AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನರಾಯಪಟ್ಟಣದಲ್ಲಿ ಫಲವತ್ತಾದ ಕೃಷಿ ಭೂಮಿ ಕಿತ್ಕೋಬೇಡಿ- ಸರ್ಕಾರಕ್ಕೆ ಕುಮಾರಸ್ವಾಮಿ ಕಿವಿಮಾತು, ಧರಣಿನಿರತರಿಗೆ ಬೆಂಬಲ

hd kumaraswamy: ಕೆಲ ದಲ್ಲಾಳಿಗಳು ಬಂದು ರೈತರಿಗೆ ಆಸೆ ಆಮಿಷ ಹುಟ್ಟಿಸಿ ತಲೆಕೆಡಿಸುವ ಕೆಲಸ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಅಂಥವರ ಮಾತು ಕೇಳಬೇಡಿ. ದುಡುಕಿ ಒಮ್ಮೆ ಭೂಮಿ ಕಳೆದುಕೊಂಡರೆ ಮತ್ತೆ ಸಂಪಾದನೆ ಮಾಡುವುದು ಕಷ್ಟ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರೈತರಲ್ಲಿ ಮನವಿ ಮಾಡಿದರು.

ಚನ್ನರಾಯಪಟ್ಟಣದಲ್ಲಿ ಫಲವತ್ತಾದ ಕೃಷಿ ಭೂಮಿ ಕಿತ್ಕೋಬೇಡಿ- ಸರ್ಕಾರಕ್ಕೆ ಕುಮಾರಸ್ವಾಮಿ ಕಿವಿಮಾತು, ಧರಣಿನಿರತರಿಗೆ ಬೆಂಬಲ
ಚನ್ನರಾಯಪಟ್ಟಣದಲ್ಲಿ ಫಲವತ್ತಾದ ಕೃಷಿ ಭೂಮಿ ಕಿತ್ಕೋಬೇಡಿ- ಸರ್ಕಾರಕ್ಕೆ ಹೆಚ್‌.ಡಿ.ಕುಮಾರಸ್ವಾಮಿ ಕಿವಿಮಾತು, ಧರಣಿನಿರತ ರೈತರಿಗೆ ಬೆಂಬಲ
TV9 Web
| Edited By: |

Updated on:May 02, 2022 | 8:57 PM

Share

ದೇವನಹಳ್ಳಿ: ತಾಲೂಕಿನ ಚನ್ನರಾಯಪಟ್ಟಣ ಸಮೀಪದ ಸುಮಾರು 18,00 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳಲು ಮುಂದಾಗಿರುವ ಕರ್ನಾಟಕ ಪ್ರದೇಶಾಭಿವೃದ್ಧಿ ಕೈಗಾರಿಕಾ ಮಂಡಳಿ (ಕೆಐಎಡಿಬಿ) ವಿರುದ್ಧ ಕಳೆದ 29 ದಿನಗಳಿಂದ ಧರಣಿ ಸತ್ಯಾಗ್ರಹ ನಡೆಸುತ್ತಿರುವ ರೈತರನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಂದು ಭೇಟಿಯಾದರು.

ಯಾವುದೇ ಕಾರಣಕ್ಕೂ ಭೂಮಿಯನ್ನು ಭೂಸ್ವಾಧೀನ ಮಾಡಿಕೊಳ್ಳಬಾರದು ಎಂದು ಒತ್ತಾಯ ಮಾಡಿದ ಕುಮಾರಸ್ವಾಮಿ ಅವರು, ಒಮ್ಮೆ ಭೂಮಿಯನ್ನು ಕಳೆದುಕೊಂಡರೆ ಮತ್ತೆ ಗಳಿಸಲು ಸಾಧ್ಯವಿಲ್ಲ. ತಲೆತಲಾಂತರಗಳಿಂದ ಬಾಳಿಬದುಕಿದ ಭೂಮಿಯನ್ನು ಕಳೆದುಕೊಳ್ಳುವುದು ಪ್ರತಿಯೊಬ್ಬರಿಗೂ ನೋವಿನ ಸಂಗತಿಯೇ ಹೌದು. ಸರಕಾರ ಈ ನಿಟ್ಟಿನಲ್ಲಿ ಗಮನ ಹರಿಸಬೇಕು ಎಂದರು.

ಪ್ರತಿಭಟನೆಯ ಸ್ಥಳಕ್ಕೆ ಧಾವಿಸಿದ ಬಂದ ಮಾಜಿ ಮುಖ್ಯಮಂತ್ರಿ, ಪ್ರತಿಯೊಬ್ಬ ರೈತನ ಜತೆಯೂ ಚರ್ಚಿಸಿದರು. ಫಲವತ್ತಾದ ಕೃಷಿ ಭೂಮಿ ಕಿತ್ತುಕೊಳ್ಳುತ್ತಿರುವ ಸರಕಾರದ ವಿರುದ್ಧ ಅವರು ಟೀಕಾಪ್ರಹಾರ ನಡೆಸಿದಲ್ಲದೆ, ತಾವು ರೈತರ ಪರ ನಿಲ್ಲುವುದಾಗಿ ಘೋಷಿಸಿದರು.

ರೈತರ ಹೋರಾಟಕ್ಕೆ ರೈತರ ಪಕ್ಷವಾಗಿ ಜೆಡಿಎಸ್‌ ಬೆಂಬಲ ವ್ಯಕ್ತಪಡಿಸಿದೆ. ಸ್ವಾಧೀನಕ್ಕೆ ಗುರುತಿಸಲಾಗಿರುವ ಪ್ರದೇಶದಲ್ಲಿ ಮುಕ್ಕಾಲು ಪಾಲು ರೈತರು ಭೂಮಿ ಕೊಡಲು ತಯಾರಿಲ್ಲ. ಅವರದ್ದು ಫಲವತ್ತಾದ ಕೃಷಿಯೋಗ್ಯ ಭೂಮಿ, ತೋಟಗಾರಿಕೆಗೆ ಹೇಳಿ ಮಾಡಿಸಿದ ಭೂಮಿ. ಈಗಾಗಲೇ ವಿಮಾನ ನಿಲ್ದಾಣ, ಕೈಗಾರಿಕೆಗಳು, ಬಡಾವಣೆಗಳಿಗೆ ಎಂದು ಹೇಳಿ ಸಾವಿರಾರು ಎಕರೆ ಭೂಮಿಯನ್ನು ಕಿತ್ತುಕೊಳ್ಳಲಾಗಿದೆ. ಈಗ ಅಳಿದುಳಿದ ಭೂಮಿಯನ್ನೂ ಕಿತ್ತುಕೊಳ್ಳಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಕೆಲ ರೈತರು ಭೂಮಿ ಕೊಡಲಿಕ್ಕೆ ಮುಂದಾಗಿದ್ದಾರೆ ಎಂಬ ಮಾಹಿತಿ ಬಂದಿದ್ದು, ಉಳಿದಂತೆ ಬಹಳಷ್ಟು ರೈತರು ಭೂಮಿ ಕೊಡಲು ಸಿದ್ಧರಿಲ್ಲ. ಆದರೆ ರೈತರ ನಡುವೆ ಭಿನ್ನಮತ ಎನ್ನುವುದು ಸರಿಯಲ್ಲ. ನೀವೆಲ್ಲ ಒಂದೆಡೆ ಕೂತು ಸಮಾಲೋಚನೆ ನಡೆಸಿ. ನಿಮ್ಮಲ್ಲಿ ಒಗ್ಗಟ್ಟು ಬರದೇ ಹೋದರೆ ಕಷ್ಟ ಎಂದು ಪ್ರತಿಭಟನಾಕಾರರಿಗೆ ಮಾಜಿ ಮುಖ್ಯಮಂತ್ರಿಗಳು ಕಿವಿಮಾತು ಹೇಳಿದರು. ಕೆಲ ದಲ್ಲಾಳಿಗಳು ಬಂದು ರೈತರಿಗೆ ಆಸೆ ಆಮಿಷ ಹುಟ್ಟಿಸಿ ತಲೆಕೆಡಿಸುವ ಕೆಲಸ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಅಂಥವರ ಮಾತು ಕೇಳಬೇಡಿ. ದುಡುಕಿ ಒಮ್ಮೆ ಭೂಮಿ ಕಳೆದುಕೊಂಡರೆ ಮತ್ತೆ ಸಂಪಾದನೆ ಮಾಡುವುದು ಕಷ್ಟ ಎಂದು ಅವರು ರೈತರಲ್ಲಿ ಮನವಿ ಮಾಡಿದರು.

ರಾಜಧಾನಿ ಬೆಂಗಳೂರು ಅಭಿವೃದ್ಧಿಗಾಗಿ ನಗರದ ಸುತ್ತಮುತ್ತಲ ಜನರು ದೊಡ್ಡ ತ್ಯಾಗವನ್ನೇ ಮಾಡಿದ್ದಾರೆ. ಕೈಗಾರಿಕೆ, ಬಡಾವಣೆಗಳ ನಿರ್ಮಾಣ, ಅಭಿವೃದ್ಧಿ ಯೋಜನೆಗಳಿಗೆಲ್ಲ ರೈತರು ಭೂಮಿ ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೇಳಿದರು. ಶಾಸಕ ನಿಸರ್ಗ ನಾರಾಯಣಸ್ವಾಮಿ, ಜೆಡಿಎಸ್‌ ನಾಯಕ ಮುನೇಗೌಡ, ರೈತ ಮುಖಂಡರು ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 8:55 pm, Mon, 2 May 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್