AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸಕೋಟೆಯಲ್ಲಿ ಬೆಳ್ಳಂ ಬೆಳಿಗ್ಗೆ ಜೆಸಿಬಿ ಘರ್ಜನೆ; ಅರಣ್ಯ ಇಲಾಖೆಯ ಭೂಮಿ ಒತ್ತುವರಿ ತೆರವು

ಅರಣ್ಯ ಇಲಾಖೆಗೆ ಸೇರಿದ್ದ ಕೋಟ್ಯಂತರ ಮೌಲ್ಯದ ಒಂದು ಎಕರೆಗೂ ಅಧಿಕ‌ ಭೂಮಿಯನ್ನು ಹಲವು ವರ್ಷಗಳಿಂದ ಒತ್ತುವರಿ ಮಾಡಿಕೊಂಡು ವಾಣಿಜ್ಯ ಕಟ್ಟಡಗಳನ್ನು ನಿರ್ಮಾಣ ಮಾಡಲಾಗಿತ್ತು. ಇದೀಗ ನ್ಯಾಯಾಲಯದ ಆದೇಶದ ಮೆರೆಗೆ ಒತ್ತುವರಿ ಭೂಮಿ ತೆರವು ಮಾಡಲಾಗುತ್ತಿದೆ.

ಹೊಸಕೋಟೆಯಲ್ಲಿ ಬೆಳ್ಳಂ ಬೆಳಿಗ್ಗೆ ಜೆಸಿಬಿ ಘರ್ಜನೆ; ಅರಣ್ಯ ಇಲಾಖೆಯ ಭೂಮಿ ಒತ್ತುವರಿ ತೆರವು
ಮಳಿಗೆಗಳ ತೆರವು
ನವೀನ್ ಕುಮಾರ್ ಟಿ
| Edited By: ವಿವೇಕ ಬಿರಾದಾರ|

Updated on:Oct 27, 2023 | 9:40 AM

Share

ದೇವನಹಳ್ಳಿ ಅ.27: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆ ಹೊಸಕೋಟೆ (Hoskote) ನಗರದಲ್ಲಿ ಬೆಳ್ಳಂ ಬೆಳಗ್ಗೆ ಜೆಸಿಬಿಗಳ ಘರ್ಜನೆ ಶರುವಾಗಿದೆ. ಹೊಸಕೋಟೆ ನಗರದ ಕೆಇಬಿ ವೃತ್ತದಲ್ಲಿನ ಅಕ್ರಮ ವಾಣಿಜ್ಯ ಕಟ್ಟಡಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು (Forest Department Officers) ತೆರವುಗೊಳಿಸುತ್ತಿದ್ದಾರೆ. ಅರಣ್ಯ ಇಲಾಖೆಗೆ ಸೇರಿದ್ದ ಕೋಟ್ಯಂತರ ಮೌಲ್ಯದ ಒಂದು ಎಕರೆಗೂ ಅಧಿಕ‌ ಭೂಮಿಯನ್ನು ಹಲವು ವರ್ಷಗಳಿಂದ ಒತ್ತುವರಿ ಮಾಡಿಕೊಂಡು ವಾಣಿಜ್ಯ ಕಟ್ಟಡಗಳನ್ನು ನಿರ್ಮಾಣ ಮಾಡಲಾಗಿತ್ತು.

ಈ ವಿಚಾರವಾಗಿ 1990ರಿಂದ ಎಂಟಿಬಿ ‌ನಾಗರಾಜ್ ಬೆಂಬಲಿಗ, ಬಿಜೆಪಿ ಮುಖಂಡ ಮೋಹನ್ ರವಿ ಹಾಗೂ ಅರಣ್ಯ ಇಲಾಖೆ ನಡುವೆ ವ್ಯಾಜ್ಯ ನಡೆಯುತ್ತಿದೆ. ಇದೀಗ ನ್ಯಾಯಾಲಯ ಅರಣ್ಯ ಇಲಾಖೆ ಪರ ಆದೇಶ ನೀಡಿದೆ. ಆದೇಶ ಹಿನ್ನೆಲೆಯಲ್ಲಿ ಇದೀಗ ಒತ್ತುವರಿ ಭೂಮಿ ತೆರವು ಮಾಡಲಾಗುತ್ತಿದೆ. ಪೊಲೀಸ್ ಭದ್ರತೆಯಲ್ಲಿ ವಾಣಿಜ್ಯ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ.

ಸರ್ವೆ ನಂಬರ್ 264 ರಲ್ಲಿ ಅರಣ್ಯ ಇಲಾಖೆಗೆ ಸೇರಿದ್ದ 15 ಗುಂಟೆ ಜಮೀನಿನಲ್ಲಿ ಗುರುಸ್ವಾಮಿ ಹಾಗೂ ಮಕ್ಕಳಾದ ಮೋಹನ್ ಮತ್ತು ರವಿ ಎಂಬವುವರು ಮನೆ ಹಾಗೂ ಬಾಡಿಗೆ ಕಟ್ಟಡ ನಿರ್ಮಾಣ ಮಾಡಿದ್ದರು.  ರಸ್ತೆ ಬದಿಯಲ್ಲಿ ಅಕ್ರಮವಾಗಿ ಕಟ್ಟಿದ್ದ 38 ಅಂಗಡಿಗಳ ತೆರವುಗೊಳಿಸಲಾಗಿದೆ. ವಾಸದ ಮನೆ ತೆರವಿಗೆ ಒಂದು ವಾರ ಗಡುವು ನೀಡಿ  ತಾತ್ಕಾಲಿಕವಾಗಿ ತೆರವು ಕಾರ್ಯ ಸ್ಥಗಿತಗೊಳಿಸಲಾಗಿದೆ. ವಾರದ ನಂತರ ವಾಸದ ಮನೆ ತೆರವುಗೋಳಿಸಿ ವಶಕ್ಕೆ ಪಡೆಯಲು ನಿರ್ಧರಿಸಲಾಗಿದೆ ಎಂದು ಆರ್​​ಎಫ್​ಒ ವರುಣ್ ಕುಮಾರ್ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:45 am, Fri, 27 October 23

Follow Us
ನವೀನ್ ಕುಮಾರ್ ಟಿ
ನವೀನ್ ಕುಮಾರ್ ಟಿ

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್