AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂತ್ರ ವಿಸರ್ಜನೆಗೆಂದು ಹೋದ ವ್ಯಕ್ತಿಗೆ ಕಂಡದ್ದು ಮಹಿಳೆಯ ಶವ: ಡಿಸಿಪಿ ಹೇಳಿದ್ದೇನು?

ಬೆಂಗಳೂರು ಗ್ರಾಮಾಂತರದ ದೇವನಹಳ್ಳಿಯಲ್ಲಿ ಒಂದು ಅಮಾನವೀಯ ಕೃತ್ಯ ನಡೆದಿದೆ. ಚರಂಡಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿರುವಂತಹ ಘಟನೆ ನಡೆದಿದೆ. ಕತ್ತು ಕೊಯ್ದು, ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಮೃತದೇಹವನ್ನು ಬೇರೆಡೆ ಕೊಲೆ ಮಾಡಿ ತಂದು ಬಿಸಾಕಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂತ್ರ ವಿಸರ್ಜನೆಗೆಂದು ಹೋದ ವ್ಯಕ್ತಿಗೆ ಕಂಡದ್ದು ಮಹಿಳೆಯ ಶವ: ಡಿಸಿಪಿ ಹೇಳಿದ್ದೇನು?
ಚರಂಡಿಯಲ್ಲಿ ಮಹಿಳೆಯ ಶವ ಪತ್ತೆ
ನವೀನ್ ಕುಮಾರ್ ಟಿ
| Edited By: |

Updated on: Feb 25, 2026 | 3:11 PM

Share

ದೇವನಹಳ್ಳಿ, ಫೆಬ್ರವರಿ 25: ರಸ್ತೆ ಬದಿಯ ಚರಂಡಿಯಲ್ಲಿ ಕತ್ತು ಕೊಯ್ದು ಸುಟ್ಟು ಹಾಕಿದ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ (40) ಶವ (dead body) ಪತ್ತೆ ಆಗಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ (Devanahalli) ಪಟ್ಟಣದ ಸ್ವರ್ಣಾರ್ಧಿ ಹೋಟೆಲ್ ಬಳಿ ಚರಂಡಿಯಲ್ಲಿ ನಡೆದಿದೆ. ಹಂತಕರು ಬೇರೆಡೆ ಕೊಂದು ರಾತ್ರಿ ವೇಳೆ ಶವ ತಂದು ಬಿಸಾಕಿದ್ದು, ನಾಲ್ಕೈದು ದಿನಗಳ ಹಿಂದೆ ಮಹಿಳೆಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ. ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಗ್ಗೆ ಮೂತ್ರ ವಿಸರ್ಜನೆಗೆ ಹೋಗಿದ್ದ ವ್ಯಕ್ತಿಯ ಕಣ್ಣಿಗೆ ಶವ ಕಾಣಿಸಿದೆ. ಕೂಡಲೇ ದೇವನಹಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸೋಕೋ ತಂಡದಿಂದ ಸ್ಥಳ ಪರಿಶೀಲನೆ ನಡೆಸಿ ಸದ್ಯ ಮೃತದೇಹವನ್ನು ದೇವನಹಳ್ಳಿ ತಾಲೂಕು ಆಸ್ಪತ್ರೆಯ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ.

ಈಶಾನ್ಯ ವಿಭಾಗ ಡಿಸಿಪಿ ಮಿಥುನ್ ಕುಮಾರ್ ಹೇಳಿದ್ದಿಷ್ಟು 

ಘಟನೆ ಬಗ್ಗೆ  ಟಿವಿ9ಗೆ ಈಶಾನ್ಯ ವಿಭಾಗ ಡಿಸಿಪಿ ಮಿಥುನ್ ಕುಮಾರ್ ಪ್ರತಿಕ್ರಿಯಿಸಿದ್ದು, ಅಪರಿಚಿತ ಹೆಣ್ಣು ಮಗಳ ಶವ ಪತ್ತೆಯಾಗಿದೆ. ಮೇಲ್ನೋಟಕ್ಕೆ ಕೊಲೆ ಮಾಡಿ ಬಿಸಾಕಿದ್ದಾರೆ. ಡ್ರೈನೆಜ್​ನಲ್ಲಿ ಚಾಕುನಿಂದ ಇರಿದು ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಸುಮಾರು 30 ರಿಂದ 35 ವರ್ಷದ ಮಹಿಳೆ ಇರಬಹುದು ಎಂದರು.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಯ ಕೊಲೆ: ಅಸಲಿಗೆ ಅಲ್ಲಿ ನಡೆದಿದ್ದೇನು ಗೊತ್ತೇ? ಆಘಾತಕಾರಿ ಮಾಹಿತಿ ಬಯಲು

ಒಂದೆರಡು ದಿನದ ಹಿಂದೆ ಕೊಲೆ ಮಾಡಿರಬಹುದು. ಕೊಲೆ ಯಾರು ಮಾಡಿದ್ದಾರೆ ಅನ್ನೋದು ಗೊತ್ತಾಗಿಲ್ಲ. ಸುತ್ತಾಮುತ್ತ ಸಿಸಿ ಕ್ಯಾಮರಾಗಳು ಇವೆ. ಎಲ್ಲವನ್ನೂ ಪರಿಶೀಲನೆ ಮಾಡಿ ಕ್ರಮಕೈಗೊಳ್ಳುತ್ತೇವೆ ಎಂದು ಈಶಾನ್ಯ ವಿಭಾಗ ಡಿಸಿಪಿ ಮಿಥುನ್ ಕುಮಾರ್ ಹೇಳಿದ್ದಾರೆ.

ಮರಕ್ಕೆ ಬುಲೆಟ್ ಬೈಕ್ ಡಿಕ್ಕಿ: ಇಬ್ಬರು ಸವಾರರ ಸಾವು

ಮರಕ್ಕೆ ಬುಲೆಟ್ ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರು ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರಿನ ಯಲಹಂಕ ನ್ಯೂಟೌನ್​ನ ಉನ್ನಿಕೃಷ್ಣನ್ ಜಂಕ್ಷನ್​​ನಲ್ಲಿ ನಡೆದಿದೆ. ಕಿರಣ್(25) ಮತ್ತು ಯಶವಂತ್(25) ಮೃತರು. ಯಲಹಂಕ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕಲ್ಯಾಣ ಮಂಟಪದಲ್ಲೇ ಹೃದಯಾಘಾತದಿಂದ ಕುಸಿದುಬಿದ್ದು ಫೋಟೊಗ್ರಾಫರ್ ಸಾವು!

ಹೆಲ್ಮೆಟ್ ಧರಿಸದೆ ಬುಲೆಟ್ ಬೈಕ್​ನಲ್ಲಿ ಮೂವರು ಯುವಕರು ತೆರಳುತ್ತಿದ್ದರು. ಈ ವೇಳೆ ಮರಕ್ಕೆ ಬೈಕ್ ಡಿಕ್ಕಿಯಾಗಿ ಪಲ್ಟಿ ಹೊಡೆದಿದ್ದು, ಕಿರಣ್ ಸ್ಥಳದಲ್ಲೇ ಸಾವನ್ನಪ್ಪಿದರೆ, ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಯಶವಂತ್ ಸಾವನ್ನಪ್ಪಿದ್ದಾರೆ. ಗೌತಮ್ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More