AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಸಲು ನಿರಾಕರಿಸಿದ್ದಕ್ಕೆ ಯುವತಿ ಕತ್ತು ಕೊಯ್ದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ

ಪ್ರೀತಿಸಲು ನಿರಾಕರಿಸಿದಳೆಂದು ಯುವಕನೊಬ್ಬ ಆಕೆಯ ಕತ್ತನ್ನೇ ಸೀಳಿ ಹತ್ಯೆ ಮಾಡಲು ಯತ್ನಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.

ಪ್ರೀತಿಸಲು ನಿರಾಕರಿಸಿದ್ದಕ್ಕೆ ಯುವತಿ ಕತ್ತು ಕೊಯ್ದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 23, 2022 | 1:30 PM

Share

ದೇವನಹಳ್ಳಿ: ತನ್ನ ಪ್ರೀತಿಯನ್ನು ನಿರಾಕರಿಸಿ ಬೇರೊಬ್ಬನೊಂದಿಗೆ ನಿಶ್ಚಿತಾರ್ಥಕ್ಕೆ ತಯಾರಿ ನಡೆಸುತ್ತಿದ್ದ ಯುವತಿಯನ್ನು ಪಾಗಲ್ ಪ್ರೇಮಿಯೊಬ್ಬ ದಾವಣಗರೆಯಲ್ಲಿ ನಡು ರಸ್ತೆಯಲ್ಲಿ ಕತ್ತು ಸೀಳಿ ಕೊಲೆ  (Youth Kills Young Girl)ಮಾಡಿದ ಘಟನೆ ಜನರ ಮನಸ್ಸಿನಿಂದ ಮಾಸುವ ಮುನ್ನವೇ ಅಂತಹದ್ದೇ ಮತ್ತೊಂದು ಘಟನೆ ಮರುಕಳಿಸಿದೆ. ಯುವಕನೊಬ್ಬ ಪ್ರೀತಿಸಲು ನಿರಾಕರಿಸಿದ್ದಕ್ಕೆ ಯುವತಿ ಕತ್ತುಕೊಯ್ದು (Youth slits young girl’s throat) ಬಳಿಕ ತಾನೂ ಕತ್ತು ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ (Suicide Attempt) ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಉಪ್ಪಾರಹಳ್ಳಿಯಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ಮೂಲದ ಮಂಜುನಾಥ ಎಂಬಾತ ಇನ್ಸ್ಟಾಗ್ರಾಮ್ ಮೂಲಕ ಯುವತಿಯೊಬ್ಬಳ ಜೊತೆ ಸಂಪರ್ಕದಲ್ಲಿದ್ದನು. ಕೆಲ ತಿಂಗಳಕಾಲ ಪೋನ್​ನಲ್ಲಿ ಚಾಟಿಂಗ್ ಮಾಡಿಕೊಂಡಿದ್ದ ಇಬರು ಪರಸ್ಪರ ಭೇಟಿಯೂ ಆಗಿದ್ದಾರೆ. ಅದೇ ಸಲುಗೆಯಿಂದ ಯುವತಿಗೆ ಮಂಜುನಾಥ ಮೊಬೈಲ್ ಕೊಡಿಸಿದ್ದನು. ನಂತರ ಮಂಜುನಾಥ ಪ್ರೀತಿಸುವಂತೆ ಯುವತಿಗೆ ಒತ್ತಾಯಿಸುತ್ತಿದ್ದನು. ಈ ಎಲ್ಲಾ ವಿಚಾರ ತಿಳಿದ ಯುವತಿಯ ಪೋಷಕರು ಬುದ್ಧಿವಾದ ಹೇಳಿ ಆಕೆಯನ್ನು ಅತ್ತೆ ಮನೆಯಲ್ಲಿರಿಸಿದ್ದರು.

ಇದನ್ನೂ ಓದಿ: Kanakapura: ಕನಕಪುರದ ಬಾಲಕ ನಾಪತ್ತೆಯಾಗಿ 6 ತಿಂಗಳಾಯ್ತು! ಇಬ್ಬರು ಆರೋಪಿಗಳಿಗೆ ಬ್ರೈನ್ ಮ್ಯಾಪಿಂಗ್: ಸಲಿಂಗಕಾಮ ಕಾರಣವಾಯ್ತಾ? 

ತಾನು ಪ್ರೀತಿಸುತ್ತಿದ್ದ ಯುವತಿಯನ್ನು ಅತ್ತೆ ಮನೆಯಲ್ಲಿರಿಸಿದ್ದ ವಿಚಾರ ತಿಳಿದ ಮಂಜುನಾಥ, ಯುವತಿಗೆ ಫೋನ್​ ಮಾಡಿ ವಿಳಾಸ ಪಡೆದು ಮನೆಗೆ ಬಂದು ತನ್ನ ಜತೆ ಬರುವಂತೆ ಒತ್ತಾಯಿಸಿದ್ದಾನೆ. ಈ ವೇಳೆ ಯುವತಿ ನಿರಾಕರಿಸಿದಾಗ ಕೋಪಗೊಂಡ ಮಂಜುನಾಥ ಆಕೆಯ ಮೇಲೆ ಹಲ್ಲೆ ನಡೆಸಿ ಬ್ಲೇಡ್​ನಿಂದ ಕತ್ತು ಕೊಯ್ದು ನಂತರ ತನ್ನ ಕತ್ತನ್ನೂ ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಘಟನೆಯಲ್ಲಿ ಅಸ್ವಸ್ಥರಾಗಿದ್ದ ಯುವತಿ ಹಾಗೂ ಮಂಜುನಾಥನನ್ನು ಕೂಡಲೇ ಯುವತಿಯ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಸದ್ಯ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೃತ್ಯ ಸಂಬಂಧ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬ್ರೆಜಿಲ್: ಸಂಗಾತಿ ತನ್ನಿಂದ ಬೇರ್ಪಟ್ಟದ್ದರಿಂದ ರೊಚ್ಚಿಗೆದ್ದ ಅವನು ಮಕ್ಕಳೆದುರೇ ಅಕೆಯನ್ನು ಬರ್ಬರವಾಗಿ ತಿವಿದು ಕೊಂದ!

ದಾವಣಗೆರೆ ನಗರದ ಬಿಜೆ ಬಡಾವಣೆಯ ಐತಿಹಾಸಿ ಮುಂಭಾಗದಲ್ಲಿ ಬುರ್ಖಾದಾರಿ ಮುಸ್ಲಿಂ ಯುವತಿ ತನ್ನ ಕೆಲಸಕ್ಕೆ ಹೋಗುವಾಗ ಪಾಗಲ್ ಪ್ರೇಮಿಯೊಬ್ಬ ಆಕೆಯ ಎದುರು ಬಂದು ಗಾಡಿ ನಿಲ್ಲಿಸಿ ಮನ ಬಂದಂತೆ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಅವಳು ಸಾವನ್ನಪ್ಪಿದ್ದಾಳೆ ಎಂದು ಖಚಿತವಾಗುವ ತನಕ ಚುಚ್ಚಿದ್ದಾನೆ. ರಕ್ತ ಚಿಮ್ಮಿದೆ. ಪ್ರಜ್ಞೆ ತಪ್ಪಿ ತಾನು ಹೋಗುತ್ತಿದ್ದ ಆಕ್ಟಿವ್ ಹೊಂಡಾ ಗಾಡಿ ಮೇಲೆ ಬಿದ್ದು ಯುವತಿ ಸಾವನ್ನಪ್ಪಿದ್ದಾಳೆ. ಈ ಘಟನೆ ನಿನ್ನೆಯಷ್ಟೇ ನಡೆದಿದ್ದು, ಇದೀಗ ಇಂತಹದ್ದೇ ಘಟನೆ ಬೆಂಗಳೂರು ಗ್ರಾಮಾಂತರದಲ್ಲೂ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್