AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Devanahalli: ಕಾಲೇಜಿನಲ್ಲಿ ಯುವತಿಯ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ಪಾಗಲ್ ಪ್ರೇಮಿ ಚೇತರಿಕೆ, ಕೊಲೆಗೆ ಮುನ್ನ ನಡೆದಿತ್ತು ಮಾಸ್ಟರ್ ಪ್ಲಾನ್

ಯಲಹಂಕದ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಲಯಸ್ಮಿತ ಎನ್ನುವ ಯುವತಿ ಪ್ರೀತಿಗೆ ಒಪ್ಪಲಿಲ್ಲ ಎಂದು ಕೊಲೆ ಮಾಡಿ ತಾನು ಆತ್ಮಹತ್ಯೆಗೆ ಯತ್ನಿಸಿದ್ದ ಆರೋಪಿ ಪವನ್ ಚೇತರಿಕೆ ಕಂಡಿದ್ದಾನೆ.

Devanahalli: ಕಾಲೇಜಿನಲ್ಲಿ ಯುವತಿಯ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ಪಾಗಲ್ ಪ್ರೇಮಿ ಚೇತರಿಕೆ, ಕೊಲೆಗೆ ಮುನ್ನ ನಡೆದಿತ್ತು ಮಾಸ್ಟರ್ ಪ್ಲಾನ್
ಪಾಗಲ್​ ಪ್ರೇಮಿ ಪವನ್​
TV9 Web
| Edited By: |

Updated on:Jan 04, 2023 | 12:30 PM

Share

ಬೆಂಗಳೂರು ಗ್ರಾಮಾಂತರ: ಯಲಹಂಕದ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಲಯಸ್ಮಿತ ಎನ್ನುವ ಯುವತಿಯನ್ನ ಪ್ರೀತಿಸುತ್ತಿದ್ದ ಪವನ್​ ಆಕೆ ಒಪ್ಪಲಿಲ್ಲ ಎಂಬ ಕಾರಣಕ್ಕೆ ಕೊಲೆ ಮಾಡಿದ್ದು ಜೊತೆಗೆ ತಾನು ಆತ್ಮಹತ್ಯೆಗೆ ಯತ್ನಿಸಿದ್ದ, ಕೂಡಲೇ ಪೊಲೀಸರು ಆತನನ್ನ ಬೋರಿಂಗ್ ಆಸ್ವತ್ರೆಗೆ ದಾಖಲಿಸಿದ್ದರು. ಇದೀಗ ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ಕುರಿತು ಮೃತಳ ತಾಯಿ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸದ್ಯ ದೊಡ್ಡಬಳ್ಳಾಪುರ ಉಪವಿಭಾಗದ ರಾಜಾನುಕುಂಟೆ ಠಾಣೆಯಲ್ಲಿ ಪವನ್ ಮತ್ತು ಕಾಲೇಜು ವಿರುದ್ದ ದೂರು ದಾಖಲಾಗಿದ್ದು, ಕಾಲೇಜು ಸಿಬ್ಬಂದಿ ನಿರ್ಲಕ್ಷ್ಯದಿಂದ ಕೊಲೆಯಾಗಿದೆ ಎಂದು ದೂರು ನೀಡಿದ್ದಾರೆ. ರಾಜಾನುಕುಂಟೆ ಪೊಲೀಸರು ಇದೀಗ ಪವನ್ ವಿಚಾರಣೆಗೆ ಮುಂದಾಗಿದ್ದಾರೆ. ಕೊಲೆ ಮಾಡಲೇಬೇಕು ಎಂದು ನಿರ್ಧರಿಸಿದ್ದ ಪವನ್ ಪಕ್ಕಾ ಪ್ಲಾನ್ ಮಾಡಿದ್ದ. ಪಾಗಲ್ ಪ್ರೇಮಿ ಪವನ್ ಲಯಸ್ಮಿತಾಳನ್ನ ಹುಚ್ಚನಂತೆ ಪ್ರೀತಿಸುತ್ತಿದ್ದು, ಇನ್​ಸ್ಟಾಗ್ರಾಮ್, ಫೇಸ್ಬುಕ್​ಗಳಲ್ಲಿ ಲಯಸ್ಮಿತಾಳ ಫೋಟೋವನ್ನ ವಾಲ್ ಫೇಪರ್ ಹಾಕಿದ್ದ. ಕೇವಲ ಸೋಷಿಯಲ್ ಮೀಡಿಯಾ ಮಾತ್ರವಲ್ಲ ತನ್ನ ಎದೆಯ ಮೇಲು ಲಯಸ್ಮಿತಾಳ ಹೆಸರನ್ನ ಟ್ಯಾಟೂ ಹಾಕಿಸಿದ್ದ ಪಾಗಲ್ ಪ್ರೇಮಿ. ಇನ್ನು ಈ ಕೃತ್ಯಕ್ಕೂ ಒಂದು ಗಂಟೆ ಮೊದಲು ಸೋಶಿಯಲ್ ಮೀಡಿಯಾದಲ್ಲಿದ್ದ ಎಲ್ಲಾ ಫೋಟೋಗಳನ್ನ ಡಿಲೀಟ್‌ ಮಾಡಿದ್ದಾನೆ.

ಆರೋಪಿ ಪವನ್​ಗೆ ಸಾಥ್​ ಕೊಟ್ಟರಾ ಅದೇ ಕಾಲೇಜು ವಿದ್ಯಾರ್ಥಿಗಳು

ಆರೋಪಿ ಪವನ್ ಕಲ್ಯಾಣ್​ಗೆ ಅದೇ ಕಾಲೇಜ್ ಸ್ಟೂಡೆಂಟ್ಸ್ ಸಾಥ್ ಕೊಟ್ರಾ.? ಬೇರೆ ವಿದ್ಯಾರ್ಥಿಗಳ ಐಡಿ ಕಾರ್ಡ್ ಬಳಸಿ ಕಾಲೇಜಿಗೆ ಎಂಟ್ರಿಕೊಟ್ಟಿದ್ದ ಪವನ್ ಕಲ್ಯಾಣ್. ಮಧ್ಯಾಹ್ನ 12:30 ರ ಸುಮಾರಿಗೆ ಊಟದ ಸಮಯದಲ್ಲಿ ಪ್ರೆಸಿಡೆನ್ಸಿ ಯೂನಿವರ್ಸಿಟಿಗೆ ಆಗಮಿಸಿದ್ದ ಆರೋಪಿ. ಮೊದಲಿಗೆ ಪಾರ್ಕಿಂಗ್ ಗೇಟ್ ಬಳಿ ಬೇರೊಬ್ಬ ವಿದ್ಯಾರ್ಥಿಯ ಐಡಿ ಕಾರ್ಡ್ ಪಡೆದಿದ್ದಾನೆ. ನಂತರ ನೇರವಾಗಿ ಲಯಸ್ಮಿತಾಳ ಮೊದಲ ವರ್ಷ ಬಿಇ ಕ್ಲಾಸ್ ರೂಂ ಬಳಿ ತೆರಳಿದ್ದಾನೆ. ತರಗತಿಯಲ್ಲಿದ್ದ ಲಯಸ್ಮಿತಾಳನ್ನ ಕಾರಿಡಾರ್ ಬಳಿ ಕರೆದಿರುವ ಆರೋಪಿ. ಲಯಸ್ಮಿತಾ ಬರುತ್ತಿದ್ದಂತೆ ಕತ್ತು ಎದೆ ಹೊಟ್ಟೆ ಸೇರಿ ಹತ್ತು ಕಡೆ ಚಾಕು ಇರಿದಿದ್ದಾನೆ.

ಆರೋಪಿ ಪವನ್ ಕಲ್ಯಾಣ್​ಗೆ ಐಡಿ ಕಾರ್ಡ್ ಕೊಟ್ಟವರು ಯಾರು ಎಂದು ಕಾಲೇಜಿನ ಸಿಸಿಟಿವಿ ದೃಶ್ಯಾವಳಿಯಲ್ಲಿ ಆರೋಪಿಯ ಚಲನವಲನ ಪತ್ತೆ ಹಚ್ಚುತ್ತಿದ್ದಾರೆ. ಹಾಗೂ ಸೆಕ್ಯೂರಿಟಿ ಗಾರ್ಡ್ ಸೇರಿ ಕಾಲೇಜು ಆಡಳಿತ ಮಂಡಳಿಯನ್ನ ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಬೆಂಗಳೂರಿನ ಕಾಲೇಜೊಂದರಲ್ಲಿ ಹಾಡಹಗಲೇ ಯುವತಿಗೆ ಚಾಕು ಇರಿದು ಕೊಲೆ ಮಾಡಿದ ಯುವಕ: ಪ್ರೀತಿ ಪ್ರೇಮದ ಶಂಕೆ

ಪ್ರೆಸಿಡೆನ್ಸಿ ವಿವಿ ವಿರುದ್ದ ನಾಳೆ ಬೃಹತ್‌ ಪ್ರತಿಭಟನೆ

ಪ್ರೆಸಿಡೆನ್ಸಿ ವಿಶ್ವ ವಿದ್ಯಾಲಯದಲ್ಲಿ ಪದೇ ಪದೇ ಆಗುತ್ತಿರುವ ಅಹಿತಕರ ಘಟನೆಗಳನ್ನ ತಡೆಯುವಂತೆ ಒತ್ತಾಯಿಸಿ ನಾಳೆ ಪ್ರತಿಭಟನೆ ನಡೆಸಲು ಮುಂದಾದ ಸ್ಥಳಿಯ ಸಂಘ-ಸಂಸ್ಥೆ ಮತ್ತು ಗ್ರಾಮಸ್ಥರು. ನಾಳೆ ನೂರಾರು ಸಂಖ್ಯೆಯಲ್ಲಿ ಜಮಾಯಿಸಿ ಪ್ರತಿಭಟನೆಗೆ ಅನುಮತಿ ಕೇಳಿ ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡಿಗೆ ಪತ್ರ ಕೊಡಲಾಗಿದೆ.

ಮೊನ್ನೆ ದೊಣ್ಣೆಗಳನ್ನ ಹಿಡಿದು ಹೊಡೆದಾಟ ಜೊತೆಗೆ ಕುಡಿದು ರಸ್ತೆಯಲ್ಲಿ ದಾಂದಲೆ ಸೇರಿದಂತೆ ವಿದ್ಯಾರ್ಥಿನಿ ಕೊಲೆ ಇಂತಹ ಘಟನೆಗಳು ನಡೆಯುತ್ತಿದರು ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲವೆಂದು ರಾಜಾನುಕುಂಟೆ ಪೊಲೀಸರ ವಿರುದ್ದವು ಸ್ಥಳಿಯರು ಗರಂ ಆಗಿದ್ದು, ನಾಳೆ ವಿವಿ ಮುಂದೆ ಬೃಹತ್ ಹೋರಾಟ ಮಾಡಲು ನಿರ್ಧರಿಸಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:29 pm, Wed, 4 January 23

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ