AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಹೆಚ್​ ಮುನಿಯಪ್ಪಗೆ ದೇವನಹಳ್ಳಿ ಟಿಕೆಟ್; ಮತ್ತಷ್ಟು ಭುಗಿಲೆದ್ದ ಅಸಮಾಧಾನ, ಕೈ ನಾಯಕರಿಂದ ಮನವೊಲಿಸೋ ಯತ್ನ

ಮಾಜಿ ಕೆಂದ್ರ ಸಚಿವ ಕೆ.ಹೆಚ್. ಮುನಿಯಪ್ಪರಿಗೆ ದೇವನಹಳ್ಳಿ ಕ್ಷೇತ್ರದ ಟಿಕೆಟ್ ಘೋಷಣೆ ಮಾಡಲಾಗಿದೆ. ವಿರೋಧದ ನಡುವೆಯೂ ಟಿಕೆಟ್ ನೀಡಿದ ಹಿನ್ನೆಲೆ ಅಸಮಾಧಾನ ಮತ್ತಷ್ಟು ಭುಗಿಲೆದ್ದಿದೆ.

ಕೆಹೆಚ್​ ಮುನಿಯಪ್ಪಗೆ ದೇವನಹಳ್ಳಿ ಟಿಕೆಟ್; ಮತ್ತಷ್ಟು ಭುಗಿಲೆದ್ದ ಅಸಮಾಧಾನ, ಕೈ ನಾಯಕರಿಂದ ಮನವೊಲಿಸೋ ಯತ್ನ
ಕೆಹೆಚ್​ ಮುನಿಯಪ್ಪ
ಆಯೇಷಾ ಬಾನು
|

Updated on: Mar 25, 2023 | 11:08 AM

Share

ದೇವನಹಳ್ಳಿ: ರಾಜ್ಯ ವಿಧಾನಸಭೆ ಚುನಾವಣೆಗೆ(Karnataka Assembly Elections 2023) ಕಾಂಗ್ರೆಸ್ (Congress) ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಎಐಸಿಸಿ(AICC) ಇಂದು (ಮಾರ್ಚ್ 25) ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಮಾಜಿ ಕೆಂದ್ರ ಸಚಿವ ಕೆ.ಹೆಚ್. ಮುನಿಯಪ್ಪರಿಗೆ(KH Muniyappa) ದೇವನಹಳ್ಳಿ ಕ್ಷೇತ್ರದ ಟಿಕೆಟ್ ಘೋಷಣೆ ಮಾಡಲಾಗಿದೆ. ವಿರೋಧದ ನಡುವೆಯೂ ಟಿಕೆಟ್ ನೀಡಿದ ಹಿನ್ನೆಲೆ ಅಸಮಾಧಾನ ಮತ್ತಷ್ಟು ಭುಗಿಲೆದ್ದಿದೆ. ಪರ-ವಿರೋಧವೆಂದು ಎರಡು ಗುಂಪುಗಳಾಗಿದ್ದ ಸ್ಥಳೀಯ ಮುಖಂಡರಲ್ಲಿ ಮತ್ತಷ್ಟು ಭಿನ್ನಮತ ಸ್ಫೋಟಗೊಂಡಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಟಿಕೆಟನ್ನು ಕೆಹೆಚ್ ಮುನಿಯಪ್ಪಗೆ ನೀಡಲಾಗಿದೆ. ಈ ಹಿನ್ನೆಲೆ ಮತ್ತಷ್ಟು ಕಿಚ್ಚು ಹೆಚ್ಚಾಗಿದೆ. ಎರಡು ದಿನಗಳ ಹಿಂದೆ ಕೆಹೆಚ್​ ಮುನಿಯಪ್ಪರಿಗೆ ಟಿಕೆಟ್ ನೀಡದಂತೆ ಸ್ಥಳೀಯ ಮುಖಂಡರು ರಾಜೀನಾಮೆ ಪತ್ರ ನೀಡಿದ್ದರು. ಆದ್ರೆ ಈಗ ಹೈಕಮಾಂಡ್ ಟಿಕೆಟ್ ಘೋಷಿಸಿದೆ. ಹೀಗಾಗಿ ಮುಖಂಡರು ಮತ್ತಷ್ಟು ಅಸಮಾಧಾನಗೊಂಡಿದ್ದು ಇಂದು ಅಸಮಾಧಾನಿತರ ಸಭೆ ನಡೆಸಿ ಕೆಲವು ತೀರ್ಮಾನ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಸದ್ಯ ಕೈ‌ ನಾಯಕರು ಕರೆ ಮಾಡಿ ಮನವೊಲಿಸುವ ಯತ್ನ‌ ಮಾಡಿದ್ದಾರೆ. ಭಿನ್ನಮತ ಶಮನಗೊಳಿಸಿ ಕೆಹಚ್ ಮುನಿಯಪ್ಪ ಪರ ಕೆಲಸ‌ ಮಾಡುವಂತೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ರಾಜ್ಯ ರಾಜಕಾರಣಕ್ಕೆ ಮರಳಲು ಕಸರತ್ತು ನಡೆಸಿರುವ ಮುನಿಯಪ್ಪಗೆ ಶಾಕ್, ದೇವನಹಳ್ಳಿ ಕಾಂಗ್ರೆಸ್​ನಲ್ಲಿ ಸಾಮೂಹಿಕ ರಾಜೀನಾಮೆ

ದೇವನಹಳ್ಳಿ ಕಾಂಗ್ರೆಸ್​ನಲ್ಲಿ ಭಿನ್ನಮತ ಸ್ಫೋಟ

ಕಾಂಗ್ರೆಸ್ ಪಟ್ಟಿ ಬಿಡುಗಡೆಗೂ ಮುನ್ನವೇ ಕೆಹೆಚ್​ ಮುನಿಯಪ್ಪರಿಗೆ ಟಿಕೆಟ್ ಫೈನಲ್ ಆಗಿದೆ ಎಂಬ ಸುದ್ದಿ ಹರಿದಾಡುತ್ತಿತ್ತು. ಈ ಸುದ್ದಿ ಸಿಗುತ್ತಿದ್ದಂತೆ ಮುನಿಯಪ್ಪ ಟಿಕೆಟ್ ಸಂಬಂಧ ದೇವನಹಳ್ಳಿ ಕಾಂಗ್ರೆಸ್ ಮುಖಂಡರಲ್ಲಿ ಭಿನ್ನಮತ ಸ್ಪೋಟಗೊಂಡಿತ್ತು. ಟಿಕೆಟ್ ನೀಡಬೇಕು ಎಂದು ಒಂದು ಗುಂಪು ನಿಂತರೆ, ಮತ್ತೊಂದು ಗುಂಪು ಟಿಕೆಟ್ ನೀಡಬಾರದು ಎಂದು ಸಾಮೂಹಿಕ ರಾಜೀನಾಮೆ ನೀಡಿತ್ತು.

ಮಾರ್ಚ್ 23ರಂದು ಮಾಜಿ ಕೇಂದ್ರ ಸಚಿವ ಕೆಹೆಚ್ ಮುನಿಯಪ್ಪಗೆ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಟಿಕೆಟ್ ನೀಡದಂತೆ ಒಂದು ಬಣ ಸಾಮೂಹಿಕ ರಾಜಿನಾಮೆ ನೀಡಿತ್ತು. ಈ ಬೆನ್ನಲ್ಲೆ ಕಾಂಗ್ರೆಸ್​ನ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ರಾಜಣ್ಣ ನೇತೃತ್ವದ ಗುಂಪು ಮುನಿಯಪ್ಪ ಪರ ಬ್ಯಾಟ್ ಬೀಸಿ ದೇವನಹಳ್ಳಿ ಟಿಕೆಟ್ ಕೆ.ಹೆಚ್ ಮುನಿಯಪ್ಪಗೆ ನೀಡಿದ್ರೆ ಗೆಲ್ಲಲಿದೆ ಅಂತ ವಿರೋಧಿ ಬಣಕ್ಕೆ ಟಾಂಗ್ ನೀಡಿತ್ತು. ಸದ್ಯ ಟಿಕೆಟ್ ಘೋಷಣೆಯಾಗಿದ್ದು ಪರ ಬಣ ಖುಷ್ ಆಗಿದ್ದು ವಿರೋಧ ಬಣ ಮತ್ತಷ್ಟು ಅಸಮಾಧಾನಗೊಂಡಿದೆ. ಈ ಹಿನ್ನೆಲೆ ಅಸಮಾಧಾನಗೊಂಡ ದೇವನಹಳ್ಳಿ ಕಾಂಗ್ರೆಸ್ ಮುಖಂಡರಿಗೆ ಕೈ ನಾಯಕರು ಕರೆ ಮಾಡಿ ಮನವೊಲಿಸುವ ಯತ್ನ ಮಾಡಿದ್ದಾರೆ. ಈಗ ಏನು ಮಾಡಲು ಆಗೊಲ್ಲ. ಎಲ್ಲವನ್ನೂ ಮರೆತು ಮುನಿಯಪ್ಪರಿಗೆ ಬೆಂಬಲ ನೀಡಿ. ಚುನಾವಣೆಯಲ್ಲಿ ನಮ್ಮ ಗೆಲುವು ಮುಖ್ಯ ಎಂದು ಸೂಚಿಸಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು