AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಲಹಂಕ: ಕ್ಷೇತ್ರ ಶಿಕ್ಷಣಾಧಿಕಾರಿ ಮೇಲೆ ಖಾಸಗಿ ಶಾಲಾ ಶಿಕ್ಷಕನಿಂದ ಹಲ್ಲೆ, ಆರೋಪಿ ಅರೆಸ್ಟ್

ಯಲಹಂಕ: ಕ್ಷೇತ್ರ ಶಿಕ್ಷಣಾಧಿಕಾರಿಯ ಮೇಲೆ ಖಾಸಗಿ ಶಾಲಾ ಶಿಕ್ಷಕ ಹಲ್ಲೆ ನಡೆಸಿ, ಬೆದರಿಕೆ ಹಾಕಿರುವ ಘಟನೆ ಯಲಹಂಕ ತಾಲೂಕಿನ ರಾಜಾನುಕುಂಟೆಯ ಪೊಲೀಸ್ ಠಾಣಾ ವ್ಯಾಪ್ತಿಯ ಕಡತನಮಲೆಯಲ್ಲಿ ನಡೆದಿದೆ. ಕಡತನಮಲೆ ಗ್ರಾಮದ ನಿವಾಸಿ ಖಾಸಗಿ ಶಾಲೆಯ ಶಿಕ್ಷಕ ರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್.ಕಮಲಾಕರ ಮೇಲೆ ಹಲ್ಲೆ ನಡೆಸಿದ ಆರೋಪಿ. ಸೆಪ್ಟೆಂಬರ್ 4 ನೇ ತಾರೀಖಿನಂದು ಗ್ರಾಮದ ಸರ್ಕಾರಿ ಶಾಲೆಯ ಜಾಗ ಒತ್ತುವರಿ ವಿಚಾರವಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಕಮಲಾಕರ್ ಕಂದಾಯ ಅಧಿಕಾರಿಗಳ‌ ಜೊತೆ ಗ್ರಾಮಕ್ಕೆ‌ ಭೇಟಿ‌ ನೀಡಿದ್ದರು. ಈ‌ ವೇಳೆ […]

ಯಲಹಂಕ: ಕ್ಷೇತ್ರ ಶಿಕ್ಷಣಾಧಿಕಾರಿ ಮೇಲೆ ಖಾಸಗಿ ಶಾಲಾ ಶಿಕ್ಷಕನಿಂದ ಹಲ್ಲೆ, ಆರೋಪಿ ಅರೆಸ್ಟ್
ಯಲಹಂಕ: ಕ್ಷೇತ್ರ ಶಿಕ್ಷಣಾಧಿಕಾರಿ ಮೇಲೆ ಖಾಸಗಿ ಶಾಲಾ ಶಿಕ್ಷಕನಿಂದ ಹಲ್ಲೆ, ಆರೋಪಿ ಅರೆಸ್ಟ್
TV9 Web
| Edited By: |

Updated on: Sep 07, 2021 | 12:56 PM

Share

ಯಲಹಂಕ: ಕ್ಷೇತ್ರ ಶಿಕ್ಷಣಾಧಿಕಾರಿಯ ಮೇಲೆ ಖಾಸಗಿ ಶಾಲಾ ಶಿಕ್ಷಕ ಹಲ್ಲೆ ನಡೆಸಿ, ಬೆದರಿಕೆ ಹಾಕಿರುವ ಘಟನೆ ಯಲಹಂಕ ತಾಲೂಕಿನ ರಾಜಾನುಕುಂಟೆಯ ಪೊಲೀಸ್ ಠಾಣಾ ವ್ಯಾಪ್ತಿಯ ಕಡತನಮಲೆಯಲ್ಲಿ ನಡೆದಿದೆ. ಕಡತನಮಲೆ ಗ್ರಾಮದ ನಿವಾಸಿ ಖಾಸಗಿ ಶಾಲೆಯ ಶಿಕ್ಷಕ ರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್.ಕಮಲಾಕರ ಮೇಲೆ ಹಲ್ಲೆ ನಡೆಸಿದ ಆರೋಪಿ.

ಸೆಪ್ಟೆಂಬರ್ 4 ನೇ ತಾರೀಖಿನಂದು ಗ್ರಾಮದ ಸರ್ಕಾರಿ ಶಾಲೆಯ ಜಾಗ ಒತ್ತುವರಿ ವಿಚಾರವಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಕಮಲಾಕರ್ ಕಂದಾಯ ಅಧಿಕಾರಿಗಳ‌ ಜೊತೆ ಗ್ರಾಮಕ್ಕೆ‌ ಭೇಟಿ‌ ನೀಡಿದ್ದರು. ಈ‌ ವೇಳೆ ಒತ್ತುವರಿಯಾಗಿದ್ದ ಸರ್ಕಾರಿ ಜಾಗವನ್ನ ಗುರುತು ಮಾಡಿದ ಅಧಿಕಾರಿಗಳು ಒತ್ತುವರಿ ತೆರವುಗೊಳಿಸಲು ಮುಂದಾದಾಗ ಪೊಲೀಸರ ಮುಂದೆಯೆ ಹಲ್ಲೆ ನಡಸಿ ಬೆದರಿಕೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾನೆ.

ಇನ್ನು ಬಿಇಒ ಮೇಲೆ ಹಲ್ಲೆ ನಡೆಸುತ್ತಿದ್ದಂತೆ ಆರೋಪಿಯನ್ನು ರಾಜಾನುಕುಂಟೆ ಪೊಲೀಸರು ಬಂಧಿಸಿದರು. ಆರೋಪಿಯನ್ನು ಸ್ಥಳದಲ್ಲೇ ಬಂಧಿಸಿ ಕಲಂ 323, 504, 353 ಮತ್ತು 34 ಐಪಿಸಿ ಅಡಿ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.

ಖಾಸಗಿ ಶಾಲಾ ಶಿಕ್ಷಕ, ದೇವಾಲಯದ ಪೂಜಾರಿಯೂ..

encroachment doddaballapura teacher assaults BEO arrested 1

ಖಾಸಗಿ ಶಾಲಾ ಶಿಕ್ಷಕ, ದೇವಾಲಯದ ಪೂಜಾರಿಯೂ..

ಬಿಇಒ ಮೆಲೆ‌ ಹಲ್ಲೆ ನಡೆಸಿದ ಖಾಸಗಿ ಶಾಲೆಯ ಶಿಕ್ಷಕ ರಮೇಶ್ ಬೆಂಗಳೂರು ನಗರದ ಖಾಸಗಿ ಶಾಲೆಯ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದು, ಜೊತೆಗೆ ಗ್ರಾಮದ ದುರ್ಗದಮ್ಮ ದೇವಾಲಯದಲ್ಲಿ ಈತನು ಸೇರಿದಂತೆ ಇವರ ಕುಟುಂಬಸ್ಥರು ಪೂಜೆ ಮಾಡಿಕೊಂಡು ಬರುತ್ತಿದ್ದು ಮನೆಯ ಮುಂದೆ ಇದ್ದ ಶಾಲೆಯ ಜಾಗವನ್ನು ಒತ್ತುವರಿ ತೆರವು ಕಾರ್ಯಾಚರಣೆಗೆ ನೋಟಿಸ್ ನೀಡಿಲ್ಲ ಎಂದು ನಿಂದಿಸಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

(encroachment yelahanka rajanukunte teacher assaults BEO arrested)

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ