AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬನ್ನೇರುಘಟ್ಟ ಇಂಜಿನಿಯರಿಂಗ್ ಹಾಸ್ಟೆಲ್​ ಶೌಚಾಲಯದಲ್ಲಿ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ, ಕಾರಣವೇನು?

ನಿತಿನ್ ಬೆಂಗಳೂರು ಎಂಜಿನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಕೋರ್ಸಿಗೆ ಸಹೋದರನ ಮೂಲಕ ಅಡ್ಮಿಷನ್ ಆಗಿದ್ದ. ತಂದೆ ತಾಯಿ ಪ್ರೀತಿಯ ಕೊರತೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ. ತಂದೆ ತಾಯಿ ಬರಬೇಕು ಎಂದು ಕಾಲ್ ಮಾಡಿ, ಜಗಳವಾಡಿದ್ದನಂತೆ.

ಬನ್ನೇರುಘಟ್ಟ ಇಂಜಿನಿಯರಿಂಗ್ ಹಾಸ್ಟೆಲ್​ ಶೌಚಾಲಯದಲ್ಲಿ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ, ಕಾರಣವೇನು?
ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ
TV9 Web
| Edited By: |

Updated on:Dec 15, 2022 | 3:02 PM

Share

ಆನೇಕಲ್: ಬನ್ನೇರುಘಟ್ಟ (Bannerghatta) ಸಮೀಪದ ಎಎಮ್ ಸಿ ಇಂಜಿನಿಯರಿಂಗ್ ಕಾಲೇಜಿಗೆ ಸೇರಿದ ಹಾಸ್ಟೆಲಿನಲ್ಲಿ ಕತ್ತು ಕೊಯ್ದುಕೊಂಡು ವಿದ್ಯಾರ್ಥಿಯೊಬ್ಬ (Engineering Student) ಆತ್ಮಹತ್ಯೆ (suicide) ಮಾಡಿಕೊಂಡಿದ್ದಾನೆ. ಹಾಸ್ಟೆಲ್ ಶೌಚಾಲಯದಲ್ಲಿ ಸಿಕ್ಕ ಶವ 19 ವರ್ಷದ ನಿತಿನ್ ಎಂಬಾತನದು ಎಂದು ಗುರುತಿಸಲಾಗಿದೆ. ನಿತಿನ್ ಕೇರಳ ಮೂಲದ ವಿದ್ಯಾರ್ಥಿ. ‌ಇದೇ ತಿಂಗಳು ಡಿಸೆಂಬರ್ 1 ಕ್ಕೆ ಕಾಲೇಜು ಸೇರಿದ್ದ. ಸಿಇಎಸ್ ಪ್ರಥಮ ವರ್ಷಕ್ಕೆ ಅಡ್ಮಿಶನ್ ಆಗಿದ್ದ. ಚಾಕುವಿನಿಂದ ತಾನೇ ಚುಚ್ಚಿಕೊಂಡು, ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಭೇಟಿ ಕೊಟ್ಟ ಬನ್ನೇರುಘಟ್ಟ ಪೊಲೀಸರು (Bannerghatta Police) ಪರಿಶೀಲನೆ ನಡೆಸಿದ್ದಾರೆ.

ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ, ಕಾರಣವೇನು?

ಎಎಂಸಿ ಕಾಲೇಜಿನಲ್ಲಿ ಸ್ಟೂಡೆಂಟ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಮಾಹಿತಿ ಸಂಗ್ರಹಿಸಿರುವ ಬನ್ನೇರುಘಟ್ಟ ಪೊಲೀಸರು ತಂದೆ ತಾಯಿ ದೂರ ಇದ್ದರು ಅಂತ ನಿತಿನ್ ಬೇಸರಿಸಿಕೊಂಡಿದ್ದ. ಡಿಸೆಂಬರ್ 1 ಕ್ಕೆ ಕಾಲೇಜು ಸೇರಿದ್ದ ನಿತಿನ್ ಆದಾದ ಬಳಿಕ ಪದೇ ಪದೇ ತಂದೆ ತಾಯಿಗೆ ಕಾಲ್ ಮಾಡುತ್ತಿದ್ದನಂತೆ. ತಂದೆ ತಾಯಿ ದುಬೈನಲ್ಲಿ ವಾಸವಿದ್ದರು. ನಿತಿನ್ ಕುಟುಂಬದವರು ಕೇರಳದ ಕೋಯಿಕ್ಕೋಡ್ ಜಿಲ್ಲೆಯ ಪದಿನಿ ಜರಿಯಾ ವಿಲೇಜ್ ಮೂಲದವರು. ಕೋಯಲಂಡಿ ಗ್ರಾಮದ ನಿವಾಸಿಗಳಾಗಿದ್ದರು.

Also Read:

UP Crime: ಕೋಟಿ ಹಣಕ್ಕಾಗಿ ಪಿಎಚ್​ಡಿ ಪದವೀಧರನ ಕೊಲೆ: ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಎಸೆದ ಮನೆ ಮಾಲೀಕ

ನಿತಿನ್ ಬೆಂಗಳೂರು ಆನೇಕಲ್​ನ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಕೋರ್ಸಿಗೆ ಸಹೋದರನ ಮೂಲಕ ಅಡ್ಮಿಷನ್ ಆಗಿದ್ದ ವಿದ್ಯಾರ್ಥಿ. ತಂದೆ ತಾಯಿಯ ಪ್ರೀತಿಯ ಕೊರತೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ. ತಂದೆ ತಾಯಿ ಬರಬೇಕು ಎಂದು ಕಾಲ್ ಮಾಡಿ, ಜಗಳವಾಡಿದ್ದನಂತೆ. ಇದೇ ವಿಚಾರಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಎಂದು ಹಾಸ್ಟೆಲ್ ನಲ್ಲಿ ರೂಮ್ ಮೇಟ್​ ಆಗಿದ್ದ ಇನ್ನೊಬ್ಬ ವಿದ್ಯಾರ್ಥಿ ನಿಧಿನ್ ಮಾಹಿತಿ ಹಂಚಿಕೊಂಡಿದ್ದಾನೆ. ನಿತಿನ್ ಮೃತದೇಹವನ್ನ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:39 pm, Thu, 15 December 22

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ