AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ಗಡಿಯಲ್ಲಿ ಆನೆ ಹಾವಳಿ: ಸಿಕ್ಕ ಸಿಕ್ಕವರ ಮೇಲೆ ದಾಳಿ, ಇಬ್ಬರು ಸಾವು, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಗಡಿಯಲ್ಲಿ ಜೋಡಿ ಕಿಲ್ಲರ್ ಎಲಿಫೆಂಟ್ಸ್(Elephant) ಹಾವಳಿ ಜೋರಾಗಿದೆ. ಸಿಕ್ಕ ಸಿಕ್ಕ ಸಾರ್ವಜನಿಕರ ಮೇಲೆ ಕಿಲ್ಲರ್ ಎಲಿಫೆಂಟ್ಸ್ ದಾಳಿ ಮಾಡುತ್ತಿದ್ದು, ನಿನ್ನೆ(ಮೇ.23) ಇಬ್ಬರ ಮೇಲೆ ದಾಳಿ ನಡೆಸಿ ಕೊಂದು ಹಾಕಿದ ಘಟನೆ ತಮಿಳುನಾಡಿನ ಹೊಸೂರು ಸಮೀಪದ ನಾಟ್ರಾಪಲ್ಲಿ ಬಳಿ ನಡೆದಿದೆ.

ತಮಿಳುನಾಡು ಗಡಿಯಲ್ಲಿ ಆನೆ ಹಾವಳಿ: ಸಿಕ್ಕ ಸಿಕ್ಕವರ ಮೇಲೆ ದಾಳಿ, ಇಬ್ಬರು ಸಾವು, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
ತಮಿಳುನಾಡು ಗಡಿಯಲ್ಲಿ ಆನೆ ದಾಳಿ
ಕಿರಣ್ ಹನುಮಂತ್​ ಮಾದಾರ್
|

Updated on: May 24, 2023 | 10:45 AM

Share

ಬೆಂಗಳೂರು ಗ್ರಾಮಾಂತರ: ಗಡಿಯಲ್ಲಿ ಜೋಡಿ ಕಿಲ್ಲರ್ ಎಲಿಫೆಂಟ್ಸ್(Elephant) ಹಾವಳಿ ಜೋರಾಗಿದೆ. ಸಿಕ್ಕ ಸಿಕ್ಕ ಸಾರ್ವಜನಿಕರ ಮೇಲೆ ಕಿಲ್ಲರ್ ಎಲಿಫೆಂಟ್ಸ್ ದಾಳಿ ಮಾಡುತ್ತಿದ್ದು, ನಿನ್ನೆ(ಮೇ.23) ಇಬ್ಬರ ಮೇಲೆ ದಾಳಿ ನಡೆಸಿ ಕೊಂದು ಹಾಕಿದ ಘಟನೆ ತಮಿಳುನಾಡಿ(Tamilnadu) ನ ಹೊಸೂರು ಸಮೀಪದ ನಾಟ್ರಾಪಲ್ಲಿ ಬಳಿ ನಡೆದಿದೆ. ದನ ಮೇಯಿಸುತ್ತಿದ್ದ ದನಗಾಹಿಯನ್ನ ಕೊಂದು, ಬಳಿಕ ರಸ್ತೆಯಲ್ಲಿ ಸಾಗುತ್ತಿದ್ದ ಮಹಿಳೆ ಮೇಲೂ ದಾಳಿ ಮಾಡಿದೆ. ಇಬ್ಬರು ದಾಳಿಗೊಳಗಾದ ಸ್ಥಳದಲ್ಲೇ ಅಸುನೀಗಿದ್ದಾರೆ. ಮನೆಗೆ ಆಧಾರವಾಗಿದ್ದವರನ್ನ ಕಳೆದುಕೊಂಡು ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ತಿಂಗಳ ಹಿಂದೆ ತಮಿಳುನಾಡು, ಆಂಧ್ರ ಗಡಿಯಲ್ಲಿ ನಾಲ್ವರ ಮೇಲೆ ದಾಳಿ ನಡೆಸಿ ಕೊಂದಿದ್ದ ಕಿಲ್ಲರ್ ಎಲಿಫೆಂಟ್ಸ್. ಇದೀಗ ತಮಿಳುನಾಡು ಗಡಿಯಲ್ಲು ಇಬ್ಬರನ್ನ ಬಲಿ ಪಡೆದಿದೆ.

ಕಿಲ್ಲರ್ ಕಾಡಾನೆಗಳ ಉಪಟಳಕ್ಕೆ ಗಡಿ ಗ್ರಾಮ ವಾಸಿಗಳ ಕಂಗಾಲಾಗಿದ್ದು, ಜನರನ್ನು ಕಂಡರೆ ಗುಂಪಿನತ್ತ ನುಗ್ಗುವ ಕಾಡಾನೆಗಳ ಕಾಟಕ್ಕೆ ಜನ ಸಾಮಾನ್ಯರು ಬೆಚ್ಚಿಬಿದ್ದಿದ್ದಾರೆ. ಇನ್ನು ಚೆನ್ನೈ ಹೆದ್ದಾರಿಯಲ್ಲಿ ಸಾಗಲು ವಾಹನ ಸವಾರರಿಗೂ ಇದೀಗ ಡವ ಡವ ಸುರುವಾಗಿದೆ. ಆದಷ್ಟು ಬೇಗ ಕಿಲ್ಲರ್ ಕಾಡಾನೆಗಳನ್ನು ಸೆರೆ ಹಿಡಿಯುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಚಾಮರಾಜನಗರದಲ್ಲಿ ಆನೆ, ಚಿಕ್ಕಮಗಳೂರಿನಲ್ಲಿ ಹುಲಿ ಹಾವಳಿ; ಆತಂಕದಲ್ಲಿ ಜನ

ಕಾಫಿ ತೋಟದಲ್ಲಿ ಕಾಡಾನೆ ಪ್ರತ್ಯಕ್ಷ ಆತಂಕದಲ್ಲಿ ಕಾರ್ಮಿಕರು

ಚಿಕ್ಕಮಗಳೂರು: ಅಲ್ದೂರು ಸಮೀಪದ ಕೆರೆಹಕ್ಲು ಗ್ರಾಮದಲ್ಲಿ ಕಾಡಾನೆ ಪ್ರತ್ಯಕ್ಷವಾಗಿದೆ. ಕಾಫಿತೋಟದಲ್ಲಿ ಕಾಡಾನೆ ಸಂಚಾರದಿಂದ ಕಾರ್ಮಿಕರು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಎರಡು ದಿನದಿಂದ ಕೆರೆಹಕ್ಲು ಗ್ರಾಮದಲ್ಲಿ ಬೀಡು ಬಿಟ್ಟಿರುವ ಕಾಡಾನೆಯ ಸ್ಥಳಾಂತರಕ್ಕೆ ಸ್ಥಳೀಯರ ಒತ್ತಾಯ ಮಾಡುತ್ತಿದ್ದಾರೆ.

15 ದಿನಗಳಿಂದ ಚಾರ್ಮಾಡಿ ಘಾಟ್​ನಲ್ಲಿ ಕಾಡಾನೆ ಹಾವಳಿ; ಅನಾಹುತವಾಗುವ ಮೊದಲೇ ಆನೆ ಸ್ಥಳಾಂತರಕ್ಕೆ ಜನರ ಮನವಿ

ಚಿಕ್ಕಮಗಳೂರು: ರಾಜ ಗಾಂಭೀರ್ಯದಿಂದ ಫೋಸ್ ಕೊಡುತ್ತಿರುವ ಗಜರಾಜ. ಮಧ್ಯರಾತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಂದೇ ರೋಡು ಎನ್ನುವ ಹಾಗೇ ವಾಕ್ ಮಾಡುತ್ತಿರುವ ಆನೆ. ಮರೆಯಲ್ಲಿ ನಿಂತು ಕಳ್ಳನಂತೆ ನೋಡ್ತಿರೋ ಆನೆ. ರಸ್ತೆ ಬದಿಯ ಕಟ್ಟೆ ದಾಟಿ ಮತ್ತೊಂದೆಡೆಗೆ ಸಾಗ್ತಿರುವ ಒಂಟಿಸಲಗ. ಹೇಳೋಕೆ ಒಂದೋ ಎರಡೋ. ಕಳೆದ 15 ದಿನಗಳಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿನಲ್ಲಿ ಕಾಡಾನೆ ಹಾವಾಳಿ ಮೀತಿಮೀರಿದೆ. 22 ಕಿ.ಮೀ ವ್ಯಾಪ್ತಿಯ ಚಾರ್ಮಾಡಿಯಲ್ಲಿ ಒಂದೇ ಆನೆ ಇದೆಯೋ ಅಥವಾ ಅದಕ್ಕಿಂತ ಹೆಚ್ಚು ಇದ್ದಾವೋ ಗೊತ್ತಿಲ್ಲ. ಈ ಮಾರ್ಗದಲ್ಲಿ ಓಡಾಡುವ ಜನ ನಿತ್ಯ ಒಂದೊಂದು ಜಾಗದಲ್ಲಿ ಆನೆ ಕಂಡು ಆತಂಕಕ್ಕೀಡಾಗಿದ್ದಾರೆ.

ಇದನ್ನೂ ಓದಿ:Viral Video: ಆನೆಯು ಮರದಿಂದ ಹಲಸಿನ ಹಣ್ಣು ಕೀಳುವುದ ಎಲ್ಲಾರೂ ಕಂಡಿರಾ

ಈ ಮಾರ್ಗದಲ್ಲಿ ನಿತ್ಯ ಸಾವಿರಾರು ವಾಹನಗಳು ಓಡಾಡುತ್ತೆ. ಎರಡ್ಮೂರು ದಿನದ ಹಿಂದೆ ರಸ್ತೆ ಮಧ್ಯೆ ನಿಂತಿದ್ದ ಆನೆ ಕಂಡು ಸರ್ಕಾರಿ ಬಸ್ ಅರ್ಧ ಗಂಟೆ ನಿಂತಲ್ಲೇ ನಿಂತಿತ್ತು. ಬೈಕ್-ಕಾರು ಸವಾರರು ಕೂಡ ನಿಂತಲ್ಲೇ ನಿಂತಿದ್ದರು. ಗಾಡಿ ರಿವರ್ಸ್ ತೆಗೆದು ಹೋಗೋದಕ್ಕೂ ಸಾಧ್ಯವಿಲ್ಲ. ಏಕೆಂದರೆ ಈ ಹಾವು ಬಳುಕಿನ ಮೈಕಟ್ಟಿನ ತರಹ ರಸ್ತೆಯಿರುವ ಕಾರಣ, ಹಾಗಾಗಿ, ಸರ್ಕಾರ ಕೂಡಲೇ ಎಚ್ಚೆತ್ತುಕೊಳ್ಳಬೇಕಿದೆ. ನಾಳೆ ಮತ್ತೊಂದು ಅನಾಹುತವಾದ ಬಳಿಕ ಪರಿಹಾರವೆಂದು ಎಚ್ಚೆತ್ತುಕೊಳ್ಳುವ ಬದಲು ಆನೆಯನ್ನೇ ಸ್ಥಳಾಂತರ ಮಾಡೋದು ಒಳ್ಳೆಯದು ಎಂದು ಜನರು ಆಗ್ರಹಿಸಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್