AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡಬಳ್ಳಾಪುರ: ಪಾನಮತ್ತ ಕಿಡಿಗೇಡಿಗಳಿಂದ ಆಡಿದ್ದೇ ಆಟ: ಬೈಕ್​ಗೆ ಡಿಕ್ಕಿ ಹೊಡೆದು, ಕಿಡಿ ಹಚ್ಚಿ ಪರಾರಿ! ಮುಂದೇನಾಯ್ತು?

ಖದೀಮರು ಚಾಕು ತೋರಿಸುತ್ತಿದ್ದಂತೆ ಬೈಕ್ ಮಾಲೀಕ ಬೈಕ್ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ. ಮಾಲೀಕ‌‌ ಪರಾರಿಯಾದ ಅಂತ ಬೈಕ್ ಗೆ ಬೆಂಕಿ ಹಚ್ಚಿ ಪುಂಡಾಟ ಮೆರೆದಿದ್ದಾರೆ. ಕಿಡಿಗೇಡಿಗಳು, ಶೈನ್ ಬೈಕ್ ಅನ್ನ ರಸ್ತೆ ಬದಿಯ ಹಳ್ಳಕ್ಕೆ ಹಾಕಿ ಕಿಡಿ ಹಚ್ಚಿದ್ದಾರೆ.

ದೊಡ್ಡಬಳ್ಳಾಪುರ: ಪಾನಮತ್ತ ಕಿಡಿಗೇಡಿಗಳಿಂದ ಆಡಿದ್ದೇ ಆಟ: ಬೈಕ್​ಗೆ ಡಿಕ್ಕಿ ಹೊಡೆದು, ಕಿಡಿ ಹಚ್ಚಿ ಪರಾರಿ! ಮುಂದೇನಾಯ್ತು?
ಪಾನಮತ್ತ ಕಿಡಿಗೇಡಿಗಳಿಂದ ಆಡಿದ್ದೇ ಆಟ: ಬೈಕ್​ಗೆ ಡಿಕ್ಕಿ ಹೊಡೆದು, ಕಿಡಿ ಹಚ್ಚಿ ಪರಾರಿ! ಮುಂದೇನಾಯ್ತು?
TV9 Web
| Updated By: ಸಾಧು ಶ್ರೀನಾಥ್​|

Updated on: Sep 30, 2021 | 12:26 PM

Share

ದೊಡ್ಡಬಳ್ಳಾಪುರ: ಖದೀಮರು ಕುಡಿದ ನಶೆಯಲ್ಲಿ ರಸ್ತೆಯಲ್ಲಿ ಅಡ್ಡಾದಿಡ್ಡಿ ಗಾಡಿ ಚಲಾಯಿಸಿ ಮತ್ತೊಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದಾರೆ. ಇನ್ನು ಡಿಕ್ಕಿ‌ ಹೊಡೆದಿದ್ದನ್ನ ಪ್ರಶ್ನಿಸಿದಕ್ಕೆ ಚಾಕು ತೋರಿಸಿ ಹಲ್ಲೆಗೆ ಯತ್ನಿಸಿ ಬೈಕ್ ಗೆ ಬೆಂಕಿ ಹಚ್ಚಿರುವ ಘಟನೆಯೂ ನಡೆದಿದೆ. ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುಕೋಟೆ ಗ್ರಾಮದ ಬಳಿ ಘಟನೆ ನಡೆದಿದೆ.

ಖದೀಮರು ಚಾಕು ತೋರಿಸುತ್ತಿದ್ದಂತೆ ಬೈಕ್ ಮಾಲೀಕ ಬೈಕ್ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ. ಮಾಲೀಕ‌‌ ಪರಾರಿಯಾದ ಅಂತ ಬೈಕ್ ಗೆ ಬೆಂಕಿ ಹಚ್ಚಿ ಪುಂಡಾಟ ಮೆರೆದಿದ್ದಾರೆ. ಕಿಡಿಗೇಡಿಗಳು, ಶೈನ್ ಬೈಕ್ ಅನ್ನ ರಸ್ತೆ ಬದಿಯ ಹಳ್ಳಕ್ಕೆ ಹಾಕಿ ಕಿಡಿ ಹಚ್ಚಿದ್ದಾರೆ.

ಆದರೆ ಗ್ರಾಮಸ್ಥರು ಬೆಂಕಿ ಹಚ್ಚಿ ಎಸ್ಕೇಪ್ ಆಗ್ತಿದ್ದವರನ್ನ ಮುಂದಿನ ಗ್ರಾಮದ ಬಳಿ ಅಡ್ಡಗಟ್ಟಿ ಹಿಡಿದುಕೊಂಡಿದ್ದಾರೆ. ಸ್ಥಳೀಯರು ಹೆಸರಘಟ್ಟ ಮೂಲದ ಮೂವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Also Read: ಸಿಲಿಕಾನ್ ಸಿಟಿಯಲ್ಲಿ ಕಿಡಿಗೇಡಿಗಳ ಅಟ್ಟಹಾಸ; ಬೈಕ್​ನಲ್ಲಿ ಬಂದವರಿಂದ ಮನೆ ಮುಂದೆ ನಿಲ್ಲಿಸಿದ್ದ 17 ಕಾರಿನ ಗಾಜುಗಳು ಪುಡಿ ಪುಡಿ

Also Read: ಇದು ಬೈಕ್​ ವೀಲಿಂಗ್​ ಅಲ್ಲ ಸೈಕಲ್ ವೀಲಿಂಗ್! ನಡುರಸ್ತೆಯಲ್ಲಿ ಯುವಕರ ಸೈಕಲ್ ವೀಲಿಂಗ್ ಕಂಡು ವಾಹನ ಸವಾರರು ಕಕ್ಕಾಬಿಕ್ಕಿ

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!