸೇರಿದಂತೆ ಅನೇಕ ಪ್ರಾಣಿಗಳು ಗ್ರಾಮಕ್ಕೆ ನುಗ್ಗುತ್ತಿವೆ. ಅದರಂತೆ ಇದೀಗ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಜಿಗೇರಿ ಗ್ರಾಮದ ಬಳಿ ಯುವಕನ ಮೇಲೆ ಚಿರತೆ ದಾಳಿ ಮಾಡಿದೆ. ಸರಿಯಾಗಿ ಆತನ ಗಂಟಲು ಹಿಡಿದಿದ್ದು, ಯುವಕ ಕೂದಲೆಳೆ ಅಂತರಲ್ಲಿ ಪಾರಾಗಿದ್ದಾನೆ.

ಇದನ್ನೂ ಓದಿ:ಬೆಂಗಳೂರು: ಕಳ್ಳತನಕ್ಕಾಗಿಯೇ ಹೈದರಾಬಾದ್​ನಿಂದ ಬಂದು ಮನೆಗಳನ್ನು ದೋಚುತ್ತಿದ್ದ ಖದೀಮರು ಅರೆಸ್ಟ್

ಸ್ಥಳಕ್ಕೆ ಕಾರ್ಮಿಕರು ಓಡಿ ಬಂದಾಗ ಓಡಿ ಹೋದ ಚಿರತೆ

ಇನ್ನು ಚಿರತೆ ದಾಳಿಗೆ ಒಳಗಾದ ಜೀಗೇರಿ ಗ್ರಾಮದ 18 ವರ್ಷದ ಉದಯ ನಿಡಶೇಸಿ (18), ಶರಣಪ್ಪ ಆವಾರಿ ಎಂಬುವವರ ಜಮೀನಿನಲ್ಲಿ ಬಾಳೆಗೋಣಿ ಕತ್ತರಿಸುವಾಗ ಚಿರತೆ ದಾಳಿ ಮಾಡಿದೆ. ಗಂಟಲು, ಎದೆಗೆ ಬಾಯಿ ಹಾಕಿ ಮೈ ಹಾಗೂ ಬೆನ್ನಿನ ಮೇಲೆ ದಾಳಿ ಮಾಡಿದೆ. ಕೂಡಲೇ ಯುವಕ ಕೂಗಾಟ, ಚಿರಾಟ ನಡೆಸಿದ್ದಾನೆ. ಇದರಿಂದ ಎಚ್ಚೆತ್ತ ಇತರ ಕಾರ್ಮಿಕರು, ಸ್ಥಳಕ್ಕೆ ಓಡಿ ಬಂದಾಗ ಚಿರತೆ ಓಡಿ ಹೋಗಿದೆ. ಗಾಯಾಳು ಯುವಕನಿಗೆ ಗಜೇಂದ್ರಗಡ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಗದಗ ಜಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಉಪ ವಲಯ ಅರಣ್ಯಧಿಕಾರಿ ಪ್ರವೀಣಕುಮಾರ ಸಾಸಿವಹಳ್ಳಿ ಭೇಟಿ ನೀಡಿ ಗಾಯಾಳು ಆರೋಗ್ಯವನ್ನು ಪರೀಶಿಲಿಸಿದ್ದಾರೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:29 pm, Wed, 7 February 24

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್