ದಸರಾ ಹಬ್ಬದಲ್ಲಿ ಖಾಸಗಿ ಬಸ್​ಗಳಿಗೆ ಸುಗ್ಗಿ: ಆರ್​ಟಿಒ ದಾಳಿ, ಲಗೇಜ್ ಕ್ಯಾರಿಯರ್​ಗಳಲ್ಲಿ ಪ್ರಯಾಣಿಕರನ್ನ ನೋಡಿ ಶಾಕ್

ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಖಾಸಗಿ ಬಸ್​ಗಳ ಪರಿಶೀಲನೆ ಮಾಡಲಾಗಿದ್ದು ಲಗೇಜ್ ಕ್ಯಾರಿಯರ್​​ನಲ್ಲೂ ಜನರು ಪ್ರಯಾಣಿಸುತ್ತಿರುವುದು ಕಂಡು ಬಂದಿದೆ. ಬಸ್​ನ ಕೆಳ‌ ಭಾಗದ ಲಗೇಜ್ ಇಡುವ ಜಾಗದಲ್ಲಿ ಬೆಡ್​ ಹಾಕಿ ಜನ ಮಲಗಿಕೊಂಡು ಪ್ರಯಾಣಿಸುತ್ತಿದ್ದಾರೆ. ಗಾಳಿಯಾಡದ ಲಗೇಜ್ ಕ್ಯಾರಿಯರ್​​ನಲ್ಲಿ ಮಲಗಿ ಪ್ರಯಾಣಿಸುತ್ತಿದ್ದ ಮೂವರನ್ನು ಕಂಡು ಅಧಿಕಾರಿಗಳು ಶಾಕ್ ಆಗಿದ್ದಾರೆ.

ದಸರಾ ಹಬ್ಬದಲ್ಲಿ ಖಾಸಗಿ ಬಸ್​ಗಳಿಗೆ ಸುಗ್ಗಿ: ಆರ್​ಟಿಒ ದಾಳಿ, ಲಗೇಜ್ ಕ್ಯಾರಿಯರ್​ಗಳಲ್ಲಿ ಪ್ರಯಾಣಿಕರನ್ನ ನೋಡಿ ಶಾಕ್
RTO ಅಧಿಕಾರಿಗಳ ಕಾರ್ಯಾಚರಣೆ
Edited By: ಆಯೇಷಾ ಬಾನು

Updated on: Oct 17, 2023 | 9:13 AM

ದೇವನಹಳ್ಳಿ, ಅ.17: ದಸರಾ (Mysuru Dasara) ಹಬ್ಬ ಹಿನ್ನೆಲೆ ಖಾಸಗಿ ಬಸ್​ಗಳು ಪ್ರಯಾಣಿಕರಿಂದ ಹೆಚ್ಚು ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು ಆರ್​ಟಿಒ ಅಧಿಕಾರಿಗಳು (RTO Officers) ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯಿರುವ ಟೋಲ್​ ಮೇಲೆ ಆರ್​ಟಿಒ ಅಧಿಕಾರಿಗಳು ದಾಳಿ ನಡೆಸಿ ಖಾಸಗಿ ಬಸ್​ಗಳ ಪರಿಶೀಲನೆ ನಡೆಸಿ ಚಾಲಕ, ನಿರ್ವಾಹಕನಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಕಾರ್ಯಾಚರಣೆ ವೇಳೆ ಖಾಸಗಿ ಬಸ್​ಗಳು ಲಗೇಜ್ ಕ್ಯಾರಿಯರ್​​ನಲ್ಲೂ ಜನರನ್ನು ಸಾಗಿಸುತ್ತಿರುವುದು ಕಂಡು ಬಂದಿದೆ.

ದಸರಾ, ನವರಾತ್ರಿ ಹಿನ್ನೆಲೆ ಸಾಲು ಸಾಲು ರಜೆಗಳು ಸಿಕ್ಕಿದ್ದು ಜನ ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡ ಖಾಸಗಿ ಬಸ್​ಗಳು ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿವೆ. ಹೀಗಾಗಿ ದೇವನಹಳ್ಳಿ RTO ಶ್ರೀನಿವಾಸಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು ದೇವನಹಳ್ಳಿ, ಏರ್​​ಪೋರ್ಟ್​ ಟೋಲ್ ಬಳಿ ಅಧಿಕಾರಿಗಳು ಖಾಸಗಿ ಬಸ್​ಗಳ ಪರಿಶೀಲನೆ ನಡೆಸಿದ್ದಾರೆ.

ಲಗೇಜ್ ಕ್ಯಾರಿಯರ್​​ನಲ್ಲೂ ಜನರ ಪ್ರಯಾಣ

ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಖಾಸಗಿ ಬಸ್​ಗಳ ಪರಿಶೀಲನೆ ಮಾಡಲಾಗಿದ್ದು ಲಗೇಜ್ ಕ್ಯಾರಿಯರ್​​ನಲ್ಲೂ ಜನರು ಪ್ರಯಾಣಿಸುತ್ತಿರುವುದು ಕಂಡು ಬಂದಿದೆ. ಬಸ್​ನ ಕೆಳ‌ ಭಾಗದ ಲಗೇಜ್ ಇಡುವ ಜಾಗದಲ್ಲಿ ಬೆಡ್​ ಹಾಕಿ ಜನ ಮಲಗಿಕೊಂಡು ಪ್ರಯಾಣಿಸುತ್ತಿದ್ದಾರೆ. ಗಾಳಿಯಾಡದ ಲಗೇಜ್ ಕ್ಯಾರಿಯರ್​​ನಲ್ಲಿ ಮಲಗಿ ಪ್ರಯಾಣಿಸುತ್ತಿದ್ದ ಮೂವರನ್ನು ಕಂಡು ಅಧಿಕಾರಿಗಳು ಶಾಕ್ ಆಗಿದ್ದಾರೆ. ಲಗೇಜ್ ಕ್ಯಾರಿಯರ್​​ನಲ್ಲಿದ್ದವರನ್ನು ಕೆಳಗಿಳಿಸಿ ಆರ್​​ಟಿಒ ಅಧಿಕಾರಿಗಳು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ. ಜೊತೆಗೆ ಖಾಸಗಿ ಬಸ್ ಸಿಬ್ಬಂದಿಯನ್ನೂ ತರಾಟೆಗೆ ತೆಗೆದುಕೊಂಡಿದ್ದಾರೆ. ಖಾಸಗಿ ಬಸ್​ಗಳಿಗೆ ದಂಡ ಹಾಕಿ ಬಿಸಿ ಮುಟ್ಟಿಸಿದ್ದಾರೆ. ಹೈದರಾಬಾದ್​​ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್​ಗಳ ಲಗೇಜ್​, ಪ್ರಯಾಣಿಕರ ಟಿಕೆಟ್ ದರ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುತ್ತಿದೆ.

ಇದನ್ನೂ ಓದಿ: ರಾಜ್ಯದ ದೇವಾಲಯಗಳ ಎಲ್ಲಾ ಮಾಹಿತಿಗೆ ಶೀಘ್ರದಲ್ಲೇ ಸರ್ಕಾರದಿಂದ ಕಾಲ್​ ಸೆಂಟರ್​ ಆರಂಭ

ಅತ್ತ KSRTC ಹೆಚ್ಚುವರಿ ಬಸ್ ರಸ್ತೆಗಳಿಸಿದ್ದು ಮಾತ್ರವಲ್ಲದೆ 5 ರಿಂದ 10% ರಿಯಾಯಿತಿಯನ್ನೂ ಕೊಟ್ಟಿದೆ. ಆದರೂ ಖಾಸಗಿ ಸಾರಿಗೆಗಳು ದುಪ್ಪಟ್ಟು ಹಣ ವಸೂಲಿ ಮಾಡುತ್ತಿವೆ. ಬೆಂಗಳೂರಿನಿಂದ ಬಹುತೇಕ ಎಲ್ಲಾ ಕಡೆಗಳಿಗೆ ದುಪ್ಪಟ್ಟು ದರ ನಿಗದಿಮಾಡಲಾಗಿದೆ. ಎಸಿ ವೋಲ್ವೋ ಮಲ್ಟಿ ಆ್ಯಕ್ಸಲ್ ಟಿಕೆಟ್ ದರ ಸಾಮಾನ್ಯ ದರಕ್ಕಿಂತ ಮೂರು ಪಟ್ಟು ಹೆಚ್ಚಾಗಿದೆ.

ಬೆಂಗಳೂರು-ಚೆನೈಗೆ ಅಕ್ಟೋಬರ್ 16ರಂದು ಟಿಕೆಟ್ ದರ 620ರೂ. ರಿಂದ 850 ರೂ. ಇತ್ತು. ಆದರೆ ಅಕ್ಟೋಬರ್ 20ರಂದು 1800-2100 ರೂ. ಏರಿಕೆಯಾಗಿದೆ.‌ ಬೆಂಗಳೂರು- ಹೈದರಾಬಾದ್ ಟಿಕೆಟ್ ದರ ಅ.17ಕ್ಕೆ ₹1300ರಿಂದ ₹1900 ಇದೆ. ಅಕ್ಟೋಬರ್ 20 ದರ ₹2800-₹3300 ಆಗಿದೆ. ಬೆಂಗಳೂರು-ಕೊಯಮತ್ತೂರಿಗೆ ಈ ಹಿಂದೆ ಟಿಕೆಟ್ ದರ ₹700 ರಿಂದ ₹1100 ಇತ್ತು. ಆದರೆ ಅಕ್ಟೋಬರ್ 20 ದರ ₹2300-₹2800ಕ್ಕೆ ಏರಿದೆ. ಬೆಂಗಳೂರು – ಮುಂಬೈ ಟಿಕೆಟ್ ದರ ₹1300-₹1600 ದಿಂದ ₹2300-₹2700 ಆಗಿದೆ. ಅಲ್ಲದೆ ಬೆಂಗಳೂರಿಂದ ಗೋವಾಗೆ ಟಿಕೆಟ್ ದರ ₹1000 ದಿಂದ ₹1300 ಇತ್ತು. ಅಕ್ಟೋಬರ್ 20 ದರ ₹2800-₹3100ಕ್ಕೆ ಏರಿದೆ ಹೀಗಾಗಿ ಪ್ರಯಾಣಿಕರು ಬೆಲೆ ಏರಿಕೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us