AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿನಿಗೆ ಬಾಸುಂಡೆ ಬರುವಂತೆ ಹೊಡೆದ ಪ್ರಾಂಶುಪಾಲೆ, ಪೋಷಕರ ಆಕ್ರೋಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಖಾಸಗಿ ಶಾಲೆಯ ಪ್ರಾಂಶುಪಾಲೆ ವಿದ್ಯಾರ್ಥಿನಿಗೆ ಹಿಗ್ಗಾ-ಮುಗ್ಗಾ ಥಳಿಸಿದ್ದಾರೆ. ಪ್ರಾಂಶುಪಾಲೆ ಉಷಾ ಕಿರಣ್ ವಿದ್ಯಾರ್ಥಿನಿಗೆ ಬೆತ್ತದಿಂದ ಕೈ ಮತ್ತು ಕಾಲುಗಳ ಮೇಲೆ‌ ಬಾಸುಂಡೆ ಬರುವಂತೆ ಹೊಡೆದಿದ್ದಾರೆ.

ವಿದ್ಯಾರ್ಥಿನಿಗೆ ಬಾಸುಂಡೆ ಬರುವಂತೆ ಹೊಡೆದ ಪ್ರಾಂಶುಪಾಲೆ, ಪೋಷಕರ ಆಕ್ರೋಶ
ವಿದ್ಯಾರ್ಥಿನಿ ಕೈ, ಕಾಲಿನ ಮೇಲೆ ಬಾಸುಂಡೆ
ನವೀನ್ ಕುಮಾರ್ ಟಿ
| Edited By: |

Updated on: Nov 14, 2024 | 12:30 PM

Share

ದೇವನಹಳ್ಳಿ, ನವೆಂನರ್​ 14: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೇವನಹಳ್ಳಿ (Devanhalli) ತಾಲೂಕಿನ ವಿಜಯಪುರ ಪಟ್ಟಣದ ಖಾಸಗಿ ಶಾಲೆಯ ಪ್ರಾಂಶುಪಾಲೆ ವಿದ್ಯಾರ್ಥಿನಿಗೆ ಹಿಗ್ಗಾ-ಮುಗ್ಗಾ ಥಳಿಸಿದ್ದಾರೆ. ವಿಶೇಷ ಚೇತನ ವಿದ್ಯಾರ್ಥಿಯ ಸಹಾಯಕ್ಕೆ ಧಾವಿಸಲಿಲ್ಲ ಅಂತ ಪ್ರಾಂಶುಪಾಲೆ ಉಷಾ ಕಿರಣ್ ವಿದ್ಯಾರ್ಥಿನಿಗೆ ಬೆತ್ತದಿಂದ ಕೈ ಮತ್ತು ಕಾಲುಗಳ ಮೇಲೆ‌ ಬಾಸುಂಡೆ ಬರುವಂತೆ ಹೊಡೆದಿದ್ದಾರೆ. ಮಗಳಿಗೆ ಹಿಗ್ಗಾಮುಗ್ಗ ಹೊಡೆದಿರುವುದನ್ನು ಖಂಡಿಸಿ ಪ್ರಾಂಶುಪಾಲೆ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ವಿಜಯಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಕರಣ ಸಂಬಂಧ ಪ್ರಾಂಶುಪಾಲೆ ಉಷಾ ಕಿರಣ್ ಮಾತನಾಡಿ, ತರಗತಿಯಲ್ಲಿ ನಡೆಯಲು ಆಗದ ವಿಶೇಷ ಚೇತನ ಮಗು ಇದೆ. ವಿಶೇಷ ಚೇತನ ಮಗುವಿನ ಬಳಿ ಯಾರು ಹೋಗಬಾರದು, ಮಾತನಾಡಬಾರದು ಅಂತ ಕೆಲ ಮಕ್ಕಳು ಹೇಳುತ್ತಿದ್ದರಂತೆ. ಆ ಮಗುವಿಗೆ ಸಹಾಯಕ್ಕೆ ಆಯಾ ಇದ್ದಾರೆ. ಆದರೆ ಕೆಲವೊಮ್ಮೆ ಮಕ್ಕಳ ಸಹಾಯ ಬೇಕಾಗುತ್ತದೆ. ಮಗುವಿನ ಸಹಾಯಕ್ಕೆ ಕರೆದಾಗ “ನಾವು ಆಳುಗಳಾ” ಎಂದು ಇತರ ವಿದ್ಯಾರ್ಥಿಗಳು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಶಾಲೆಗೆ ಬೀಗ ಹಾಕಿ ಪೋಷಕರ ಆಕ್ರೋಶ

ಕಳೆದ ಮೂರು ತಿಂಗಳಿನಿಂದ ಇದೇ ರೀತಿ ನಡೆಯುತ್ತಿದ್ದು, ನಿನ್ನೆಯೂ ಹೀಗೆ ಆಗಿದೆ. ಹೀಗಾಗಿ, ನಾನು ಆ ಮಗುವಿನ ಕೈ ಮತ್ತು ಕಾಲಿಗೆ ಹೊಡೆದಿದ್ದೇನೆ. ನಾನು ಆ ರೀತಿ ಹೊಡೆಯಬಾರದಿತ್ತು ತಪ್ಪಾಗಿದೆ. ವಿಶೇಷಚೇತನ ಮಗುವಿಗೆ ಹೀಗಾಗುತ್ತಿದೆ ಅಂತ ಹೊಡೆದೆ. ವಿದ್ಯಾರ್ಥಿನಿಯ ಪೋಷಕರಿಗೆ ನಾನು ಹೇಳಬೇಕಿತ್ತು, ಆದರೆ ಆ ಕ್ಷಣದಲ್ಲಿ ಆ ರೀತಿ ಮಾಡಿದ್ದೇನೆ ಎಂದು ವಿಷಾಧ ವ್ಯಕ್ತಪಡಿಸಿದರು.

ಶಾಲೆಗೆ ಹೋಗಲು ಇಷ್ಟ ಇಲ್ಲದೆ ರೈಲ್ವೆ ನಿಲ್ದಾಣಕ್ಕೆ ಬಂದಿದ್ದ ಮಕ್ಕಳ ರಕ್ಷಣೆ

ಶಿವಮೊಗ್ಗ: ನಗರದ ರೈಲು ನಿಲ್ದಾಣದಲ್ಲಿ ಶಾಲೆಯಿಂದ ತಪ್ಪಿಸಿಕೊಂಡು ಬಂದಿದ್ದ ನಾಲ್ವರು ಮಕ್ಕಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಶಾಲೆಗೆ ಹೋಗಲು ಇಷ್ಟವಿಲ್ಲದೆ ಶಿವಮೊಗ್ಗದ ಗಾಡಿಕೊಪ್ಪ ಗ್ರಾಮದ ಒಂದು ಮಗು, ಬೆಂಗಳೂರಿನ ಕಾಮಾಕ್ಷಿಪುರದ ಮೂರು ಮಕ್ಕಳು ರೈಲ್ವೆ ನಿಲ್ದಾಣಕ್ಕೆ ಬಂದಿದ್ದರು. ರೈಲ್ವೆ ಪ್ಲಾಟ್ ಫಾರಂನಲ್ಲಿ ಕುಳಿತಿದ್ದ ಮಕ್ಕಳನ್ನು ಗಮನಿಸಿದ ಪೊಲೀಸರು, ರಕ್ಷಣೆ ಮಾಡಿ ಮಕ್ಕಳ ‌ಕಲ್ಯಾಣ ಸಮಿತಿಗೆ ಒಪ್ಪಿಸಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ