AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿ: ಜನರನ್ನ ಕಂಡು ಕದ್ದಿದ್ದ ದೇಗುಲದ ಹಣ ಬಿಟ್ಟು ಕಳ್ಳರು ಪರಾರಿ

ಸಿಲಿಕಾನ್​ ಸಿಟಿಯಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ. ಇದಕ್ಕೆ ಬ್ರೇಕ್​ ಹಾಕಲು ಪೊಲೀಸರು ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರು ಯಾವುದೇ ಪ್ರಯೋಜನವಾಗಿಲ್ಲ. ಅದರಂತೆ ದೇವನಹಳ್ಳಿ ತಾಲೂಕಿನ ಗೋಪಸಂದ್ರ ಗ್ರಾಮದ ಮಾರಮ್ಮ ಬಳಿಯಿರುವ ಪೂಜಮ್ಮ ದೇವಾಲಯ (Temple)ವನ್ನ ಕಳ್ಳತನ ಮಾಡಲು ಖದೀಮರು ಎಂಟ್ರಿಕೊಟ್ಟು, ಕದ್ದಿದ್ದ ಹಣವನ್ನು ಕೂಡ ಬಿಟ್ಟು ಹೋಗಿದ್ದಾರೆ.

ನವೀನ್ ಕುಮಾರ್ ಟಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Feb 07, 2024 | 3:51 PM

Share

ಬೆಂಗಳೂರು ಗ್ರಾಮಾಂತರ, ಫೆ.07: ಮಧ್ಯರಾತ್ರಿ ಬೇರೆಡೆ ದೇವಸ್ಥಾನದ ಹಣ ಕದ್ದು ದೇವನಹಳ್ಳಿ (Devanahalli) ತಾಲೂಕಿನ ಗೋಪಸಂದ್ರ ಗ್ರಾಮದ ಮಾರಮ್ಮ ಬಳಿಯಿರುವ ಪೂಜಮ್ಮ ದೇವಾಲಯ(Temple)ವನ್ನ ಕಳ್ಳತನ ಮಾಡಲು ಖದೀಮರು ಎಂಟ್ರಿಕೊಟ್ಟಿದ್ದಾರೆ. ಈ ವೇಳೆ ಜನರು ಬರುತ್ತಿದ್ದನ್ನು ಕಂಡು ಕದ್ದಿದ್ದ ದೇಗುಲದ ಬಳಿಯೇ 20 ಸಾವಿರಕ್ಕೂ ಅಧಿಕ ಹಣ ಹಾಗೂ ಚಿಲ್ಲರೆ, ಜೊತೆಗೆ ಬೈಕ್​ ಬಿಟ್ಟು ಕಳ್ಳರು ಪರಾರಿಯಾಗಿದ್ದಾರೆ. ಪಲ್ಸರ್​ ಬೈಕ್​ನಲ್ಲಿ ದೇವಸ್ಥಾನಕ್ಕೆ ಬಂದಿದ್ದ ಖದೀಮರು, ಸ್ಥಳದಲ್ಲಿಯೇ ಹಣ ಬಿಟ್ಟು ಪರಾರಿಯಾಗಿದ್ದು, ಸ್ಥಳೀಯರು ನಗದು ಹಾಗೂ ಬೈಕ್​ನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಕುರಿತು ಚನ್ನರಾಯಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಯುವಕನ ಮೇಲೆ ಚಿರತೆ ದಾಳಿ; ಕೂದಲೆಳೆ ಅಂತರಲ್ಲಿ ಪಾರಾದ ಯುವಕ

ಗದಗ: ರಾಜ್ಯದ ಕೆಲ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು ಸೇರಿದಂತೆ ಹಲವು ಕಡೆಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಜೊತೆಗೆ ಕೆಲವು ಜನ ಸಾವನ್ನಪ್ಪಿದ್ದಾರೆ. ವನ್ಯ ಜೀವಿಗಳು ನಾಡಿಗೆ ಬರದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಕೂಡ ಪ್ರಯತ್ನಿಸುತ್ತಿದ್ದಾರೆ. ಆದರೆ, ಆಗಾಗ ಚಿರತೆ, ಆನೆ, ಕರಡಿ ಸೇರಿದಂತೆ ಅನೇಕ ಪ್ರಾಣಿಗಳು ಗ್ರಾಮಕ್ಕೆ ನುಗ್ಗುತ್ತಿವೆ. ಅದರಂತೆ ಇದೀಗ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಜಿಗೇರಿ ಗ್ರಾಮದ ಬಳಿ ಯುವಕನ ಮೇಲೆ ಚಿರತೆ ದಾಳಿ ಮಾಡಿದೆ. ಸರಿಯಾಗಿ ಆತನ ಗಂಟಲು ಹಿಡಿದಿದ್ದು, ಯುವಕ ಕೂದಲೆಳೆ ಅಂತರಲ್ಲಿ ಪಾರಾಗಿದ್ದಾನೆ.

ಇದನ್ನೂ ಓದಿ:ಬೆಂಗಳೂರು: ಕಳ್ಳತನಕ್ಕಾಗಿಯೇ ಹೈದರಾಬಾದ್​ನಿಂದ ಬಂದು ಮನೆಗಳನ್ನು ದೋಚುತ್ತಿದ್ದ ಖದೀಮರು ಅರೆಸ್ಟ್

ಸ್ಥಳಕ್ಕೆ ಕಾರ್ಮಿಕರು ಓಡಿ ಬಂದಾಗ ಓಡಿ ಹೋದ ಚಿರತೆ

ಇನ್ನು ಚಿರತೆ ದಾಳಿಗೆ ಒಳಗಾದ ಜೀಗೇರಿ ಗ್ರಾಮದ 18 ವರ್ಷದ ಉದಯ ನಿಡಶೇಸಿ (18), ಶರಣಪ್ಪ ಆವಾರಿ ಎಂಬುವವರ ಜಮೀನಿನಲ್ಲಿ ಬಾಳೆಗೋಣಿ ಕತ್ತರಿಸುವಾಗ ಚಿರತೆ ದಾಳಿ ಮಾಡಿದೆ. ಗಂಟಲು, ಎದೆಗೆ ಬಾಯಿ ಹಾಕಿ ಮೈ ಹಾಗೂ ಬೆನ್ನಿನ ಮೇಲೆ ದಾಳಿ ಮಾಡಿದೆ. ಕೂಡಲೇ ಯುವಕ ಕೂಗಾಟ, ಚಿರಾಟ ನಡೆಸಿದ್ದಾನೆ. ಇದರಿಂದ ಎಚ್ಚೆತ್ತ ಇತರ ಕಾರ್ಮಿಕರು, ಸ್ಥಳಕ್ಕೆ ಓಡಿ ಬಂದಾಗ ಚಿರತೆ ಓಡಿ ಹೋಗಿದೆ. ಗಾಯಾಳು ಯುವಕನಿಗೆ ಗಜೇಂದ್ರಗಡ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಗದಗ ಜಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಉಪ ವಲಯ ಅರಣ್ಯಧಿಕಾರಿ ಪ್ರವೀಣಕುಮಾರ ಸಾಸಿವಹಳ್ಳಿ ಭೇಟಿ ನೀಡಿ ಗಾಯಾಳು ಆರೋಗ್ಯವನ್ನು ಪರೀಶಿಲಿಸಿದ್ದಾರೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:29 pm, Wed, 7 February 24

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ