AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನೇಹಿತನಿಗೆ ಡ್ರಾಪ್ ಕೊಡಲು ನಕಲಿ ಟಿಕೆಟ್​​ ಬಳಕೆ: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಸಿಕ್ಕಿಬಿದ್ದ ಮಹಿಳೆ

ಸ್ನೇಹಿತನನ್ನ ಏರ್‌ಪೋರ್ಟ್‌​ನಲ್ಲಿ ಡ್ರಾಪ್ ಕೊಡಲು ಬಂದಿದ್ದ ಯುವತಿಯೋರ್ವಳು ಖತರ್ನಾಕ್ ಐಡಿಯಾ ಮಾಡಿ ಇದೀಗ ಪೊಲೀಸರ ಕೈಗೆ ಸಿಕ್ಕಿ ಬಿದ್ದಿರುವಂತಹ ಘಟನೆ ಕೆಂಪೇಗೌಡ ಏರ್‌ಪೋರ್ಟ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ ಅಕ್ರಮವಾಗಿ ಟರ್ಮಿನಲ್ ಒಳಗಡೆ ಪ್ರವೇಶಿಸಿದ ಆರೋಪದಡಿ ಏರ್‌ಪೋರ್ಟ್‌ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ಸ್ನೇಹಿತನಿಗೆ ಡ್ರಾಪ್ ಕೊಡಲು ನಕಲಿ ಟಿಕೆಟ್​​ ಬಳಕೆ: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಸಿಕ್ಕಿಬಿದ್ದ ಮಹಿಳೆ
ಕೆಂಪೇಗೌಡ ಏರ್ಪೋರ್ಟ್
ನವೀನ್ ಕುಮಾರ್ ಟಿ
| Edited By: |

Updated on:Nov 27, 2023 | 11:38 AM

Share

ದೇವನಹಳ್ಳಿ, ನವೆಂಬರ್​​ 27: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (Kempegowda Airport) ದಲ್ಲಿ ನಕಲಿ ಟಿಕೆಟ್ ಮೂಲಕ ಟರ್ಮಿನಲ್ ಒಳ ಪ್ರವೇಶಿಸಿದ್ದ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹರ್ಷಿತ ಕೌರ್ ಸಾಹ್ನಿ ಬಂಧಿತ ಮಹಿಳೆ. ತನ್ನ ಸ್ನೇಹಿತ ಆಯುಶ್ ಶರ್ಮಾ ಎಂಬುವವನನ್ನು ಬಿಡಲು ಮಹಿಳೆ ಬಂದಿದ್ದು, ಈ ವೇಳೆ ಟಿಕೆಟ್​ ಇಲ್ಲ ಅಂದರೆ ಟರ್ಮಿನಲ್ ಒಳಗಡೆ ಬಿಡಲ್ಲ ಅಂತ ನಕಲಿ ಇ-ಟಿಕೆಟ್ ತಯಾರಿಸಿ ಟರ್ಮಿನಲ್ ಒಳ ಪ್ರವೇಶಿಸಿ ಹೊರಬರುತ್ತಿದ್ದಂತೆ ಸಿಕ್ಕಿಬಿದಿದ್ದಾಳೆ.

ಈ ವೇಳೆ ಏರ್ಪೋಟ್ ಭದ್ರತಾ ಪಡೆ ಏರ್ಲೈನ್ಸ್ ಸಿಬ್ಬಂದಿಯಿಂದ ಟಿಕೆಟ್ ಕ್ಯಾನ್ಸಲ್ ಮಾಡಿಸಿಕೊಂಡು ಬಂದರೆ ಮಾತ್ರ ಹೊರಗಡೆ ಬಿಡುವುದಾಗಿ ಹೇಳಿದ್ದು, ಯುವತಿ ಇಂಡಿಗೋ ಏರ್ಲೈನ್ ಕಛೇರಿಗೆ ತೆರಳಿದ್ದಾಳೆ. ಈ ವೇಳೆ ಟಿಕೆಟ್​ ಪರಿಶೀಲಿಸಿದ ಸಿಬ್ಬಂದಿ ಇದು ನಖಲಿ ಟಿಕೆಟ್​ ಅಂತ ಖಚಿತಪಡಿಸಿದ್ದು, ಏರ್‌ಪೋರ್ಟ್‌ ಭದ್ರತಾ ಪಡೆಯ ವಶಕ್ಕೆ ನೀಡಿದ್ದಾರೆ.

ಇದನ್ನೂ ಓದಿ: ಅಕ್ರಮವಾಗಿ ಇ ಸಿಗರೇಟ್​​​ಗಳ ಸಾಗಾಟ: ಇಬ್ಬರು ಪ್ರಯಾಣಿಕರನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು

ಸದ್ಯ ಏರ್ಲೈನ್ಸ್ ಸಿಬ್ಬಂದಿಗಳ ದೂರಿನ ಆಧಾರದ ಮೇಲೆ ನಕಲಿ ಟಿಕೆಟ್​ ಸಮೇತ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮವಾಗಿ ಟರ್ಮಿನಲ್ ಒಳಗಡೆ ಪ್ರವೇಶಿಸಿದ ಆರೋಪದಡಿ ಏರ್‌ಪೋರ್ಟ್‌ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ಅಧಿಕಾರಿಗಳ ಕಣ್ತಪ್ಪಿಸಲು ಚಾಕು ಮತ್ತು ಟ್ರೇ ನಲ್ಲಿ ಗೋಲ್ಡ್ ಸಾಗಾಟ

ಪೇಸ್ಟ್ ಹಾಗೂ ಕಟ್ ಪೀಸ್ ಮಾದರಿಯಲ್ಲಿ ಚಿನ್ನವನ್ನ ವುಡ್ ಟ್ರೇ ಹಾಗೂ ಚಾಕುವಿನಲ್ಲಿ ಅಡಗಿಸಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಏರ್‌ಪೋರ್ಟ್‌ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದು, 19 ಲಕ್ಷಕ್ಕೂ ಅಧಿಕ ಬೆಲೆ ಬಾಳುವ 298 ಗ್ರಾಂ ಚಿನ್ನ ಸಿಕ್ಕಿದ್ದು ಚಿನ್ನ ಜಪ್ತಿ ಮಾಡಿದ್ದಾರೆ. ದುಬೈನಿಂದ ವಿಮಾನದಲ್ಲಿ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರಿಯ ವಿಮಾನ ನಿಲ್ಥಾಣಕ್ಕೆ ಇಬ್ಬರು ಪ್ರಯಾಣಿಕರು ಆಗಮಿಸಿದ್ದರು.

ಇದನ್ನೂ ಓದಿ: ಕ್ಯಾಪ್ಸೂಲ್ ಮಾತ್ರೆ ಮಾದರಿಯಲ್ಲಿ ಡ್ರಗ್ಸ್ ಸಾಗಾಟ, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಮಹಿಳೆ

ಜೊತೆಗೆ ಲಗೇಜ್​ ಬ್ಯಾಗ್​ನಲ್ಲಿ ವುಡ್ ಟ್ರೇ ಹಾಗೂ ಸಿಲ್ವರ್ ಕೋಟ್ ಚಾಕುವನ್ನಿಟ್ಟುಕೊಂಡು ಬಂದಿರುವುದು ಅನುಮಾನ ಮೂಡಿಸಿತ್ತು. ಹೀಗಾಗಿ ಚಾಕು ಹಾಗೂ ವುಡ್ ಟ್ರೇ ಪರಿಶೀಲನೆ ನಡೆಸಿದಾಗ ವುಡ್ ಟ್ರೆಗೆ ಪೇಪರ್ ಸ್ಟಿಕರ್​ ಹಿಂಬಾಗದಲ್ಲಿ ಚಿನ್ನವನ್ನ ಪೇಸ್ಟ್ ರೂಪದಲ್ಲಿ ಮಾಡಿ ಅಂಟಿಸಿರುವುದು ಬೆಳಕಿಗೆ ಬಂದಿದೆ. ಜೊತೆಗೆ ಸಿಲ್ವರ್ ಕೋಟೆಡ್ ಚಾಕುವಿನ ಹ್ಯಾಂಡಲ್​ನಲ್ಲಿ ಕಟ್ ಪೀಸ್ ಚಿನ್ನಕ್ಕೂ ಸಿಲ್ವರ್ ಕೋಟ್ ಮಾಡಿ ತಂದಿದ್ದು ಎರಡನ್ನು ಕಸ್ಟಮ್ಟ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:36 am, Mon, 27 November 23

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ