AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡಬಳ್ಳಾಪುರ: ಹುಡುಗಿಯರ ಜತೆ ಲವ್ವಿಡವ್ವಿ, ಗರ್ಭಿಣಿ ಮಾಡಿ ಕೈಬಿಟ್ಟ ಜಿಮ್ ಟ್ರೈನರ್ ಮನೆಗೆ ಬಿತ್ತು ಬೆಂಕಿ

ಆಕೆ ಜಿಮ್ ಟ್ರೈನರ್ ಜೊತೆ 8 ವರ್ಷಗಳಿಂದೆ ಪ್ರೇಮದ ಬಲೆಯಲ್ಲಿ ಬಿದ್ದಿದ್ದು, ಪ್ರೀತಿಸಿದವನು ಆಕೆಯನ್ನು ಗರ್ಭಿಣಿ ಮಾಡಿ ಕೈ ಕೊಟ್ಟಿದ್ದ. ಆದರೆ, ಇದೇ ವಿಚಾರವಾಗಿ ಆಕೆ ಮಗು ಸಮೇತ ಕೋರ್ಟ್ ಮೆಟ್ಟಿಲೇರಿದ್ದು ವ್ಯಾಜ್ಯ ನಡೆಯುತ್ತಿರುವಾಗಲೇ, ಕಳೆದ 20 ದಿನಗಳಿಂದ ಪ್ರೀತಿಸಿದವನ ಮನೆ ಸೇರಿಕೊಂಡಿದ್ದಾಳೆ. ಈ ನಡುವೆ ಪ್ರೀತಿಸಿದ್ದವನ ಮನೆ ಬೆಂಕಿಯಿಂದ ಧಗಧಗಿಸಿದೆ. ಇದಕ್ಕೆ ಕಾರಣವೇನು? ತಿಳಿಯಲು ಮುಂದೆ ಓದಿ.

ದೊಡ್ಡಬಳ್ಳಾಪುರ: ಹುಡುಗಿಯರ ಜತೆ ಲವ್ವಿಡವ್ವಿ, ಗರ್ಭಿಣಿ ಮಾಡಿ ಕೈಬಿಟ್ಟ ಜಿಮ್ ಟ್ರೈನರ್ ಮನೆಗೆ ಬಿತ್ತು ಬೆಂಕಿ
ಮನೆಗೆ ಬೆಂಕಿ ಬಿದ್ದಿರುವುದು (ಎಡಚಿತ್ರ), ಕೋಣೆ ಸುಟ್ಟು ಕರಕಲಾಗಿರುವುದು.
ನವೀನ್ ಕುಮಾರ್ ಟಿ
| Edited By: |

Updated on: Jul 22, 2025 | 2:52 PM

Share

ದೇವನಹಳ್ಳಿ, ಜುಲೈ 22: ಮುಸ್ಸಂಜೆಯಲ್ಲಿ ಸೂರ್ಯಾಸ್ತವಾಗುತ್ತಿರುವಂತೆಯೇ ಇತ್ತ ಮನೆಯಲ್ಲಿನ ಕೋಣೆಯಿಂದ ಬೆಂಕಿಯ ರುದ್ರ ನರ್ತನವಾಗುತ್ತಿತ್ತು. ಶಾರ್ಟ್ ಸರ್ಕ್ಯೂಟ್ ಅಥವಾ ಗ್ಯಾಸ್ ಲೀಕ್ ಏನಾದರೂ ಆಯಿತೇ ಎಂದು ಸ್ಥಳೀಯರೆಲ್ಲ ಜಮಾಯಿಸಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡುವಷ್ಟರಲ್ಲೇ ಮನೆಯ ಅರ್ಧಭಾಗ ಸಂರ್ಪೂರ್ಣ ಸುಟ್ಟು ಕರಕಲಾಗಿತ್ತು. ಸುಂದರವಾಗಿದ್ದ ಐಷಾರಾಮಿ ಮನೆ ಹೀಗ್ಯಾಕಾಯಿತು ಎಂದು ಕೇಳಲು ಹೋದವರಿಗೆ ಸಿಕ್ಕಿದ್ದು, ಪ್ರೀತಿಸಿ ಮದುವೆಯಾಗುವುದಾಗಿ ವಂಚಿಸಿ ಮಗು ಕೊಟ್ಟು ಕೈ ಕೊಟ್ಟ ಹಳೆ ಪ್ರೇಮ ಕಥೆ!  ಮಹಿಳೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆ ದೊಡ್ಡಬಳ್ಳಾಪುರ (Doddaballapura) ನಗರದ ಕರೇನಹಳ್ಳಿ ನಿವಾಸಿ ಹಾಗೂ ಜಿಮ್ ಟ್ರೈನರ್ ಗೌತಮ್ ಎಂಬುವವನ ಜೊತೆ ಎಂಟು ವರ್ಷದಿಂದ ಪ್ರೀತಿ ಪ್ರೇಮದ ಬಲೆಗೆ ಬಿದ್ದಿದ್ದು ಗರ್ಭಿಣಿಯಾಗಿದ್ದಳು. ಆದರೆ, ಅಂದು ಈಕೆಯನ್ನು ಗರ್ಭಿಣಿ ಮಾಡಿದ್ದ ಗೌತಮ್, ಮತ್ತೊಬ್ಬಳ ಜೊತೆ ಸುತ್ತಾಡುತ್ತಿದ್ದ. ಅದನ್ನು ಕಂಡ ಸಂತ್ರಸ್ತೆ ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಅಲ್ಲದೆ, ನನ್ನ ಮಗುವಿಗೆ ತಂದೆ ಗೌತಮ್ ಎಂದು ಕೋರ್ಟ್​​ನಲ್ಲಿ ಕೇಸ್ ದಾಖಲಿಸಿದ್ದರು.

ಕೇಸ್ ಸಂಬಂಧ ವಿಚಾರಣೆ ನಡೆಯುತ್ತಿರುವಾಗಲೇ ಹಲವು ಬಾರಿ ಗಲಾಟೆ ಮಾಡಿಕೊಂಡಿದ್ದ ಗೌತಮ್ ಮತ್ತು ಸಂತ್ರಸ್ತೆ, ಇದೆಲ್ಲ ಬೇಡ ರಾಜಿ ಆಗೋಣ ಎಂದು ಒಪ್ಪಿಕೊಂಡಿದ್ದರು. ಅದರಂತೆ, ಗೌತಮ್ ಆಕೆಯನ್ನು 20 ದಿನಗಳ ಹಿಂದೆ ಮನೆಗೆ ಕರೆದುಕೊಂಡು ಹೋಗಿದ್ದ. ಆದರೆ, ಮನೆಗೆ ಕರೆದುಕೊಂಡು ಹೋದ ನಂತರ ನಿತ್ಯ ಪ್ರೀತಿಸಿದ್ದ ಸಂತ್ರಸ್ತೆ ಮತ್ತು ಆಕೆಯ ಮಗುವಿಗೆ ಗೌತಮ್ ಮತ್ತು ಆತನ ಕುಟುಂಬಸ್ಥರು ಕಿರುಕುಳ ನೀಡಿದ್ದಾರೆ.

ಮನೆಗೆ ಬಂದಳು ಮತ್ತೊಬ್ಬ ಬಾಣಂತಿ!

ಇತ್ತೀಚೆಗೆ ಮತ್ತೊಬ್ಬ ಬಾಣಂತಿಯನ್ನು ಪತ್ನಿ ಎಂದು ಗೌತಮ್ ಮನೆಗೆ ಕರೆತಂದಿದ್ದ ಎನ್ನಲಾಗಿದೆ. ಅದನ್ನು ಪ್ರಶ್ನಿಸಿದ ಸಂತ್ರಸ್ತೆ ವಿರುದ್ಧ ಗೌತಮ್ ಮತ್ತು ಆತನ ಕುಟುಂಬಸ್ಥರು ಹಲ್ಲೆ ಮಾಡಿ ಕಿರುಕುಳ ನೀಡಿದ್ದಾರೆ.

ಕೋಣೆಗೆ ಬೆಂಕಿ ಹಾಕಿ ಸಂತ್ರಸ್ತೆಯ ತಳ್ಳಿದ್ದ ಆರೋಪ

ಕಿರುಕುಳ ನೀಡಿದ್ದಷ್ಟೇ ಅಲ್ಲದೆ, ಮನೆಯ ಕೋಣೆಗೆ ಬೆಂಕಿ ಹಾಕಿ ಆ ಬೆಂಕಿಗೆ ಸಂತ್ರಸ್ತೆಯನ್ನು ತಳ್ಳಿ ಕೊಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಕೊಲೆ ಯತ್ನ ಮಾಡುವಾಗ ತಪ್ಪಿಸಿಕೊಂಡು ಹೊರಗಡೆ ಬಂದಿದ್ದು, ಈ ವೇಳೆ ನೆರವಿಗೆ ಬಂದ ಕುಟುಂಬಸ್ಥರ ಮೇಲೂ ಗೌತಮ್ ಮತ್ತು ಆತನ ತಾಯಿ ಸಹೋದರಿ ಹಲ್ಲೆ ಮಾಡಿದ್ದಾರೆ. ನಮಗೆ ನ್ಯಾಯ ಕೊಡಿಸಿ ಎಂದು ಸಂತ್ರಸ್ತೆ ಕಣ್​ಣೀರು ಹಾಕಿದ್ದಾರೆ.

ಆರೋಪಿ ಗೌತಮ್ ಮನೆಯವರು ಹೇಳೋದೇ ಬೇರೆ!

ಅತ್ತ ಗೌತಮ್ ಕುಟುಂಬಸ್ಥರು, ಸಂತ್ರಸ್ತೆಯೇ ನಮ್ಮ ಮನೆಗೆ ಬೆಂಕಿ ಹಾಕಿ ನಮ್ಮ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾಳೆ ಎಂದು ದೂರಿದ್ದಾರೆ. ಅಲ್ಲದೆ, ಏಳು ವರ್ಷಗಳಿಂದ ಕೇಸ್ ಕೋರ್ಟ್​​ನಲ್ಲಿ ನಡೆಯುತ್ತಿರುವಾಗ ನಮ್ಮ ಮನೆಗೆ 10 ರಿಂದ 12 ಜನ ಮಹಿಳೆಯರ ಜೊತೆ ಅತಿಕ್ರಮ ಪ್ರವೇಶ ಮಾಡಿದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ.

ಇದೇ ವಿಚಾರವಾಗಿ ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಕೇಸ್ ಸಹ ದಾಖಲಿಸಿದ್ದ ಕಾರಣ ಪೊಲೀಸರೇ ಬಂದು ಆಕೆಯನ್ನು ಮನೆಯಿಂದ ಹೊರಗಡೆ ಕಳುಹಿಸಿದ್ದರು. ಪೊಲೀಸರು ಮನೆಯಿಂದ ಹೊರಗಡೆ ಕಳುಹಿಸಿದಾಗ ಹೋದ ನಂತರ ಮತ್ತೆ ಬಂದು ಮನೆಯವರು ಹೊರಗಡೆ ಇರುವಾಗ ಈ ರೀತಿ ಮನೆಗೆ ಬೆಂಕಿ ಹಚ್ಚಿದ್ದಾಳೆ ಎಂದು ಗೌತಮ್ ಕುಟುಂಬಸ್ಥರು ಆರೋಪಿಸಿದ್ದಾರೆ.

ಇದನ್ನೂ ಓದಿ: ಪತ್ನಿಯೇ ನದಿಗೆ ತಳ್ಳಿದ್ದಾಳೆಂದು ಆರೋಪಿಸಿದ್ದ ಪತಿ ತಾತಪ್ಪನಿಗೆ ಸಂಕಷ್ಟ!

ಮನೆಗೆ ಬೆಂಕಿ ಬಿದ್ದ ಕಾರಣ ಮನೆಯ ಅರ್ಧಭಾಗದಷ್ಟು ಭಾಗಶಃ ಸುಟ್ಟು ಕರಕಲಾಗಿದ್ದು 25 ರಿಂದ 30 ಲಕ್ಷ ರೂಪಾಯಿಷ್ಟು ನಷ್ಟವಾಗಿದೆ ಎಂದು ಗೌತಮ್ ಕುಟುಂಬಸ್ಥರು ತಿಳಿಸಿದ್ದಾರೆ.

ಕೇಸ್ ಕೋರ್ಟ್​​ನಲ್ಲಿರುವಾಗಲೇ ಮನೆಯಲ್ಲಿ ಬೆಂಕಿಯ ಹೈಡ್ರಾಮಾ ನಡೆದಿರುವುದು ಪೊಲೀಸರಿಗೆ ತಲೆ ನೋವು ತರಿಸಿದೆ. ಬೆಂಕಿ ಹಚ್ಚಿದ್ದು ಯಾರು? ಯಾಕೆ ಎಂಬ ಸತ್ಯ ಪೊಲೀಸರ ತನಿಖೆಯಿಂದ ಬೆಳಕಿಗೆ ಬರಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ