AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿ: ಸಚಿವ ಮುನಿಯಪ್ಪ ಪ್ರತಿನಿಧಿಸುವ ಕ್ಷೇತ್ರದಲ್ಲೇ ಅಂತ್ಯಸಂಸ್ಕಾರಕ್ಕೆ ಜಾಗವಿಲ್ಲ!

ಗ್ರಾಮದ ದಲಿತರು ಈ‌ ಹಿಂದಿನಿಂದ ಕೆರೆಯಂಗಳದಲ್ಲಿ ಅಂತ್ಯಸಂಸ್ಕಾರ ಮಾಡಿಕೊಂಡು ಬರ್ತಿದ್ದರು. ಆದರೆ, ಇದೀಗ ಕೆರೆಯಂಗಳ ನೀರಿನಿಂದ ಮುಳುಗಡೆಯಾದ ಹಿನ್ನೆಲೆ ಬೇರೆಡೆ ಜಾಗವಿಲ್ಲದೆ ಪರದಾಡುವಂತಾಗಿದೆ. ಈ ಮಧ್ಯೆ, ಸ್ಮಶಾನಕ್ಕೆ ಭೂಮಿ ನೀಡುವಂತೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇವನಹಳ್ಳಿ: ಸಚಿವ ಮುನಿಯಪ್ಪ ಪ್ರತಿನಿಧಿಸುವ ಕ್ಷೇತ್ರದಲ್ಲೇ ಅಂತ್ಯಸಂಸ್ಕಾರಕ್ಕೆ ಜಾಗವಿಲ್ಲ!
ಸಾಂದರ್ಭಿಕ ಚಿತ್ರ
ನವೀನ್ ಕುಮಾರ್ ಟಿ
| Edited By: |

Updated on: Nov 17, 2023 | 3:59 PM

Share

ದೇವನಹಳ್ಳಿ, ನವೆಂಬರ್ 17: ಅಹಾರ ಸಚಿವ ಕೆಹೆಚ್ ಮುನಿಯಪ್ಪ (KH Muniyappa) ಅವರು ಪ್ರತಿನಿಧಿಸುವ ವಿಧಾನಸಭೆ ಕ್ಷೇತ್ರದಲ್ಲಿಯೇ ಅಂತ್ಯಸಂಸ್ಕಾರಕ್ಕೆ ಜಾಗವಿಲ್ಲದೆ ಪರದಾಡುವಂತಾಗಿದೆ. ಪರಿಣಾಮವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ (Devanahalli) ತಾಲೂಕಿನ ಗೋಕರೆ ಗ್ರಾಮದಲ್ಲಿ ಒಂದು ಕುಟುಂಬದವರು ರಾತ್ರಿಯಿಂದ ಶವವನ್ನು ಮನೆ ಮುಂದಿಟ್ಟುಕೊಂಡು ಕೂರುವಂತಾಗಿದೆ. ಗ್ರಾಮದ ಜಯಚಂದ್ರ (34) ಎಂಬವರು ಗುರುವಾರ ಸಂಜೆ ಮೃತಪಟ್ಟಿದ್ದರು. ಅವರು ಅನಾರೋಗ್ಯದಿಂದ ಮೃತಪಟ್ಟಿದ್ದರು.

ಗ್ರಾಮದ ದಲಿತರು ಈ‌ ಹಿಂದಿನಿಂದ ಕೆರೆಯಂಗಳದಲ್ಲಿ ಅಂತ್ಯಸಂಸ್ಕಾರ ಮಾಡಿಕೊಂಡು ಬರ್ತಿದ್ದರು. ಆದರೆ, ಇದೀಗ ಕೆರೆಯಂಗಳ ನೀರಿನಿಂದ ಮುಳುಗಡೆಯಾದ ಹಿನ್ನೆಲೆ ಬೇರೆಡೆ ಜಾಗವಿಲ್ಲದೆ ಪರದಾಡುವಂತಾಗಿದೆ.

ಈ ಮಧ್ಯೆ, ಸ್ಮಶಾನಕ್ಕೆ ಭೂಮಿ ನೀಡುವಂತೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಿನಿಂದ ಎರಡು ಮೂರು ಕಡೆ ಭೂಮಿ ತೋರಿಸಿ ನಂತರ ಅಧಿಕಾರಿಗಳೇ ತಡೆಯೊಡ್ಡಿದ್ದಾರೆ. ಹೀಗಾಗಿ ಅಂತ್ಯಸಂಸ್ಕಾರದ ಭೂಮಿಗಾಗಿ ಕುಟುಂಬಸ್ಥರು ಕಾದು ಕುಳಿತಿದ್ದಾರೆ. ಸಾವಿನ ನೋವಿನ ಜೊತೆಗೆ ಅಂತ್ಯ ಸಂಸ್ಕಾರಕ್ಕೂ ಜಾಗವಿಲ್ಲ ಅಂತ ಕುಟುಂಬಸ್ಥರು ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಐದು ವರ್ಷದಿಂದ ನೆನೆಗುಂದಿಗೆ ಬಿದ್ದ ಏರ್ಪೋಟ್ ಪರ್ಯಾಯ ರಸ್ತೆ: ರಸ್ತೆ ಕಾಮಗಾರಿ ಮುಗಿಸದ ಅಧಿಕಾರಿಗಳಿಗೆ ಗ್ರಾಮಸ್ಥರ ತರಾಟೆ

ದೇವನಹಳ್ಳಿಯಲ್ಲಿ ಅಭಿವೃದ್ಧಿಚಟುವಟಿಕೆಗಳಾಗದಿರುವ ಬಗ್ಗೆ, ಮೂಲಸೌಕರ್ಯ ಕೊರತೆ ಬಗ್ಗೆ ಈ ಹಿಂದೆಯೂ ಹಲವು ಬಾರಿ ಜನ ಪ್ರತಿಭಟನೆ ನಡೆಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಸಿಲ್ಕ್ ಬೋರ್ಡ್ ಕಡೆಯಿಂದ ಕೆಂಪೇಗೌಡ ಏರ್ಪೋಟ್​​ ಸಂಪರ್ಕ ಕಲ್ಪಿಸೋ ಪರ್ಯಾಯ ರಸ್ತೆಗೆ ಐದು ವರ್ಷಗಳ ಹಿಂದೆಯೇ ಸರ್ಕಾರ ಕೋಟ್ಯಂತರ ರೂ. ಹಣ ಬಿಡುಗಡೆ ಮಾಡಿದ್ದರೂ ಕಾಮಗಾರಿ ಪೂರ್ಣವಾಗದ ಬಗ್ಗೆ ಕೆಲ ದಿನಗಳ ಹಿಂದೆ ದೇವನಹಳ್ಳಿಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಸಚಿವರ ಜಿಲ್ಲೆಯಲ್ಲೇ ಈ ರೀತಿ ಆಗಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More