ನಂದಿ ಬೆಟ್ಟ ಸುತ್ತು ಹಾಕಿಕೊಂಡು ಬಂದ ದುಬೈ ವಿಮಾನ ಕೆಂಪೇಗೌಡ ಏರ್​​ಪೋರ್ಟ್​ನಲ್ಲಿ ತುರ್ತು ಭೂಸ್ವರ್ಶ

ಟೇಕ್​ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. 200 ಪ್ರಯಾಣಿಕರನ್ನ ಹೊತ್ತು ಹಾರಿದ್ದ ವಿಮಾನ ತಾಂತ್ರಿಕ ದೋಷದಿಂದ ಭೂಸ್ಪರ್ಶ ಮಾಡಿದೆ.

ನಂದಿ ಬೆಟ್ಟ ಸುತ್ತು ಹಾಕಿಕೊಂಡು ಬಂದ ದುಬೈ ವಿಮಾನ ಕೆಂಪೇಗೌಡ ಏರ್​​ಪೋರ್ಟ್​ನಲ್ಲಿ ತುರ್ತು ಭೂಸ್ವರ್ಶ
ಸಾಂದರ್ಭಿಕ ಚಿತ್ರ
Follow us
|

Updated on:Apr 03, 2023 | 12:56 PM

ದೇವನಹಳ್ಳಿ: ಟೇಕ್ ಆಫ್ ಆದ ಕೆಲವೇ ನಿಮಿಷದಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್​​ಪೋರ್ಟ್​ನಲ್ಲಿ(Kempegowda International Airport Bengaluru) ನಿನ್ನೆ(ಮಾರ್ಚ್ 02) ರಾತ್ರಿ 9.07ಕ್ಕೆ ನಡೆದಿದೆ. ದುಬೈಗೆ ತೆರಳುತ್ತಿದ್ದ ಎತಿಹಾದ್​​ ವಿಮಾನ​ ಟೇಕ್ ಆಫ್ ಆದ ಕೆಲವೇ ನಿಮಿಷದಲ್ಲಿ ಮತ್ತೆ ವಾಪಾಸ್ ಏರ್​ಪೋರ್ಟ್​ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ತಾಂತ್ರಿಕ ದೋಷದಿಂದ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

EY 237 ಸಂಖ್ಯೆಯ ಎತಿಹಾದ್​​ ವಿಮಾನ 200 ಪ್ರಯಾಣಿಕರನ್ನ ಹೊತ್ತು ಬೆಂಗಳೂರಿನಿಂದ ಅಬುದಭಿಗೆ ಹಾರಿತ್ತು. ಈ ವೇಳೆ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆ ನಂದಿ ಬೆಟ್ಟ ಸುತ್ತು ಹಾಕಿಕೊಂಡು ತಕ್ಷಣವೇ ತುರ್ತು ಭೂಸ್ಪರ್ಶ ಮಾಡಿದೆ. ನಂತರ ದೋಷ ಸರಿಪಡಿಸಿಕೊಂಡು ನಾಲ್ಕು ಗಂಟೆ ತಡವಾಗಿ ವಿಮಾನ ಅಬುದಭಿಗೆ ತೆರಳಿದೆ. ಘಟನೆ ವೇಳೆ ಪ್ರಯಾಣಿಕರಲ್ಲಿ ಕೆಲ ಹೊತ್ತು ಆತಂಕ ಮೂಡಿತ್ತು.

ಟರ್ಮಿನಲ್ 2ರಿಂದ ವಿಸ್ತಾರ ವಿಮಾನ ಸೇವೆ; ಮಾರ್ಚ್ 26ರಿಂದ ಲಭ್ಯ

ಬೆಂಗಳೂರು: ಟಾಟಾ ಸಮೂಹದ (Tata Group) ಸಿಂಗಾಪುರ ಏರ್​ಲೈನ್ಸ್ ಬ್ರ್ಯಾಂಡ್ ಆಗಿರುವ ‘ವಿಸ್ತಾರ (Vistara)’ ಮಾರ್ಚ್ 26ರಿಂದ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಟರ್ಮಿನಲ್ 2ರಿಂದ ಸೇವೆ ಆರಂಭಿಸಲಿದೆ. ಇದರೊಂದಿಗೆ, ಟರ್ಮಿನಲ್ 2ರಿಂದ ಕಾರ್ಯಾಚರಣೆ ಆರಂಭಿಸುತ್ತಿರುವ ಮೂರನೇ ವಿಮಾನಯಾನ ಸಂಸ್ಥೆಯಾಗಲಿದೆ. ‘ಡಿಯರ್ ಬೆಂಗಳೂರು, ನಾವು ಟರ್ಮಿನಲ್ 2 ಅನ್ನು ಪ್ರವೇಶಿಸುತ್ತಿದ್ದೇವೆ. ನಮ್ಮ ವಿಮಾನಗಳು ಮಾರ್ಚ್ 26ರಿಂದ ಟರ್ಮಿನಲ್ 2ರಿಂದ ಕಾರ್ಯಾಚರಣೆ ಮಾಡಲಿವೆ’ ಎಂದು ಟ್ವೀಟ್ ಮೂಲಕ ವಿಸ್ತಾರ ಮಾಹಿತಿ ನೀಡಿದೆ. ವಿಸ್ತಾರ ವಿಮಾನಗಳು ಬೆಂಗಳೂರಿನಿಂದ ಮುಂಬೈ, ಗೋವಾ, ಡೆಹ್ರಾಡೂನ್, ದೆಹಲಿ, ಹೈದರಾಬಾದ್, ಪುಣೆ ಹಾಗೂ ಚಂಡೀಗಢಕ್ಕೆ ತೆರಳುತ್ತವೆ.

ಪ್ರಸ್ತುತ ಏರ್​ ಏಷ್ಯಾ, ಸ್ಟಾರ್ ಏರ್​ವೇಸ್ ಟರ್ಮಿನಲ್ 2ರಿಂದ ಕಾರ್ಯಾಚರಣೆ ನಡೆಸುತ್ತಿವೆ. ಜನವರಿ 15ರಂದು ಸ್ಟಾರ್​​ ಏರ್​ವೇಸ್ ವಿಮಾನ ಬೆಂಗಳೂರಿನಿಂದ ಕಲಬುರಗಿಗೆ ತೆರಳುವ ಮೂಲಕ ಟರ್ಮಿನಲ್ 2ರಲ್ಲಿ ಕಾರ್ಯಾಚರಣೆ ಆರಂಭವಾಗಿತ್ತು. ವಿಮಾನ ನಿಲ್ದಾಣದಿಂದ ಪ್ರಯಾಣಿಕರನ್ನು ಕರೆದೊಯ್ಯಲು ಮತ್ತು ಡ್ರಾಪ್ ಮಾಡಲು ಸುಗಮ ವಾಹನ ಆಗಮನ, ನಿರ್ಗಮನಕ್ಕಾಗಿ ಟರ್ಮಿನಲ್​ 2ಗೆ ಐದು ಪಥದ ಮಾರ್ಗವೂ ಇದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:41 pm, Mon, 3 April 23

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ