AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ 20 ಕೋಟಿ ರೂ. ಮೌಲ್ಯದ ಕೊಕೇನ್​ ಜಪ್ತಿ

ವಿದೇಶದಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಕೊಕೇನ್ ಸಾಗಿಸುತ್ತಿದ್ದವರು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾರೆ. ಏರ್​ಪೋರ್ಟ್​ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಬರೋಬ್ಬರಿ 20 ಕೋಟಿ ರೂ ಮೌಲ್ಯದ 2 ಕೆಜಿ ಕೊಕೇನ್​ ಪತ್ತೆಯಾಗಿದೆ.

ಬೆಂಗಳೂರಿನ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ 20 ಕೋಟಿ ರೂ. ಮೌಲ್ಯದ ಕೊಕೇನ್​ ಜಪ್ತಿ
ಡ್ರಗ್ಸ್ ಇರುವ ಕ್ಯಾಪ್ಸೂಲ್
ನವೀನ್ ಕುಮಾರ್ ಟಿ
| Edited By: |

Updated on:Dec 20, 2023 | 8:53 PM

Share

ಬೆಂಗಳೂರು, (ಡಿಸೆಂಬರ್ 20): ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ(Bengaluru kempegowda international airport) ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ವಿದೇಶದಿಂದ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಕೊಕೇನ್ ಜಪ್ತಿ ಮಾಡಿದ್ದಾರೆ. ಇಥಿಯೋಪಿಯಾದಿಂದ ಕ್ಯಾಪ್ಸುಲ್‌ಗಳ ರೂಪದಲ್ಲಿ 2 ಕೆಜಿ ಕೊಕೇನ್ ಸಾಗಿಸುತ್ತಿದ್ದ ವಿದೇಶಿ ಪ್ರಜೆ ಕೆಂಪೇಗೌಡ ಏರ್​ಪೋರ್ಟ್‌ನಲ್ಲಿ ಸಿಕ್ಕಿಬಿದ್ದಿದ್ದಾನೆ. ಬಂಧಿತನಿಂದ 20 ಕೋಟಿ ರೂ. ಮೌಲ್ಯದ 2 ಕೆಜಿ ಕೋಕೆನ್ ಡ್ರಗ್ಸ್ ವಶಕ್ಕೆ ಪಡೆದುಕೊಂಡಿದ್ದಾರೆ.

ಅದಿಸ್ ಅಬಾಬಾದಿಂದ ಇಥೋಪಿಯಾ ಏರ್ಲೈನ್ಸ್ ನಲ್ಲಿ ಬಂದಿದ್ದ ಆರೋಪಿ, ಡ್ರಗ್ಸ್​ ತುಂಬಿದ್ದ ಕ್ಯಾಪ್ಸೂಲ್‍ಗಳನ್ನು ನುಂಗಿಕೊಂಡು ಸಾಗಿಸುತ್ತಿದ್ದ. ಕಸ್ಟಮ್ಸ್ ಅಧಿಕಾರಿಗಳು ಆರೋಪಿಯನ್ನು ವಶಕ್ಕೆ ಪಡೆದು ಸ್ಕ್ಯಾನ್ ಮಾಡಿಸಿದಾಗ ಆರೋಪಿಯ ಹೊಟ್ಟೆಯಲ್ಲಿ 50ಕ್ಕೂ ಅಧಿಕ ಕ್ಯಾಪ್ಸೂಲ್​ಗಳು ಪತ್ತೆಯಾಗಿವೆ. ಬಳಿಕ ವೈದ್ಯರು ಆರೋಪಿಯ ಹೊಟ್ಟೆಯಲ್ಲಿದ್ದ ಕ್ಯಾಪ್ಸೂಲ್‍ಗಳನ್ನು ಹೊರಗೆ ತೆಗೆದಿದ್ದಾರೆ.

ಸದ್ಯ ಆರೋಪಿಯನ್ನು ತೀವ್ರ ವಿಚಾರಣೆಗೊಳಪಡಿಸಿದ್ದು, ಯಾರಿಂದ ಪಡೆದುಕೊಂಡು ಎಲ್ಲಿಗೆ ಕೊಂಡೊಯ್ಯುತ್ತಿದ್ದ ಎನ್ನುವ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ.

Published On - 8:33 pm, Wed, 20 December 23

Follow Us
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ