AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನರಾಯಪಟ್ಟಣದಲ್ಲಿ ಫಲವತ್ತಾದ ಕೃಷಿ ಭೂಮಿ ಕಿತ್ಕೋಬೇಡಿ- ಸರ್ಕಾರಕ್ಕೆ ಕುಮಾರಸ್ವಾಮಿ ಕಿವಿಮಾತು, ಧರಣಿನಿರತರಿಗೆ ಬೆಂಬಲ

hd kumaraswamy: ಕೆಲ ದಲ್ಲಾಳಿಗಳು ಬಂದು ರೈತರಿಗೆ ಆಸೆ ಆಮಿಷ ಹುಟ್ಟಿಸಿ ತಲೆಕೆಡಿಸುವ ಕೆಲಸ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಅಂಥವರ ಮಾತು ಕೇಳಬೇಡಿ. ದುಡುಕಿ ಒಮ್ಮೆ ಭೂಮಿ ಕಳೆದುಕೊಂಡರೆ ಮತ್ತೆ ಸಂಪಾದನೆ ಮಾಡುವುದು ಕಷ್ಟ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರೈತರಲ್ಲಿ ಮನವಿ ಮಾಡಿದರು.

ಚನ್ನರಾಯಪಟ್ಟಣದಲ್ಲಿ ಫಲವತ್ತಾದ ಕೃಷಿ ಭೂಮಿ ಕಿತ್ಕೋಬೇಡಿ- ಸರ್ಕಾರಕ್ಕೆ ಕುಮಾರಸ್ವಾಮಿ ಕಿವಿಮಾತು, ಧರಣಿನಿರತರಿಗೆ ಬೆಂಬಲ
ಚನ್ನರಾಯಪಟ್ಟಣದಲ್ಲಿ ಫಲವತ್ತಾದ ಕೃಷಿ ಭೂಮಿ ಕಿತ್ಕೋಬೇಡಿ- ಸರ್ಕಾರಕ್ಕೆ ಹೆಚ್‌.ಡಿ.ಕುಮಾರಸ್ವಾಮಿ ಕಿವಿಮಾತು, ಧರಣಿನಿರತ ರೈತರಿಗೆ ಬೆಂಬಲ
Follow us
TV9 Web
| Updated By: ಸಾಧು ಶ್ರೀನಾಥ್​

Updated on:May 02, 2022 | 8:57 PM

ದೇವನಹಳ್ಳಿ: ತಾಲೂಕಿನ ಚನ್ನರಾಯಪಟ್ಟಣ ಸಮೀಪದ ಸುಮಾರು 18,00 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳಲು ಮುಂದಾಗಿರುವ ಕರ್ನಾಟಕ ಪ್ರದೇಶಾಭಿವೃದ್ಧಿ ಕೈಗಾರಿಕಾ ಮಂಡಳಿ (ಕೆಐಎಡಿಬಿ) ವಿರುದ್ಧ ಕಳೆದ 29 ದಿನಗಳಿಂದ ಧರಣಿ ಸತ್ಯಾಗ್ರಹ ನಡೆಸುತ್ತಿರುವ ರೈತರನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಂದು ಭೇಟಿಯಾದರು.

ಯಾವುದೇ ಕಾರಣಕ್ಕೂ ಭೂಮಿಯನ್ನು ಭೂಸ್ವಾಧೀನ ಮಾಡಿಕೊಳ್ಳಬಾರದು ಎಂದು ಒತ್ತಾಯ ಮಾಡಿದ ಕುಮಾರಸ್ವಾಮಿ ಅವರು, ಒಮ್ಮೆ ಭೂಮಿಯನ್ನು ಕಳೆದುಕೊಂಡರೆ ಮತ್ತೆ ಗಳಿಸಲು ಸಾಧ್ಯವಿಲ್ಲ. ತಲೆತಲಾಂತರಗಳಿಂದ ಬಾಳಿಬದುಕಿದ ಭೂಮಿಯನ್ನು ಕಳೆದುಕೊಳ್ಳುವುದು ಪ್ರತಿಯೊಬ್ಬರಿಗೂ ನೋವಿನ ಸಂಗತಿಯೇ ಹೌದು. ಸರಕಾರ ಈ ನಿಟ್ಟಿನಲ್ಲಿ ಗಮನ ಹರಿಸಬೇಕು ಎಂದರು.

ಪ್ರತಿಭಟನೆಯ ಸ್ಥಳಕ್ಕೆ ಧಾವಿಸಿದ ಬಂದ ಮಾಜಿ ಮುಖ್ಯಮಂತ್ರಿ, ಪ್ರತಿಯೊಬ್ಬ ರೈತನ ಜತೆಯೂ ಚರ್ಚಿಸಿದರು. ಫಲವತ್ತಾದ ಕೃಷಿ ಭೂಮಿ ಕಿತ್ತುಕೊಳ್ಳುತ್ತಿರುವ ಸರಕಾರದ ವಿರುದ್ಧ ಅವರು ಟೀಕಾಪ್ರಹಾರ ನಡೆಸಿದಲ್ಲದೆ, ತಾವು ರೈತರ ಪರ ನಿಲ್ಲುವುದಾಗಿ ಘೋಷಿಸಿದರು.

ರೈತರ ಹೋರಾಟಕ್ಕೆ ರೈತರ ಪಕ್ಷವಾಗಿ ಜೆಡಿಎಸ್‌ ಬೆಂಬಲ ವ್ಯಕ್ತಪಡಿಸಿದೆ. ಸ್ವಾಧೀನಕ್ಕೆ ಗುರುತಿಸಲಾಗಿರುವ ಪ್ರದೇಶದಲ್ಲಿ ಮುಕ್ಕಾಲು ಪಾಲು ರೈತರು ಭೂಮಿ ಕೊಡಲು ತಯಾರಿಲ್ಲ. ಅವರದ್ದು ಫಲವತ್ತಾದ ಕೃಷಿಯೋಗ್ಯ ಭೂಮಿ, ತೋಟಗಾರಿಕೆಗೆ ಹೇಳಿ ಮಾಡಿಸಿದ ಭೂಮಿ. ಈಗಾಗಲೇ ವಿಮಾನ ನಿಲ್ದಾಣ, ಕೈಗಾರಿಕೆಗಳು, ಬಡಾವಣೆಗಳಿಗೆ ಎಂದು ಹೇಳಿ ಸಾವಿರಾರು ಎಕರೆ ಭೂಮಿಯನ್ನು ಕಿತ್ತುಕೊಳ್ಳಲಾಗಿದೆ. ಈಗ ಅಳಿದುಳಿದ ಭೂಮಿಯನ್ನೂ ಕಿತ್ತುಕೊಳ್ಳಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಕೆಲ ರೈತರು ಭೂಮಿ ಕೊಡಲಿಕ್ಕೆ ಮುಂದಾಗಿದ್ದಾರೆ ಎಂಬ ಮಾಹಿತಿ ಬಂದಿದ್ದು, ಉಳಿದಂತೆ ಬಹಳಷ್ಟು ರೈತರು ಭೂಮಿ ಕೊಡಲು ಸಿದ್ಧರಿಲ್ಲ. ಆದರೆ ರೈತರ ನಡುವೆ ಭಿನ್ನಮತ ಎನ್ನುವುದು ಸರಿಯಲ್ಲ. ನೀವೆಲ್ಲ ಒಂದೆಡೆ ಕೂತು ಸಮಾಲೋಚನೆ ನಡೆಸಿ. ನಿಮ್ಮಲ್ಲಿ ಒಗ್ಗಟ್ಟು ಬರದೇ ಹೋದರೆ ಕಷ್ಟ ಎಂದು ಪ್ರತಿಭಟನಾಕಾರರಿಗೆ ಮಾಜಿ ಮುಖ್ಯಮಂತ್ರಿಗಳು ಕಿವಿಮಾತು ಹೇಳಿದರು. ಕೆಲ ದಲ್ಲಾಳಿಗಳು ಬಂದು ರೈತರಿಗೆ ಆಸೆ ಆಮಿಷ ಹುಟ್ಟಿಸಿ ತಲೆಕೆಡಿಸುವ ಕೆಲಸ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಅಂಥವರ ಮಾತು ಕೇಳಬೇಡಿ. ದುಡುಕಿ ಒಮ್ಮೆ ಭೂಮಿ ಕಳೆದುಕೊಂಡರೆ ಮತ್ತೆ ಸಂಪಾದನೆ ಮಾಡುವುದು ಕಷ್ಟ ಎಂದು ಅವರು ರೈತರಲ್ಲಿ ಮನವಿ ಮಾಡಿದರು.

ರಾಜಧಾನಿ ಬೆಂಗಳೂರು ಅಭಿವೃದ್ಧಿಗಾಗಿ ನಗರದ ಸುತ್ತಮುತ್ತಲ ಜನರು ದೊಡ್ಡ ತ್ಯಾಗವನ್ನೇ ಮಾಡಿದ್ದಾರೆ. ಕೈಗಾರಿಕೆ, ಬಡಾವಣೆಗಳ ನಿರ್ಮಾಣ, ಅಭಿವೃದ್ಧಿ ಯೋಜನೆಗಳಿಗೆಲ್ಲ ರೈತರು ಭೂಮಿ ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೇಳಿದರು. ಶಾಸಕ ನಿಸರ್ಗ ನಾರಾಯಣಸ್ವಾಮಿ, ಜೆಡಿಎಸ್‌ ನಾಯಕ ಮುನೇಗೌಡ, ರೈತ ಮುಖಂಡರು ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 8:55 pm, Mon, 2 May 22

ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ