AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ 20 ಕೋಟಿ ರೂ. ಮೌಲ್ಯದ ಕೊಕೇನ್​ ಜಪ್ತಿ

ವಿದೇಶದಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಕೊಕೇನ್ ಸಾಗಿಸುತ್ತಿದ್ದವರು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾರೆ. ಏರ್​ಪೋರ್ಟ್​ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಬರೋಬ್ಬರಿ 20 ಕೋಟಿ ರೂ ಮೌಲ್ಯದ 2 ಕೆಜಿ ಕೊಕೇನ್​ ಪತ್ತೆಯಾಗಿದೆ.

ಬೆಂಗಳೂರಿನ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ 20 ಕೋಟಿ ರೂ. ಮೌಲ್ಯದ ಕೊಕೇನ್​ ಜಪ್ತಿ
ಡ್ರಗ್ಸ್ ಇರುವ ಕ್ಯಾಪ್ಸೂಲ್
ನವೀನ್ ಕುಮಾರ್ ಟಿ
| Edited By: |

Updated on:Dec 20, 2023 | 8:53 PM

Share

ಬೆಂಗಳೂರು, (ಡಿಸೆಂಬರ್ 20): ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ(Bengaluru kempegowda international airport) ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ವಿದೇಶದಿಂದ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಕೊಕೇನ್ ಜಪ್ತಿ ಮಾಡಿದ್ದಾರೆ. ಇಥಿಯೋಪಿಯಾದಿಂದ ಕ್ಯಾಪ್ಸುಲ್‌ಗಳ ರೂಪದಲ್ಲಿ 2 ಕೆಜಿ ಕೊಕೇನ್ ಸಾಗಿಸುತ್ತಿದ್ದ ವಿದೇಶಿ ಪ್ರಜೆ ಕೆಂಪೇಗೌಡ ಏರ್​ಪೋರ್ಟ್‌ನಲ್ಲಿ ಸಿಕ್ಕಿಬಿದ್ದಿದ್ದಾನೆ. ಬಂಧಿತನಿಂದ 20 ಕೋಟಿ ರೂ. ಮೌಲ್ಯದ 2 ಕೆಜಿ ಕೋಕೆನ್ ಡ್ರಗ್ಸ್ ವಶಕ್ಕೆ ಪಡೆದುಕೊಂಡಿದ್ದಾರೆ.

ಅದಿಸ್ ಅಬಾಬಾದಿಂದ ಇಥೋಪಿಯಾ ಏರ್ಲೈನ್ಸ್ ನಲ್ಲಿ ಬಂದಿದ್ದ ಆರೋಪಿ, ಡ್ರಗ್ಸ್​ ತುಂಬಿದ್ದ ಕ್ಯಾಪ್ಸೂಲ್‍ಗಳನ್ನು ನುಂಗಿಕೊಂಡು ಸಾಗಿಸುತ್ತಿದ್ದ. ಕಸ್ಟಮ್ಸ್ ಅಧಿಕಾರಿಗಳು ಆರೋಪಿಯನ್ನು ವಶಕ್ಕೆ ಪಡೆದು ಸ್ಕ್ಯಾನ್ ಮಾಡಿಸಿದಾಗ ಆರೋಪಿಯ ಹೊಟ್ಟೆಯಲ್ಲಿ 50ಕ್ಕೂ ಅಧಿಕ ಕ್ಯಾಪ್ಸೂಲ್​ಗಳು ಪತ್ತೆಯಾಗಿವೆ. ಬಳಿಕ ವೈದ್ಯರು ಆರೋಪಿಯ ಹೊಟ್ಟೆಯಲ್ಲಿದ್ದ ಕ್ಯಾಪ್ಸೂಲ್‍ಗಳನ್ನು ಹೊರಗೆ ತೆಗೆದಿದ್ದಾರೆ.

ಸದ್ಯ ಆರೋಪಿಯನ್ನು ತೀವ್ರ ವಿಚಾರಣೆಗೊಳಪಡಿಸಿದ್ದು, ಯಾರಿಂದ ಪಡೆದುಕೊಂಡು ಎಲ್ಲಿಗೆ ಕೊಂಡೊಯ್ಯುತ್ತಿದ್ದ ಎನ್ನುವ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ.

Published On - 8:33 pm, Wed, 20 December 23

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ