ಹೊಸಕೋಟೆಯಲ್ಲಿ ಬೆಳ್ಳಂ ಬೆಳಿಗ್ಗೆ ಜೆಸಿಬಿ ಘರ್ಜನೆ; ಅರಣ್ಯ ಇಲಾಖೆಯ ಭೂಮಿ ಒತ್ತುವರಿ ತೆರವು

| Updated By: ವಿವೇಕ ಬಿರಾದಾರ

Updated on: Oct 27, 2023 | 9:40 AM

ಅರಣ್ಯ ಇಲಾಖೆಗೆ ಸೇರಿದ್ದ ಕೋಟ್ಯಂತರ ಮೌಲ್ಯದ ಒಂದು ಎಕರೆಗೂ ಅಧಿಕ‌ ಭೂಮಿಯನ್ನು ಹಲವು ವರ್ಷಗಳಿಂದ ಒತ್ತುವರಿ ಮಾಡಿಕೊಂಡು ವಾಣಿಜ್ಯ ಕಟ್ಟಡಗಳನ್ನು ನಿರ್ಮಾಣ ಮಾಡಲಾಗಿತ್ತು. ಇದೀಗ ನ್ಯಾಯಾಲಯದ ಆದೇಶದ ಮೆರೆಗೆ ಒತ್ತುವರಿ ಭೂಮಿ ತೆರವು ಮಾಡಲಾಗುತ್ತಿದೆ.

ಹೊಸಕೋಟೆಯಲ್ಲಿ ಬೆಳ್ಳಂ ಬೆಳಿಗ್ಗೆ ಜೆಸಿಬಿ ಘರ್ಜನೆ; ಅರಣ್ಯ ಇಲಾಖೆಯ ಭೂಮಿ ಒತ್ತುವರಿ ತೆರವು
ಮಳಿಗೆಗಳ ತೆರವು
Follow us on

ದೇವನಹಳ್ಳಿ ಅ.27: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆ ಹೊಸಕೋಟೆ (Hoskote) ನಗರದಲ್ಲಿ ಬೆಳ್ಳಂ ಬೆಳಗ್ಗೆ ಜೆಸಿಬಿಗಳ ಘರ್ಜನೆ ಶರುವಾಗಿದೆ. ಹೊಸಕೋಟೆ ನಗರದ ಕೆಇಬಿ ವೃತ್ತದಲ್ಲಿನ ಅಕ್ರಮ ವಾಣಿಜ್ಯ ಕಟ್ಟಡಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು (Forest Department Officers) ತೆರವುಗೊಳಿಸುತ್ತಿದ್ದಾರೆ. ಅರಣ್ಯ ಇಲಾಖೆಗೆ ಸೇರಿದ್ದ ಕೋಟ್ಯಂತರ ಮೌಲ್ಯದ ಒಂದು ಎಕರೆಗೂ ಅಧಿಕ‌ ಭೂಮಿಯನ್ನು ಹಲವು ವರ್ಷಗಳಿಂದ ಒತ್ತುವರಿ ಮಾಡಿಕೊಂಡು ವಾಣಿಜ್ಯ ಕಟ್ಟಡಗಳನ್ನು ನಿರ್ಮಾಣ ಮಾಡಲಾಗಿತ್ತು.

ಈ ವಿಚಾರವಾಗಿ 1990ರಿಂದ ಎಂಟಿಬಿ ‌ನಾಗರಾಜ್ ಬೆಂಬಲಿಗ, ಬಿಜೆಪಿ ಮುಖಂಡ ಮೋಹನ್ ರವಿ ಹಾಗೂ ಅರಣ್ಯ ಇಲಾಖೆ ನಡುವೆ ವ್ಯಾಜ್ಯ ನಡೆಯುತ್ತಿದೆ. ಇದೀಗ ನ್ಯಾಯಾಲಯ ಅರಣ್ಯ ಇಲಾಖೆ ಪರ ಆದೇಶ ನೀಡಿದೆ. ಆದೇಶ ಹಿನ್ನೆಲೆಯಲ್ಲಿ ಇದೀಗ ಒತ್ತುವರಿ ಭೂಮಿ ತೆರವು ಮಾಡಲಾಗುತ್ತಿದೆ. ಪೊಲೀಸ್ ಭದ್ರತೆಯಲ್ಲಿ ವಾಣಿಜ್ಯ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ.

ಸರ್ವೆ ನಂಬರ್ 264 ರಲ್ಲಿ ಅರಣ್ಯ ಇಲಾಖೆಗೆ ಸೇರಿದ್ದ 15 ಗುಂಟೆ ಜಮೀನಿನಲ್ಲಿ ಗುರುಸ್ವಾಮಿ ಹಾಗೂ ಮಕ್ಕಳಾದ ಮೋಹನ್ ಮತ್ತು ರವಿ ಎಂಬವುವರು ಮನೆ ಹಾಗೂ ಬಾಡಿಗೆ ಕಟ್ಟಡ ನಿರ್ಮಾಣ ಮಾಡಿದ್ದರು.  ರಸ್ತೆ ಬದಿಯಲ್ಲಿ ಅಕ್ರಮವಾಗಿ ಕಟ್ಟಿದ್ದ 38 ಅಂಗಡಿಗಳ ತೆರವುಗೊಳಿಸಲಾಗಿದೆ. ವಾಸದ ಮನೆ ತೆರವಿಗೆ ಒಂದು ವಾರ ಗಡುವು ನೀಡಿ  ತಾತ್ಕಾಲಿಕವಾಗಿ ತೆರವು ಕಾರ್ಯ ಸ್ಥಗಿತಗೊಳಿಸಲಾಗಿದೆ. ವಾರದ ನಂತರ ವಾಸದ ಮನೆ ತೆರವುಗೋಳಿಸಿ ವಶಕ್ಕೆ ಪಡೆಯಲು ನಿರ್ಧರಿಸಲಾಗಿದೆ ಎಂದು ಆರ್​​ಎಫ್​ಒ ವರುಣ್ ಕುಮಾರ್ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:45 am, Fri, 27 October 23