AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರೂಣಹತ್ಯೆ ವರದಿ ಬಹಿರಂಗಪಡಿಸದಂತೆ ಕಿರುಕುಳ: ವಿಚಾರಣೆಗೆ ಆದೇಶಿಸಿದ ಬೆಂಗಳೂರು ಗ್ರಾಮಾಂತರ ಡಿಸಿ

ಹೊಸಕೋಟೆ, ನೆಲಮಂಗಲದಲ್ಲಿ ನಡೆಯುತ್ತಿದ್ದ ಭ್ರೂಣಹತ್ಯೆ ಪ್ರಕರಣಗಳ ಕುರಿತ ವರದಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕುಟುಂಬ ಕಲ್ಯಾಣಾಧಿಕಾರಿ ಮಂಜುನಾಥ್ ಅವರು ಬಹಿರಂಗಪಡಿಸಿದ್ದರು. ಇದೇ ಕಾರಣಕ್ಕೆ ಡಿಹೆಚ್​ಒ ಸುನೀಲ್ ಕುಮಾರ್ ಅವರು ಮಂಜುನಾಥ್ ಅವರಿಗೆ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಈ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಭ್ರೂಣಹತ್ಯೆ ವರದಿ ಬಹಿರಂಗಪಡಿಸದಂತೆ ಕಿರುಕುಳ: ವಿಚಾರಣೆಗೆ ಆದೇಶಿಸಿದ ಬೆಂಗಳೂರು ಗ್ರಾಮಾಂತರ ಡಿಸಿ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕುಟುಂಬ ಕಲ್ಯಾಣಾಧಿಕಾರಿ ಮಂಜುನಾಥ್ ಮತ್ತು ಡಿಹೆಚ್​ಒ ಸುನೀಲ್ ಕುಮಾರ್
ನವೀನ್ ಕುಮಾರ್ ಟಿ
| Edited By: |

Updated on: Mar 23, 2024 | 6:25 PM

Share

ದೇವನಹಳ್ಳಿ, ಮಾ.23: ಭ್ರೂಣಹತ್ಯೆ (Feticide) ಪ್ರಕರಣಗಳ ಕುರಿತ ವರದಿ ಬಹಿರಂಗ ಮಾಡದಂತೆ ಕಿರುಕುಳ ನೀಡಿದ ಆರೋಪ ಸಂಬಂಧ ಡಿಹೆಚ್​ಒ ಸುನೀಲ್ ಕುಮಾರ್ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಂಜುನಾಥ್ ಅವರನ್ನು ವಿಚಾರಣೆಗೆ ಒಳಪಡಿಸುವಂತೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲಾಧಿಕಾರಿ ಡಾ.ಶಿವಶಂಕರ್‌.ಎನ್‌. ಆದೇಶ ಹೊರಡಿಸಿದ್ದಾರೆ.

ಎಡಿಸಿ ನೇತೃತ್ವದಲ್ಲಿ ಡಿಹೆಚ್‌ಒ ಹಾಗೂ ಕುಟುಂಬ ಕಲ್ಯಾಣಾಧಿಕಾರಿ ವಿಚಾರಣೆ ನಡೆಸುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇದರ ಬೆನ್ನಲ್ಲೇ ಎಡಿಸಿ, ಹೊಸಕೋಟೆ, ನೆಲಮಂಗಲ ಭ್ರೂಣಹತ್ಯೆಗಳ ಕುರಿತ ದಾಖಲೆ ಸಹಿತ ವಿಚಾರಣೆಗೆ ಹಾಜರಾಗುವಂತೆ ಇಬ್ಬರಿಗೂ ನೋಟಿಸ್‌ ನೀಡಿದ್ದಾರೆ. ವಿಚಾರಣೆ ಬಳಿಕ ಎಡಿಸಿ ದಾಖಲೆಗಳ ಸಹಿತ ವರದಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಲಿದ್ದಾರೆ.

ಕುಟುಂಬ ಕಲ್ಯಾಣಾಧಿಕಾರಿ ವಿರುದ್ಧ ಇಲಾಖೆಗೆ ಡಿಹೆಚ್​ಒ ಪತ್ರ

ಒಂದೆಡೆ, ಭ್ರೂಣಹತ್ಯೆ ಪ್ರಕರಣಗಳ ವರದಿ ಬಹಿರಂಗಪಡಿಸದಂತೆ ಡಿಹೆಚ್​ಒ ಸುನೀಲ್ ಕುಮಾರ್ ನೀಡುತ್ತಿರುವ ಕಿರುಕುಳದ ಬಗ್ಗೆ ಕುಟುಂಬ ಕಲ್ಯಾಣಾಧಿಕಾರಿ ಮಂಜುನಾಥ್ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಇದೀಗ, ಸುನೀಲ್ ಕುಮರ್ ಅವರು ಮಂಜುನಾಥ್ ವಿರುದ್ಧವೂ ಇಲಾಖೆಗೆ ಪತ್ರ ಬರೆದಿದ್ದಾರೆ. ಮಾಧ್ಯಮಗಳಿಗೆ ಮಾಹಿತಿ ನೀಡಿ ಇಲಾಖೆಯ ಗೌಪ್ಯತೆಗೆ ಧಕ್ಕೆ ತಂದಿರುವ ಮಂಜುನಾಥ್ ವಿರುದ್ಧ ಶಿಸ್ತು ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಏನಿದು ಪ್ರಕರಣ?

ಹೊಸಕೋಟೆ ಮತ್ತು ನೆಮಂಗಲದಲ್ಲಿ ನಡೆಯುತ್ತಿದ್ದ ಭ್ರೂಣ ಹತ್ಯೆ ಪ್ರಕರಣವನ್ನು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಮಂಜುನಾಥ್ ಅವರು ಬಯಲು ಮಾಡಿದ್ದರು. ಆದರೆ, ಜಿಲ್ಲಾ ಆರೋಗ್ಯಾಧಿಕಾರಿ ಸುನೀಲ್ ಕುಮಾರ್, ಜಿಲ್ಲೆಯ ಮತ್ತಷ್ಟು ಆಸ್ವತ್ರೆಗಳ ಲೋಪದೋಷ ಹಾಗೂ ಗರ್ಭಪಾತ ಕರ್ಮಕಾಂಡದ ಬಗ್ಗೆ ಬಯಲು ಮಾಡದಂತೆ ಮಂಜುನಾಥ್ ಅವರಿಗೆ ಕಿರುಕುಳ ನೀಡುತ್ತಿರುವ ಆರೋಪ ಕೇಳಿಬಂದಿತ್ತು.

ಇದನ್ನೂ ಓದಿ: ನೆಲಮಂಗಲದ ಆಸರೆ ಆಸ್ಪತ್ರೆಯಲ್ಲಿ 74 ಭ್ರೂಣ ಹತ್ಯೆ ಪ್ರಕರಣ; ಕೆಲ ಮಹತ್ವದ ದಾಖಲೆ ವಶಕ್ಕೆ ಪಡೆದ ಅಧಿಕಾರಿಗಳು

ಮೂರು ದಿನಗಳಿಗೊಮ್ಮೆ ನೋಟಿಸ್ ನೀಡುತ್ತಾ ಆಸ್ವತ್ರೆಗಳ ಲೋಪದೋಷ ವರದಿ ನೀಡದಂತೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮಂಜುನಾಥ್ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರಿಗೆ ಪತ್ರ ಬರೆದಿದ್ದರು. ಈ ಹಿಂದೆ ನೆಲಮಂಗಲದ ಆಸರೆ ಆಸ್ವತ್ರೆಯ 74 ಗರ್ಭಪಾತದ ವರದಿ ಮಾಡದಂತೆ ಸುನೀಲ್ ಕುಮಾರ್ ಒತ್ತಡ ಹಾಕಿದ್ದಾರೆ ಎಂದು ಆರೋಪಿಸಿದ್ದರು.

ಒತ್ತಡದ ನಡುವೆಯು ಆಸ್ವತ್ರೆಯ ಕರ್ಮಕಾಂಡ ಬಯಲು ಮಾಡಿ ಕೇಸ್ ದಾಖಲಿಸಿದಕ್ಕೆ ಮಂಜುನಾಥ್ ಅವರಿಗೆ ಕಿರುಕುಳ ನೀಡಿದ್ದಾರೆ. ಅಷ್ಟೇ ಅಲ್ಲದೆ, ಮಂಜುನಾಥ್ ಅವರು ಹೊಸಕೋಟೆಯ ಓವಂ ಆಸ್ವತ್ರೆಯಲ್ಲೂ MTP ಖಾಯ್ದೆಯಡಿ ಅನುಮತಿ ಪಡೆಯದೆ ಗರ್ಭಪಾತ ಪ್ರಕರಣ ಪತ್ತೆ ಮಾಡಿದ್ದಾರೆ. ಈ ಬಗ್ಗೆ ವರದಿ ಬಯಲು ಮಾಡದಂತೆ ಡಿಹೆಚ್ಒ ಸುನೀಲ್ ಅವರು ಕಿರುಕುಳ ನೀಡಿದ್ದಾಗಿ ಪತ್ರದಲ್ಲಿ ಆರೋಪಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ