AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸಕೋಟೆ, ನೆಲಮಂಗಲದಲ್ಲಿ ಭ್ರೂಣ ಹತ್ಯೆ ಪ್ರಕರಣ ಬಯಲು ಮಾಡಿದ ಅಧಿಕಾರಿಗೆ ಡಿಹೆಚ್​ಒ ಕಿರುಕುಳ

ಬೆಂಗಳೂರಿನಲ್ಲಿ ಪತ್ತೆಯಾದ ಭ್ರೂಣ ಹತ್ಯೆ ಪ್ರಕರಣದ ನಂತರ ರಾಜ್ಯದ ವಿವಿಧ ಕಡೆಗಳಲ್ಲಿ ಸಾಲು ಸಾಲು ಪ್ರಕರಣಗಳು ಬಂದವು. ಈ ಪೈಕಿ ಹೊಸಕೋಟೆ, ನೆಲಮಂಗಲದಲ್ಲಿ ಪತ್ತೆಯಾದ ಭ್ರೂಣ ಹತ್ಯೆ ಪ್ರಕರಣಗಳು ಕೂಡ ಸೇರಿವೆ. ಆದರೆ, ಈ ಎರಡು ಕಡೆಗಳಲ್ಲಿ ಭ್ರೂಣ ಹತ್ಯೆ ಪ್ರಕರಣ ಬಯಲು ಮಾಡಿದ ಅಧಿಕಾರಿಯೊಬ್ಬರಿಗೆ ಬೆಂಗಳೂರು ಗ್ರಾಮಾಂತರ ಡಿಹೆಚ್​ಒ ಸುನೀಲ್ ಕುಮಾರ್ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ.

ಹೊಸಕೋಟೆ, ನೆಲಮಂಗಲದಲ್ಲಿ ಭ್ರೂಣ ಹತ್ಯೆ ಪ್ರಕರಣ ಬಯಲು ಮಾಡಿದ ಅಧಿಕಾರಿಗೆ ಡಿಹೆಚ್​ಒ ಕಿರುಕುಳ
ಬೆಂಗಳೂರು ಗ್ರಾಮಾಂತರ ಡಿಹೆಚ್​ಒ ಸುನೀಲ್ ಕುಮಾರ್ ಮತ್ತು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಮಂಜುನಾಥ್
ನವೀನ್ ಕುಮಾರ್ ಟಿ
| Updated By: Rakesh Nayak Manchi|

Updated on: Mar 21, 2024 | 10:38 AM

Share

ದೇವನಹಳ್ಳಿ, ಮಾ.21: ಹೊಸಕೋಟೆ (Hoskote) ಮತ್ತು ನೆಲಮಂಗಲದಲ್ಲಿ (Nelamangala) ಭ್ರೂಣಹತ್ಯೆ (Feticide) ಪ್ರಕರಣವನ್ನು ಬಯಲು ಮಾಡಿದ ಅಧಿಕಾರಿಯೊಬ್ಬರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಡಿಹೆಚ್​ಒ (DHO) ಸುನೀಲ್ ಕುಮಾರ್ ಕಿರುಕುಳ ನೀಡುತ್ತಿರುವ ಆರೋಪ ಕೇಳಿಬಂದಿದೆ. ಅಲ್ಲದೆ, ಕಿರುಕುಳದಿಂದ ಬೇಸತ್ತ ಅಧಿಕಾರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಹೊಸಕೋಟೆ ಮತ್ತು ನೆಮಂಗಲದಲ್ಲಿ ನಡೆಯುತ್ತಿದ್ದ ಭ್ರೂಣ ಹತ್ಯೆ ಪ್ರಕರಣವನ್ನು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಮಂಜುನಾಥ್ ಅವರು ಬಯಲು ಮಾಡಿದ್ದರು. ಆದರೆ, ಜಿಲ್ಲಾ ಆರೋಗ್ಯಾಧಿಕಾರಿ ಸುನೀಲ್ ಕುಮಾರ್, ಜಿಲ್ಲೆಯ ಮತ್ತಷ್ಟು ಆಸ್ವತ್ರೆಗಳ ಲೋಪದೋಷ ಹಾಗೂ ಗರ್ಭಪಾತ ಕರ್ಮಕಾಂಡದ ಬಗ್ಗೆ ಬಯಲು ಮಾಡದಂತೆ ಮಂಜುನಾಥ್ ಅವರಿಗೆ ಕಿರುಕುಳ ನೀಡುತ್ತಿರುವ ಆರೋಪ ಕೇಳಿಬಂದಿದೆ.

ಮೂರು ದಿನಗಳಿಗೊಮ್ಮೆ ನೋಟಿಸ್ ನೀಡುತ್ತಾ ಆಸ್ವತ್ರೆಗಳ ಲೋಪದೋಷ ವರದಿ ನೀಡದಂತೆ ಕಿರುಕುಳ ನೀಡುತ್ತಿದ್ದಾರೆ ಎಂದು ಮಂಜುನಾಥ್ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಈ ಹಿಂದೆ ನೆಲಮಂಗಲದ ಆಸರೆ ಆಸ್ವತ್ರೆಯ 74 ಗರ್ಭಪಾತದ ವರದಿ ಮಾಡದಂತೆ ಸುನೀಲ್ ಕುಮಾರ್ ಒತ್ತಡ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ನೆಲಮಂಗಲದ ಆಸರೆ ಆಸ್ಪತ್ರೆಯಲ್ಲಿ 74 ಭ್ರೂಣ ಹತ್ಯೆ ಪ್ರಕರಣ; ಕೆಲ ಮಹತ್ವದ ದಾಖಲೆ ವಶಕ್ಕೆ ಪಡೆದ ಅಧಿಕಾರಿಗಳು

ಒತ್ತಡದ ನಡುವೆಯು ಆಸ್ವತ್ರೆಯ ಕರ್ಮಕಾಂಡ ಬಯಲು ಮಾಡಿ ಕೇಸ್ ದಾಖಲಿಸಿದಕ್ಕೆ ಮಂಜುನಾಥ್ ಅವರಿಗೆ ಕಿರುಕುಳ ನೀಡಿದ್ದಾರೆ. ಅಷ್ಟೇ ಅಲ್ಲದೆ, ಮಂಜುನಾಥ್ ಅವರು ಹೊಸಕೋಟೆಯ ಓವಂ ಆಸ್ವತ್ರೆಯಲ್ಲೂ MTP ಖಾಯ್ದೆಯಡಿ ಅನುಮತಿ ಪಡೆಯದೆ ಗರ್ಭಪಾತ ಪ್ರಕರಣ ಪತ್ತೆ ಮಾಡಿದ್ದಾರೆ. ಈ ಬಗ್ಗೆ ವರದಿ ಮಾಡಿ ಬಯಲು ಮಾಡದಂತೆ ಡಿಹೆಚ್ಒ ಸುನೀಲ್ ಅವರು ಕಿರುಕುಳ ನೀಡಿದ್ದಾಗಿ ಪತ್ರದಲ್ಲಿ ಆರೋಪಿಸಲಾಗಿದೆ.

DHO ಮಾತು ಕೇಳದಕ್ಕೆ ವಿನಾಕಾರಣ ನೋಟಿಸ್ ನೀಡಿ ಮಾನಸಿಕ ಕಿರುಕುಳ ನೀಡಿದ್ದಾರೆ. ಇದರಿಂದಾಗಿ ಮಾನಸಿಕ ಸ್ಥೀಮಿತ ಕಳೆದುಕೊಂಡು ಜೀವ ಕಳೆದುಕೊಂಡರೆ ಡಿಹೆಚ್ಒ ಕಾರಣ ಅಂತ ಪತ್ರದಲ್ಲಿ ಮಂಜುನಾಥ್ ಉಲ್ಲೇಖಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ