ರಾತ್ರಿ ಹೊತ್ತಲ್ಲಿ ಕಳ್ಳರ ಕರಾಮತ್ತು: 8 ಲಾರಿಗಳ 16 ಬ್ಯಾಟರಿ, 150 ಲೀ ಡೀಸೆಲ್ ಕಳವು

ದೊಡ್ಡಬಳ್ಳಾಪುರದಲ್ಲಿ ಒಂದೇ ರಾತ್ರಿಯಲ್ಲಿ 8 ಲಾರಿಗಳಿಂದ 16 ಬ್ಯಾಟರಿಗಳು ಮತ್ತು 150 ಲೀಟರ್ ಡೀಸೆಲ್ ಕಳವು ಮಾಡಲಾಗಿದೆ. ರೈಲು ನಿಲ್ದಾಣ ಮತ್ತು ಹಳೆ ಬಸ್ ನಿಲ್ದಾಣದಿಂದಲೂ ಬ್ಯಾಟರಿಗಳನ್ನು ಕಳವು ಮಾಡಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡೀಸೆಲ್ ಕದಿಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ.

ರಾತ್ರಿ ಹೊತ್ತಲ್ಲಿ ಕಳ್ಳರ ಕರಾಮತ್ತು: 8 ಲಾರಿಗಳ 16 ಬ್ಯಾಟರಿ, 150 ಲೀ ಡೀಸೆಲ್ ಕಳವು
ರಾತ್ರಿ ಹೊತ್ತಲ್ಲಿ ಕಳ್ಳರ ಕರಾಮತ್ತು: 8 ಲಾರಿಗಳ 16 ಬ್ಯಾಟರಿ, 150 ಲೀ ಡೀಸೆಲ್ ಕಳವು
Edited By:

Updated on: Feb 23, 2025 | 3:31 PM

ದೇವನಹಳ್ಳಿ, ಫೆಬ್ರವರಿ 23: ಒಂದೇ ರಾತ್ರಿಯಲ್ಲಿ 8 ಲಾರಿಗಳ 16 ಬ್ಯಾಟರಿ ಸೇರಿದಂತೆ 150 ಲೀ. ಡೀಸೆಲ್ (Diesel) ಕಳವು ಮಾಡಿ ಕಳ್ಳರು ತಮ್ಮ ಕೈಚಳಕ ತೋರಿಸಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ರಾತ್ರಿ ವೇಳೆ ಬ್ಯಾಟರಿ, ಡೀಸೆಲ್ ಕದಿಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸ್ಕಾರ್ಪಿಯೊ ಕಾರಿನಲ್ಲಿ ಬಂದಿದ್ದ ಮೂವರಿಂದ ರೈಲು ನಿಲ್ದಾಣದ ಬಳಿ 12 ಬ್ಯಾಟರಿ, ಹಳೆ ಬಸ್ ನಿಲ್ದಾಣದ 4 ಬ್ಯಾಟರಿ ಮತ್ತು ಪಾಲನಜೋಗನಹಳ್ಳಿ ಬಳಿ ನಿಲ್ಲಿಸಿದ್ದ ಲಾರಿಗಳಿಂದ 150 ಲೀ. ಡೀಸೆಲ್ ಕಳವು ಮಾಡಿದ್ದಾರೆ. ಕಳ್ಳರು ಬ್ಯಾಟರಿ, ಡೀಸಲ್​​ ಟಾರ್ಗೆಟ್​ನಿಂದ ಚಾಲಕರು ಬೆಚ್ಚಿಬಿದಿದ್ದಾರೆ.

ನಾಮಕರಣಕ್ಕೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿ: ಮೂವರ ಸ್ಥಿತಿ ಗಂಭೀರ

ನಾಮಕರಣಕ್ಕೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿ ಆಗಿ ಮೂವರ ಸ್ಥಿತಿ ಗಂಭೀರವಾಗಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಬಳಿ ಅಪಘಾತ ಸಂಭವಿಸಿದೆ. ತುಮಕೂರು ಜಿಲ್ಲೆಯ ಶಿರಾದಿಂದ ಯಲಹಂಕಕ್ಕೆ ತೆರಳುತ್ತಿದ್ದಾಗ ಘಟನೆ ನಡೆದಿದೆ.

ಇದನ್ನೂ ಓದಿ: ದೇವನಹಳ್ಳಿ: ತಹಶೀಲ್ದಾರ್ ಸಹಿ‌ ನಕಲು ಮಾಡಿ ಮುಜರಾಯಿ ಇಲಾಖೆಯ 63 ಲಕ್ಷ ರೂ. ಲಪಟಾಯಿಸಿದ ಆರ್​ಐ!

ಮಿನಿ ಬಸ್​​​ನಲ್ಲಿ 25 ಜನ ಪ್ರಯಾಣಿಸುತ್ತಿದ್ದರು. ಗಾಯಾಳುಗಳನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸರ್ಕಾರಿ ಜಾಗದಿಂದ ಹಾಡಹಗಲೇ ಮರಗಳ್ಳತನ

ಸರ್ಕಾರಿ ಜಾಗದಿಂದ ಹಾಡಹಗಲೇ ಮರಗಳ್ಳತನ ಮಾಡಿರುವಂತಹ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಅತ್ತೂರು ನಲ್ಲೂರು ಗ್ರಾಮದಲ್ಲಿ ನಡೆದಿದೆ. ಆರು ಎಕರೆ ಜಾಗ 7ನೇ ಹೊಸಕೋಟೆ ಗ್ರಾಮ ಪಂಚಾಯಿತಿಗೆ ಸೇರಿದ ಪಂಚಾಯಿತಿಗೆ ಸೇರಿದೆ.

ಇದನ್ನೂ ಓದಿ: ರೀಲ್ಸ್​ ಮಾಡುವಾಗ ರೈಲು ಡಿಕ್ಕಿಯಾಗಿ ಯುಪಿ ಮೂಲದ ಮೂವರು ಕಾರ್ಮಿಕರು ಸಾವು

ಸರ್ಕಾರಿ ಜಾಗದಲ್ಲಿದ್ದ ಸಿಲ್ವರ್ ಓಕ್ ಮರಗಳನ್ನು ಟಿಂಬರ್​ಗಾಗಿ ಲಕ್ಷಾಂತರ ರೂ ಮೌಲ್ಯದ 50ಕ್ಕೂ ಅಧಿಕ ಮರಗಳ ಹನನ ಮಾಡಲಾಗಿದೆ. ಅರಣ್ಯ ಇಲಾಖೆ ಮಿಂಚಿನ ಕಾರ್ಯಾಚರಣೆ ಮಾಡಿ ಮರಗಳ‌ ಸಮೇತ ಎರಡು ಲಾರಿ ಮತ್ತು ಎರಡು ಕ್ರೇನ್​ ವಶಕ್ಕೆ ಪಡೆಯಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us