AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ರಾಜ್ಯದಿಂದ ತೆರಳಬೇಕಿದ್ದ ವಿಮಾನಗಳ ಹಾರಾಟ ರದ್ದು

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರತದಿಂದ ದುಬೈಗೆ ಹಾರಾಟ ನಡೆಸಬೇಕಿದ್ದ ವಿಮಾನಗಳು ರದ್ದಾಗಿವೆ. ಏರ್ ಇಂಡಿಯಾ, ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸೇವೆಗಳು ಸ್ಥಗಿತಗೊಂಡಿದ್ದು, ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ 24 ಹಾಗೂ ಮಂಗಳೂರಿನಿಂದ ಕೆಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ. ಪ್ರಯಾಣಿಕರು ಶುಲ್ಕವಿಲ್ಲದೆ ಪ್ರಯಾಣ ಮರುನಿಗದಿಪಡಿಸಲು ಅಥವಾ ಪೂರ್ಣ ಹಣ ಮರಳಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ರಾಜ್ಯದಿಂದ ತೆರಳಬೇಕಿದ್ದ ವಿಮಾನಗಳ ಹಾರಾಟ ರದ್ದು
ಏರ್ ಇಂಡಿಯಾ ಎಕ್ಸಪ್ರೆಸ್​​ ವಿಮಾನImage Credit source: Google
ಹರೀಶ್ ಜಿ.ಆರ್​.
| Edited By: |

Updated on: Mar 16, 2026 | 3:01 PM

Share

ಬೆಂಗಳೂರು, ಮಾರ್ಚ್​​ 16: ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ ಹಿನ್ನೆಲೆ ಭಾರತದಿಂದ ದುಬೈಗೆ ತೆರಳಬೇಕಿದ್ದ ವಿಮಾನಗಳ ಹಾರಾಟ ರದ್ದುಗೊಂಡಿದೆ. ಏರ್‌ ಇಂಡಿಯಾ, ಏರ್ ಇಂಡಿಯಾ ಎಕ್ಸಪ್ರೆಸ್ ವಿಮಾನಗಳ ಹಾರಾಟ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ ಭವಿಷ್ಯದ ಬೇರೆ ದಿನಾಂಕಕ್ಕೆ ತಮ್ಮ ಪ್ರಯಾಣವನ್ನು ಮರುನಿಗದಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಪ್ರಯಾಣ ಬೇಡವೆನ್ನುವವರು ಟಿಕೆಟ್ ರದ್ದುಗೊಳಿಸಿ ಪೂರ್ಣ ಹಣವನ್ನು ಮರಳಿ ಪಡೆಯಬಹುದಾಗಿದೆ. ಇನ್ನು ವಿಮಾನ ರದ್ದಿನಿಂದ‌ ದುಬೈನಲ್ಲಿ ಸಿಲುಕಿರುವ ಪ್ರಯಾಣಿಕರು ಪರದಾಟ ನಡೆಸಿರುವ ಪ್ರಸಂಗವೂ ವರದಿಯಾಗಿದೆ.

ಬೆಂಗಳೂರಲ್ಲಿ 24 ವಿಮಾನಗಳ ಹಾರಾಟ ಕ್ಯಾನ್ಸಲ್

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​ಪೋರ್ಟ್​ನಿಂದ ನಿರ್ಗಮನ ಮತ್ತು ಆಗಮಿಸಬೇಕಿದ್ದ ಒಟ್ಟು 24 ವಿಮಾನಗಳ ಹಾರಾಟ ಕ್ಯಾನ್ಸಲ್ ಆಗಿವೆ. ಕೆಂಪೇಗೌಡ ಏರ್​ಪೋರ್ಟ್​ನಿಂದ ನಿರ್ಗಮಿಸಬೇಕಿದ್ದ 11 ಫ್ಲೈಟ್​ಗಳು ಮತ್ತು ಅರಬ್ ದೇಶಗಳಿಂದ ಕೆಐಎಬಿಗೆ ಆಗಮಿಸಬೇಕಿದ್ದ 13 ಫ್ಲೈಟ್ ರದ್ದಾಗಿವೆ. ಅಬುದಾಬಿ, ರಿಯಾದ್, ಜಿಡ್ಡಾ, ಡಮಾಮ್, ದುಬೈ ಹಾಗೂ ದೋಹಾದಿಂದ ಕೆಐಎಬಿಗೆ ಆಗಮಿಸಿದ್ದ ವಿಮಾನಗಳು ಕ್ಯಾನ್ಸಲ್ ಆಗಿವೆ ಎನ್ನಲಾಗಿದೆ.

ಇದನ್ನೂ ಓದಿ: ಯುದ್ಧ ಕುರಿತು ಸುಳ್ಳು ಸುದ್ದಿ ಹರಡಿದ ಆರೋಪ; ಯುಎಇಯಲ್ಲಿ 19 ಭಾರತೀಯರು ಸೇರಿ 35 ಮಂದಿ ಬಂಧನ

ಮಂಗಳೂರು ಏರ್​​ಪೋರ್ಟ್​​ನಿಂದಲೂ ವಿಮಾನ ಹಾರಾಟ ವ್ಯತ್ಯಯ

ದುಬೈ ವಿಮಾನ ನಿಲ್ದಾಣದ ಬಳಿ ದಾಳಿ ಹಿನ್ನೆಲೆ ಮಂಗಳೂರಿನಿಂದ ದುಬೈ, ಡಮಾಮ್ ಮತ್ತು ಅಬುಧಾಬಿಗೆ ವಿಮಾನ ಸೇವೆ ಸ್ಥಗಿತಗೊಂಡಿದೆ. ಏರ್ ಇಂಡಿಯಾ ಎಕ್ಸ್​​ಪ್ರೆಸ್​​ನ ಇಂದು ಮತ್ತು ನಾಳೆಯ ವಿಮಾನ ಹಾರಾಟ ರದ್ದಾಗಿದೆ. ಯುನೈಟೆಡ್‌ ಅರಬ್‌ ಎಮಿರೇಟ್ಸ್ ವಿಮಾನ ನಿಲ್ದಾಣದ ಅಧಿಕಾರಿಗಳ ಸೂಚನೆಯ ಹಿನ್ನೆಲೆ ವಿಮಾನಯಾನ ಹಾರಾಟ ನಡೆಸುತ್ತಿಲ್ಲ ಎಂದು ತಿಳಿದುಬಂದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲ್​ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲ್​ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಕಾಳಸಂತೆಯಲ್ಲಿ ಸಿಲಿಂಡರ್ ಸೇಲ್ ! ಗ್ಯಾಸ್​ ದಂಧೆಕೋರರ ವಿರುದ್ಧ 3 ಎಫ್​ಐಆರ್
ಕಾಳಸಂತೆಯಲ್ಲಿ ಸಿಲಿಂಡರ್ ಸೇಲ್ ! ಗ್ಯಾಸ್​ ದಂಧೆಕೋರರ ವಿರುದ್ಧ 3 ಎಫ್​ಐಆರ್
ಬನ್ನೇರುಘಟ್ಟ ಝೂಗೆ ಹೊಸ ಅತಿಥಿಗಳ ಆಗಮನ: ಇಲ್ಲಿದೆ ವಿಡಿಯೋ
ಬನ್ನೇರುಘಟ್ಟ ಝೂಗೆ ಹೊಸ ಅತಿಥಿಗಳ ಆಗಮನ: ಇಲ್ಲಿದೆ ವಿಡಿಯೋ
ಜೀ5 ಅಲ್ಲಿ ಬರ್ತಿದೆ ಹೊಸ ವೆಬ್ ಸರಣಿ; ಡಾಲಿ ನಿರ್ಮಾಣ
ಜೀ5 ಅಲ್ಲಿ ಬರ್ತಿದೆ ಹೊಸ ವೆಬ್ ಸರಣಿ; ಡಾಲಿ ನಿರ್ಮಾಣ
ವೀಕೆಂಡ್​ನಲ್ಲೂ ನಂದಿ ಹಿಲ್ಸ್ ಖಾಲಿ! ಊಟ-ತಿಂಡಿ ಸಿಗಲ್ಲ ಎಂದು ಬಾರದ ಜನ
ವೀಕೆಂಡ್​ನಲ್ಲೂ ನಂದಿ ಹಿಲ್ಸ್ ಖಾಲಿ! ಊಟ-ತಿಂಡಿ ಸಿಗಲ್ಲ ಎಂದು ಬಾರದ ಜನ
ಪಾಕ್ ಪಡೆಯನ್ನು ಮಕಾಡೆ ಮಲಗಿಸಿ ಹೊಸ ಇತಿಹಾಸ ಬರೆದ ಬಾಂಗ್ಲಾದೇಶ್
ಪಾಕ್ ಪಡೆಯನ್ನು ಮಕಾಡೆ ಮಲಗಿಸಿ ಹೊಸ ಇತಿಹಾಸ ಬರೆದ ಬಾಂಗ್ಲಾದೇಶ್