AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನೇಹಿತನಿಗೆ ಡ್ರಾಪ್ ಕೊಡಲು ನಕಲಿ ಟಿಕೆಟ್​​ ಬಳಕೆ: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಸಿಕ್ಕಿಬಿದ್ದ ಮಹಿಳೆ

ಸ್ನೇಹಿತನನ್ನ ಏರ್‌ಪೋರ್ಟ್‌​ನಲ್ಲಿ ಡ್ರಾಪ್ ಕೊಡಲು ಬಂದಿದ್ದ ಯುವತಿಯೋರ್ವಳು ಖತರ್ನಾಕ್ ಐಡಿಯಾ ಮಾಡಿ ಇದೀಗ ಪೊಲೀಸರ ಕೈಗೆ ಸಿಕ್ಕಿ ಬಿದ್ದಿರುವಂತಹ ಘಟನೆ ಕೆಂಪೇಗೌಡ ಏರ್‌ಪೋರ್ಟ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ ಅಕ್ರಮವಾಗಿ ಟರ್ಮಿನಲ್ ಒಳಗಡೆ ಪ್ರವೇಶಿಸಿದ ಆರೋಪದಡಿ ಏರ್‌ಪೋರ್ಟ್‌ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ಸ್ನೇಹಿತನಿಗೆ ಡ್ರಾಪ್ ಕೊಡಲು ನಕಲಿ ಟಿಕೆಟ್​​ ಬಳಕೆ: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಸಿಕ್ಕಿಬಿದ್ದ ಮಹಿಳೆ
ಕೆಂಪೇಗೌಡ ಏರ್ಪೋರ್ಟ್
Follow us
ನವೀನ್ ಕುಮಾರ್ ಟಿ
| Updated By: ಗಂಗಾಧರ​ ಬ. ಸಾಬೋಜಿ

Updated on:Nov 27, 2023 | 11:38 AM

ದೇವನಹಳ್ಳಿ, ನವೆಂಬರ್​​ 27: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (Kempegowda Airport) ದಲ್ಲಿ ನಕಲಿ ಟಿಕೆಟ್ ಮೂಲಕ ಟರ್ಮಿನಲ್ ಒಳ ಪ್ರವೇಶಿಸಿದ್ದ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹರ್ಷಿತ ಕೌರ್ ಸಾಹ್ನಿ ಬಂಧಿತ ಮಹಿಳೆ. ತನ್ನ ಸ್ನೇಹಿತ ಆಯುಶ್ ಶರ್ಮಾ ಎಂಬುವವನನ್ನು ಬಿಡಲು ಮಹಿಳೆ ಬಂದಿದ್ದು, ಈ ವೇಳೆ ಟಿಕೆಟ್​ ಇಲ್ಲ ಅಂದರೆ ಟರ್ಮಿನಲ್ ಒಳಗಡೆ ಬಿಡಲ್ಲ ಅಂತ ನಕಲಿ ಇ-ಟಿಕೆಟ್ ತಯಾರಿಸಿ ಟರ್ಮಿನಲ್ ಒಳ ಪ್ರವೇಶಿಸಿ ಹೊರಬರುತ್ತಿದ್ದಂತೆ ಸಿಕ್ಕಿಬಿದಿದ್ದಾಳೆ.

ಈ ವೇಳೆ ಏರ್ಪೋಟ್ ಭದ್ರತಾ ಪಡೆ ಏರ್ಲೈನ್ಸ್ ಸಿಬ್ಬಂದಿಯಿಂದ ಟಿಕೆಟ್ ಕ್ಯಾನ್ಸಲ್ ಮಾಡಿಸಿಕೊಂಡು ಬಂದರೆ ಮಾತ್ರ ಹೊರಗಡೆ ಬಿಡುವುದಾಗಿ ಹೇಳಿದ್ದು, ಯುವತಿ ಇಂಡಿಗೋ ಏರ್ಲೈನ್ ಕಛೇರಿಗೆ ತೆರಳಿದ್ದಾಳೆ. ಈ ವೇಳೆ ಟಿಕೆಟ್​ ಪರಿಶೀಲಿಸಿದ ಸಿಬ್ಬಂದಿ ಇದು ನಖಲಿ ಟಿಕೆಟ್​ ಅಂತ ಖಚಿತಪಡಿಸಿದ್ದು, ಏರ್‌ಪೋರ್ಟ್‌ ಭದ್ರತಾ ಪಡೆಯ ವಶಕ್ಕೆ ನೀಡಿದ್ದಾರೆ.

ಇದನ್ನೂ ಓದಿ: ಅಕ್ರಮವಾಗಿ ಇ ಸಿಗರೇಟ್​​​ಗಳ ಸಾಗಾಟ: ಇಬ್ಬರು ಪ್ರಯಾಣಿಕರನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು

ಸದ್ಯ ಏರ್ಲೈನ್ಸ್ ಸಿಬ್ಬಂದಿಗಳ ದೂರಿನ ಆಧಾರದ ಮೇಲೆ ನಕಲಿ ಟಿಕೆಟ್​ ಸಮೇತ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮವಾಗಿ ಟರ್ಮಿನಲ್ ಒಳಗಡೆ ಪ್ರವೇಶಿಸಿದ ಆರೋಪದಡಿ ಏರ್‌ಪೋರ್ಟ್‌ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ಅಧಿಕಾರಿಗಳ ಕಣ್ತಪ್ಪಿಸಲು ಚಾಕು ಮತ್ತು ಟ್ರೇ ನಲ್ಲಿ ಗೋಲ್ಡ್ ಸಾಗಾಟ

ಪೇಸ್ಟ್ ಹಾಗೂ ಕಟ್ ಪೀಸ್ ಮಾದರಿಯಲ್ಲಿ ಚಿನ್ನವನ್ನ ವುಡ್ ಟ್ರೇ ಹಾಗೂ ಚಾಕುವಿನಲ್ಲಿ ಅಡಗಿಸಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಏರ್‌ಪೋರ್ಟ್‌ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದು, 19 ಲಕ್ಷಕ್ಕೂ ಅಧಿಕ ಬೆಲೆ ಬಾಳುವ 298 ಗ್ರಾಂ ಚಿನ್ನ ಸಿಕ್ಕಿದ್ದು ಚಿನ್ನ ಜಪ್ತಿ ಮಾಡಿದ್ದಾರೆ. ದುಬೈನಿಂದ ವಿಮಾನದಲ್ಲಿ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರಿಯ ವಿಮಾನ ನಿಲ್ಥಾಣಕ್ಕೆ ಇಬ್ಬರು ಪ್ರಯಾಣಿಕರು ಆಗಮಿಸಿದ್ದರು.

ಇದನ್ನೂ ಓದಿ: ಕ್ಯಾಪ್ಸೂಲ್ ಮಾತ್ರೆ ಮಾದರಿಯಲ್ಲಿ ಡ್ರಗ್ಸ್ ಸಾಗಾಟ, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಮಹಿಳೆ

ಜೊತೆಗೆ ಲಗೇಜ್​ ಬ್ಯಾಗ್​ನಲ್ಲಿ ವುಡ್ ಟ್ರೇ ಹಾಗೂ ಸಿಲ್ವರ್ ಕೋಟ್ ಚಾಕುವನ್ನಿಟ್ಟುಕೊಂಡು ಬಂದಿರುವುದು ಅನುಮಾನ ಮೂಡಿಸಿತ್ತು. ಹೀಗಾಗಿ ಚಾಕು ಹಾಗೂ ವುಡ್ ಟ್ರೇ ಪರಿಶೀಲನೆ ನಡೆಸಿದಾಗ ವುಡ್ ಟ್ರೆಗೆ ಪೇಪರ್ ಸ್ಟಿಕರ್​ ಹಿಂಬಾಗದಲ್ಲಿ ಚಿನ್ನವನ್ನ ಪೇಸ್ಟ್ ರೂಪದಲ್ಲಿ ಮಾಡಿ ಅಂಟಿಸಿರುವುದು ಬೆಳಕಿಗೆ ಬಂದಿದೆ. ಜೊತೆಗೆ ಸಿಲ್ವರ್ ಕೋಟೆಡ್ ಚಾಕುವಿನ ಹ್ಯಾಂಡಲ್​ನಲ್ಲಿ ಕಟ್ ಪೀಸ್ ಚಿನ್ನಕ್ಕೂ ಸಿಲ್ವರ್ ಕೋಟ್ ಮಾಡಿ ತಂದಿದ್ದು ಎರಡನ್ನು ಕಸ್ಟಮ್ಟ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:36 am, Mon, 27 November 23

ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು