AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿ: ಸಚಿವ ಮುನಿಯಪ್ಪ ಪ್ರತಿನಿಧಿಸುವ ಕ್ಷೇತ್ರದಲ್ಲೇ ಅಂತ್ಯಸಂಸ್ಕಾರಕ್ಕೆ ಜಾಗವಿಲ್ಲ!

ಗ್ರಾಮದ ದಲಿತರು ಈ‌ ಹಿಂದಿನಿಂದ ಕೆರೆಯಂಗಳದಲ್ಲಿ ಅಂತ್ಯಸಂಸ್ಕಾರ ಮಾಡಿಕೊಂಡು ಬರ್ತಿದ್ದರು. ಆದರೆ, ಇದೀಗ ಕೆರೆಯಂಗಳ ನೀರಿನಿಂದ ಮುಳುಗಡೆಯಾದ ಹಿನ್ನೆಲೆ ಬೇರೆಡೆ ಜಾಗವಿಲ್ಲದೆ ಪರದಾಡುವಂತಾಗಿದೆ. ಈ ಮಧ್ಯೆ, ಸ್ಮಶಾನಕ್ಕೆ ಭೂಮಿ ನೀಡುವಂತೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇವನಹಳ್ಳಿ: ಸಚಿವ ಮುನಿಯಪ್ಪ ಪ್ರತಿನಿಧಿಸುವ ಕ್ಷೇತ್ರದಲ್ಲೇ ಅಂತ್ಯಸಂಸ್ಕಾರಕ್ಕೆ ಜಾಗವಿಲ್ಲ!
ಸಾಂದರ್ಭಿಕ ಚಿತ್ರ
ನವೀನ್ ಕುಮಾರ್ ಟಿ.
| Edited By: |

Updated on: Nov 17, 2023 | 3:59 PM

Share

ದೇವನಹಳ್ಳಿ, ನವೆಂಬರ್ 17: ಅಹಾರ ಸಚಿವ ಕೆಹೆಚ್ ಮುನಿಯಪ್ಪ (KH Muniyappa) ಅವರು ಪ್ರತಿನಿಧಿಸುವ ವಿಧಾನಸಭೆ ಕ್ಷೇತ್ರದಲ್ಲಿಯೇ ಅಂತ್ಯಸಂಸ್ಕಾರಕ್ಕೆ ಜಾಗವಿಲ್ಲದೆ ಪರದಾಡುವಂತಾಗಿದೆ. ಪರಿಣಾಮವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ (Devanahalli) ತಾಲೂಕಿನ ಗೋಕರೆ ಗ್ರಾಮದಲ್ಲಿ ಒಂದು ಕುಟುಂಬದವರು ರಾತ್ರಿಯಿಂದ ಶವವನ್ನು ಮನೆ ಮುಂದಿಟ್ಟುಕೊಂಡು ಕೂರುವಂತಾಗಿದೆ. ಗ್ರಾಮದ ಜಯಚಂದ್ರ (34) ಎಂಬವರು ಗುರುವಾರ ಸಂಜೆ ಮೃತಪಟ್ಟಿದ್ದರು. ಅವರು ಅನಾರೋಗ್ಯದಿಂದ ಮೃತಪಟ್ಟಿದ್ದರು.

ಗ್ರಾಮದ ದಲಿತರು ಈ‌ ಹಿಂದಿನಿಂದ ಕೆರೆಯಂಗಳದಲ್ಲಿ ಅಂತ್ಯಸಂಸ್ಕಾರ ಮಾಡಿಕೊಂಡು ಬರ್ತಿದ್ದರು. ಆದರೆ, ಇದೀಗ ಕೆರೆಯಂಗಳ ನೀರಿನಿಂದ ಮುಳುಗಡೆಯಾದ ಹಿನ್ನೆಲೆ ಬೇರೆಡೆ ಜಾಗವಿಲ್ಲದೆ ಪರದಾಡುವಂತಾಗಿದೆ.

ಈ ಮಧ್ಯೆ, ಸ್ಮಶಾನಕ್ಕೆ ಭೂಮಿ ನೀಡುವಂತೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಿನಿಂದ ಎರಡು ಮೂರು ಕಡೆ ಭೂಮಿ ತೋರಿಸಿ ನಂತರ ಅಧಿಕಾರಿಗಳೇ ತಡೆಯೊಡ್ಡಿದ್ದಾರೆ. ಹೀಗಾಗಿ ಅಂತ್ಯಸಂಸ್ಕಾರದ ಭೂಮಿಗಾಗಿ ಕುಟುಂಬಸ್ಥರು ಕಾದು ಕುಳಿತಿದ್ದಾರೆ. ಸಾವಿನ ನೋವಿನ ಜೊತೆಗೆ ಅಂತ್ಯ ಸಂಸ್ಕಾರಕ್ಕೂ ಜಾಗವಿಲ್ಲ ಅಂತ ಕುಟುಂಬಸ್ಥರು ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಐದು ವರ್ಷದಿಂದ ನೆನೆಗುಂದಿಗೆ ಬಿದ್ದ ಏರ್ಪೋಟ್ ಪರ್ಯಾಯ ರಸ್ತೆ: ರಸ್ತೆ ಕಾಮಗಾರಿ ಮುಗಿಸದ ಅಧಿಕಾರಿಗಳಿಗೆ ಗ್ರಾಮಸ್ಥರ ತರಾಟೆ

ದೇವನಹಳ್ಳಿಯಲ್ಲಿ ಅಭಿವೃದ್ಧಿಚಟುವಟಿಕೆಗಳಾಗದಿರುವ ಬಗ್ಗೆ, ಮೂಲಸೌಕರ್ಯ ಕೊರತೆ ಬಗ್ಗೆ ಈ ಹಿಂದೆಯೂ ಹಲವು ಬಾರಿ ಜನ ಪ್ರತಿಭಟನೆ ನಡೆಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಸಿಲ್ಕ್ ಬೋರ್ಡ್ ಕಡೆಯಿಂದ ಕೆಂಪೇಗೌಡ ಏರ್ಪೋಟ್​​ ಸಂಪರ್ಕ ಕಲ್ಪಿಸೋ ಪರ್ಯಾಯ ರಸ್ತೆಗೆ ಐದು ವರ್ಷಗಳ ಹಿಂದೆಯೇ ಸರ್ಕಾರ ಕೋಟ್ಯಂತರ ರೂ. ಹಣ ಬಿಡುಗಡೆ ಮಾಡಿದ್ದರೂ ಕಾಮಗಾರಿ ಪೂರ್ಣವಾಗದ ಬಗ್ಗೆ ಕೆಲ ದಿನಗಳ ಹಿಂದೆ ದೇವನಹಳ್ಳಿಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಸಚಿವರ ಜಿಲ್ಲೆಯಲ್ಲೇ ಈ ರೀತಿ ಆಗಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ