AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಿಮೆ ಬೆಲೆಗೆ ಚಿನ್ನ, ಐಫೋನ್​, ಲ್ಯಾಪ್​ ಟಾಪ್​ ಕೊಡಿಸುವುದಾಗಿ ನಂಬಿಸಿ ಲಕ್ಷ-ಲಕ್ಷ ಹಣ ದೋಚಿ ಸಿಕ್ಕಿಬಿದ್ದ ಖತರ್ನಾಕ್ ದಂಪತಿ

ಏರ್ಪೋರ್ಟ್ ಕಸ್ಟಮ್ಸ್ ಆಫೀಸರ್ ಎಂದು ಚಿನ್ನ, ಲ್ಯಾಪ್​ ಟಾಪ್, ಐಫೋನ್ ಮುಂತಾದ ಬೆಲೆ ಬಾಳುವ ವಸ್ತುಗಳನ್ನು ಅರ್ಧ ಬೆಲೆಗೆ ಕೊಡಿಸುವುದಾಗಿ ಹೇಳಿಕೊಂಡು ಜನಗಳಿಂದ ಹಣ ಪೀಕುತ್ತಿದ್ದ ಖತರ್ನಾಕ್ ದಂಪತಿಗಳನ್ನು ಬಂಧಿಸಿದ ಪೊಲೀಸರು.

ಕಡಿಮೆ ಬೆಲೆಗೆ ಚಿನ್ನ, ಐಫೋನ್​, ಲ್ಯಾಪ್​ ಟಾಪ್​ ಕೊಡಿಸುವುದಾಗಿ ನಂಬಿಸಿ ಲಕ್ಷ-ಲಕ್ಷ ಹಣ ದೋಚಿ ಸಿಕ್ಕಿಬಿದ್ದ ಖತರ್ನಾಕ್ ದಂಪತಿ
ಧನುಷ್ಯ, ದಾರ್ಬಿನ್​​ದಾಸ್
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Nov 26, 2022 | 2:47 PM

Share

ಬೆಂಗಳೂರು: ದೇವನಹಳ್ಳಿ ಏರ್ಪೋರ್ಟ್​ನಲ್ಲಿ​ಕೆಲಸ ಕೊಡಿಸುವುದಾಗಿ ಹಾಗೂ  ಕಡಿಮೆ ಬೆಲೆಗೆ ಚಿನ್ನ, ಐಫೋನ್​, ಲ್ಯಾಪ್​ ಟಾಪ್​ಗಳನ್ನು ಕೊಡಿಸುವುದಾಗಿ ನಂಬಿಸಿ ಹಣ ಪೀಕುತ್ತಿದ್ದ ಖತರ್ನಾಕ್ ದಂಪತಿ ಇದೀಗ ಪೊಲೀಸರ ಅತಿಥಿಯಾಗಿದ್ದಾರೆ. ದಾರ್ಬಿನ್​​ದಾಸ್ ಅಲಿಯಾಸ್ ಮೋಹನ್​ ದಾಸ್​, ಪತ್ನಿ ಧನುಷ್ಯ ಅಲಿಯಾಸ್ ರಾಚೆಲ್ ಬಂಧಿತ ದಂಪತಿ.  ಈ ದಂಪತಿ ಕಡಿಮೆ ಬೆಲೆಗೆ ಚಿನ್ನ, ಐಫೋನ್​, ಲ್ಯಾಪ್​ ಟಾಪ್​ಗಳನ್ನು ಕೊಡಿಸುವುದಾಗಿ ನಂಬಿಸಿ ಲಕ್ಷ-ಲಕ್ಷ ಹಣ ದೋಚಿಕೊಂಡು ಹೋಗಿದ್ದು, ನಂಬಿದವರಿಗೆ ಮಕ್ಮಲ್ ಟೋಪಿ ಹಾಕಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಪ್ರತಿಷ್ಠಿತ ಬ್ರಿಗೇಡ್ ಅರ್ಚಿಡ್ಸ್ (Brigade orchid) ಮತ್ತು ಕೊಡಿಗೇಹಳ್ಳಿ(kodigehalli) ಬಳಿಯ ಫ್ಲಾಟ್​ಗಳಲ್ಲಿ ದಾರ್ಬಿನ್​​ದಾಸ್ ಅಲಿಯಾಸ್ ಮೋಹನ್​ ದಾಸ್​, ಪತ್ನಿ ಧನುಷ್ಯ ಅಲಿಯಾಸ್ ರಾಚೆಲ್ ಎಂಬ ದಂಪತಿಗಳು ವಾಸವಾಗಿದ್ದರು. ತನ್ನ ಪತಿ ಏರ್ಪೋರ್ಟ್​​ನ ಕಸ್ಟಮ್ಸ್​ನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಅಕ್ಕ ಪಕ್ಕದ ಫ್ಲಾಟ್​ಗಳಲ್ಲಿರುವ ನಿವಾಸಿಗಳನ್ನು ಪರಿಚಯ ಮಾಡಿಕೊಳ್ಳುತ್ತಿದ್ದ,.  ಪತ್ನಿ ಧನುಷ್ಯ ಅಲಿಯಾಸ್ ರಾಚೆಲ್.  ಗಂಡನಿಗೆ ಏರ್ಪೋರ್ಟ್​ನಲ್ಲಿ ವಿದೇಶದಿಂದ ಬರುವ ಐಫೋನ್​​ಗಳು, ಕೆಜಿಗಟ್ಟಲೆ ಚಿನ್ನ ಲ್ಯಾಪ್ ಟಾಪ್​ಗಳು ಫ್ರೀಯಾಗಿ ಸಿಕ್ತಿದ್ದು, ನಿಮಗೂ ಬೇಕಾದಲ್ಲಿ ಕಡಿಮೆ ಬೆಲೆಗೆ ಕೊಡಿಸುವುದಾಗಿ ನಂಬಿಸುತ್ತಿದ್ದರು. ಅದೇ ರೀತಿ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒರ್ವ ಮಹಿಳೆ ಬಳಿ ಚಿನ್ನ ಕೊಡಿಸುವುದಾಗಿ ಹೇಳಿ 68 ಲಕ್ಷಕ್ಕೂ ಅಧಿಕ ಹಣ ಪಡೆದು ಎಸ್ಕೇಪ್​ ಆಗಿದ್ದರು.

ಸಿಲಿಕಾನ್ ಸಿಟಿಯಲ್ಲಿ ಹಲವು ಕಡೆ ಇದೇ ರೀತಿ ಮಾಡಿದ್ದ ಈ ವಂಚಕ ದಂಪತಿ ನಂತರ ದೇವನಹಳ್ಳಿ ಬಳಿಗೆ ಬಂದಿದ್ದು ಬ್ರಿಗೇಡ್ ಅಪಾರ್ಟ್ಮೆಂಟ್​ನಲ್ಲಿ ವಾಸವಾಗಿದ್ದು, ಅಲ್ಲಿಯು ನಕಲಿ ಐಡಿ ಕಾರ್ಡ್ ತೋರಿಸಿ ಜನರನ್ನು ನಂಬಿಸಿದ್ದರು. ಜೊತೆಗೆ ಪುಟ್ಟ ಮಗಳನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ಪತ್ನಿ ಅಲ್ಲಿಯೂ ಪೋಷಕರ ಜೊತೆ ಸ್ನೇಹ ಬೆಳೆಸಿ ಅವರ ಬಳಿಯು ಹೆಚ್ಚಿನ ಹಣ ವಸೂಲಿ ಮಾಡಿ ಎಸ್ಕೇಪ್ ಆಗಿದ್ದರು. ಹೀಗಾಗಿ ಕಡಿಮೆ ಬೆಲೆಗೆ ಚಿನ್ನ, ಐಪೋನ್​, ಲ್ಯಾಪ್​ ಟಾಪ್​ಗಳು ಸಿಗುತ್ತದೆ. ಎಂದು ನಂಬಿ ಲಕ್ಷ ಲಕ್ಷ ಹಣ ಕೊಟ್ಟಿದ್ದವರಿಗೆ ಮಕ್ಮಲ್ ಟೋಪಿ ಹಾಕಿದ್ದಾರೆ.

ಹಣ ಕೊಟ್ಟ ಮೇಲೆ ವಂಚನೆಯಾಗಿರುವ ವಿಚಾರ ತಿಳಿದ ಒಂದಷ್ಟು ಜನ ದೇವನಹಳ್ಳಿ ಮತ್ತು ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಖತರ್ನಾಕ್ ದಂಪತಿ ವಿರುದ್ದ ದೂರು ನೀಡಿದ್ದಾರೆ. ಹೀಗಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಇದೀಗ ಇಬ್ಬರು ಖತರ್ನಾಕ್ ವಂಚಕ ದಂಪತಿಯನ್ನು ಉಡುಪಿಯ ಪ್ರತಿಷ್ಠಿತ ಅಪಾರ್ಟ್ಮೆಂಟ್ ನಲ್ಲಿ ಬಂದಿಸಿದ್ದಾರೆ.

ಇದನ್ನೂ ಓದಿ:ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾರರ ಸೇರ್ಪಡೆ, ಡಿಲೀಟ್‌: ಮುಸ್ಲಿಂ ಹಾಗೂ ದಲಿತರೇ ಟಾರ್ಗೆಟ್

ಬಂಧಿತ ದಂಪತಿ ಆರೋಪಿಗಳಿಂದ ಈಶಾನ್ಯ ವಿಭಾಗ ಪೊಲೀಸರು 30 ಲಕ್ಷ 50 ಸಾವಿರ ನಗದು ಹಣ, 106 ಗ್ರಾಂ ತೂಕದ ಚಿನ್ನಾಭರಣ ವಶಪಡಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಇನ್ನೂ ಮುಂದೆಯಾದರೂ ಜನರು ಅರ್ಧ ಬೆಲೆಗೆ ಚಿನ್ನ ಮತ್ತು ಬೆಲೆ ಬಾಳುವ ವಸ್ತುಗಳನ್ನು ಕೊಡಿಸುತ್ತಾರೆ ಎಂದು ನಂಬುವ ಮುನ್ನ ಎಚ್ಚರವಹಿಸುವುದು ಒಳ್ಳೆಯದು.

ವರದಿ: ನವೀನ್ ಟಿವಿ9 ದೇವನಹಳ್ಳಿ

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ