Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿ: ಸಚಿವ ಮುನಿಯಪ್ಪ ಪ್ರತಿನಿಧಿಸುವ ಕ್ಷೇತ್ರದಲ್ಲೇ ಅಂತ್ಯಸಂಸ್ಕಾರಕ್ಕೆ ಜಾಗವಿಲ್ಲ!

ಗ್ರಾಮದ ದಲಿತರು ಈ‌ ಹಿಂದಿನಿಂದ ಕೆರೆಯಂಗಳದಲ್ಲಿ ಅಂತ್ಯಸಂಸ್ಕಾರ ಮಾಡಿಕೊಂಡು ಬರ್ತಿದ್ದರು. ಆದರೆ, ಇದೀಗ ಕೆರೆಯಂಗಳ ನೀರಿನಿಂದ ಮುಳುಗಡೆಯಾದ ಹಿನ್ನೆಲೆ ಬೇರೆಡೆ ಜಾಗವಿಲ್ಲದೆ ಪರದಾಡುವಂತಾಗಿದೆ. ಈ ಮಧ್ಯೆ, ಸ್ಮಶಾನಕ್ಕೆ ಭೂಮಿ ನೀಡುವಂತೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇವನಹಳ್ಳಿ: ಸಚಿವ ಮುನಿಯಪ್ಪ ಪ್ರತಿನಿಧಿಸುವ ಕ್ಷೇತ್ರದಲ್ಲೇ ಅಂತ್ಯಸಂಸ್ಕಾರಕ್ಕೆ ಜಾಗವಿಲ್ಲ!
ಸಾಂದರ್ಭಿಕ ಚಿತ್ರ
Follow us
ನವೀನ್ ಕುಮಾರ್ ಟಿ
| Updated By: Ganapathi Sharma

Updated on: Nov 17, 2023 | 3:59 PM

ದೇವನಹಳ್ಳಿ, ನವೆಂಬರ್ 17: ಅಹಾರ ಸಚಿವ ಕೆಹೆಚ್ ಮುನಿಯಪ್ಪ (KH Muniyappa) ಅವರು ಪ್ರತಿನಿಧಿಸುವ ವಿಧಾನಸಭೆ ಕ್ಷೇತ್ರದಲ್ಲಿಯೇ ಅಂತ್ಯಸಂಸ್ಕಾರಕ್ಕೆ ಜಾಗವಿಲ್ಲದೆ ಪರದಾಡುವಂತಾಗಿದೆ. ಪರಿಣಾಮವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ (Devanahalli) ತಾಲೂಕಿನ ಗೋಕರೆ ಗ್ರಾಮದಲ್ಲಿ ಒಂದು ಕುಟುಂಬದವರು ರಾತ್ರಿಯಿಂದ ಶವವನ್ನು ಮನೆ ಮುಂದಿಟ್ಟುಕೊಂಡು ಕೂರುವಂತಾಗಿದೆ. ಗ್ರಾಮದ ಜಯಚಂದ್ರ (34) ಎಂಬವರು ಗುರುವಾರ ಸಂಜೆ ಮೃತಪಟ್ಟಿದ್ದರು. ಅವರು ಅನಾರೋಗ್ಯದಿಂದ ಮೃತಪಟ್ಟಿದ್ದರು.

ಗ್ರಾಮದ ದಲಿತರು ಈ‌ ಹಿಂದಿನಿಂದ ಕೆರೆಯಂಗಳದಲ್ಲಿ ಅಂತ್ಯಸಂಸ್ಕಾರ ಮಾಡಿಕೊಂಡು ಬರ್ತಿದ್ದರು. ಆದರೆ, ಇದೀಗ ಕೆರೆಯಂಗಳ ನೀರಿನಿಂದ ಮುಳುಗಡೆಯಾದ ಹಿನ್ನೆಲೆ ಬೇರೆಡೆ ಜಾಗವಿಲ್ಲದೆ ಪರದಾಡುವಂತಾಗಿದೆ.

ಈ ಮಧ್ಯೆ, ಸ್ಮಶಾನಕ್ಕೆ ಭೂಮಿ ನೀಡುವಂತೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಿನಿಂದ ಎರಡು ಮೂರು ಕಡೆ ಭೂಮಿ ತೋರಿಸಿ ನಂತರ ಅಧಿಕಾರಿಗಳೇ ತಡೆಯೊಡ್ಡಿದ್ದಾರೆ. ಹೀಗಾಗಿ ಅಂತ್ಯಸಂಸ್ಕಾರದ ಭೂಮಿಗಾಗಿ ಕುಟುಂಬಸ್ಥರು ಕಾದು ಕುಳಿತಿದ್ದಾರೆ. ಸಾವಿನ ನೋವಿನ ಜೊತೆಗೆ ಅಂತ್ಯ ಸಂಸ್ಕಾರಕ್ಕೂ ಜಾಗವಿಲ್ಲ ಅಂತ ಕುಟುಂಬಸ್ಥರು ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಐದು ವರ್ಷದಿಂದ ನೆನೆಗುಂದಿಗೆ ಬಿದ್ದ ಏರ್ಪೋಟ್ ಪರ್ಯಾಯ ರಸ್ತೆ: ರಸ್ತೆ ಕಾಮಗಾರಿ ಮುಗಿಸದ ಅಧಿಕಾರಿಗಳಿಗೆ ಗ್ರಾಮಸ್ಥರ ತರಾಟೆ

ದೇವನಹಳ್ಳಿಯಲ್ಲಿ ಅಭಿವೃದ್ಧಿಚಟುವಟಿಕೆಗಳಾಗದಿರುವ ಬಗ್ಗೆ, ಮೂಲಸೌಕರ್ಯ ಕೊರತೆ ಬಗ್ಗೆ ಈ ಹಿಂದೆಯೂ ಹಲವು ಬಾರಿ ಜನ ಪ್ರತಿಭಟನೆ ನಡೆಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಸಿಲ್ಕ್ ಬೋರ್ಡ್ ಕಡೆಯಿಂದ ಕೆಂಪೇಗೌಡ ಏರ್ಪೋಟ್​​ ಸಂಪರ್ಕ ಕಲ್ಪಿಸೋ ಪರ್ಯಾಯ ರಸ್ತೆಗೆ ಐದು ವರ್ಷಗಳ ಹಿಂದೆಯೇ ಸರ್ಕಾರ ಕೋಟ್ಯಂತರ ರೂ. ಹಣ ಬಿಡುಗಡೆ ಮಾಡಿದ್ದರೂ ಕಾಮಗಾರಿ ಪೂರ್ಣವಾಗದ ಬಗ್ಗೆ ಕೆಲ ದಿನಗಳ ಹಿಂದೆ ದೇವನಹಳ್ಳಿಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಸಚಿವರ ಜಿಲ್ಲೆಯಲ್ಲೇ ಈ ರೀತಿ ಆಗಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಏರ್ ಕಂಪ್ರೆಸರ್ ಬ್ರೇಕ್​ಗಳು ಏರ್ ಲೀಕಾಗುತ್ತಿದ್ದರೆ ಬ್ರೇಕ್ ಹತ್ತಲ್ಲ?
ಏರ್ ಕಂಪ್ರೆಸರ್ ಬ್ರೇಕ್​ಗಳು ಏರ್ ಲೀಕಾಗುತ್ತಿದ್ದರೆ ಬ್ರೇಕ್ ಹತ್ತಲ್ಲ?
ಕೊಲೆ ಆರೋಪಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಾತಿಥ್ಯ
ಕೊಲೆ ಆರೋಪಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಾತಿಥ್ಯ
ತೆಲಂಗಾಣದಲ್ಲಿ ನಿರ್ಮಾಣ ಹಂತದ ಆರು ಅಂತಸ್ತಿನ ಕಟ್ಟಡ ಕುಸಿತ
ತೆಲಂಗಾಣದಲ್ಲಿ ನಿರ್ಮಾಣ ಹಂತದ ಆರು ಅಂತಸ್ತಿನ ಕಟ್ಟಡ ಕುಸಿತ