AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮೀ ಹಬ್ಬಕ್ಕೆಂದು ತಾವರೆ ಹೂವು ಕೀಳಲು ಹೋಗಿ ತಂದೆ-ಮಗ ದುರಂತ ಸಾವು

ನಾಳೆ ಅಂದರೆ ಆಗಸ್ಟ್ 25ರಂದು ವರಮಹಾಲಕ್ಷ್ಮೀ ಹಬ್ಬ ಇದ್ದು, ಜನ ಹಬ್ಬ ಆಚರಣೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಇನ್ನು ಹೂ -ಹಣ್ಣು ಖರೀದಿಗೆ ಜನ ಮಾರ್ಕೆಟ್​ಗಳಲ್ಲಿ ಮುಗಿಬಿದ್ದಿದ್ದಾರೆ. ಇದರ ಮಧ್ಯೆ ವರಮಹಾಲಕ್ಷ್ಮೀ ಹೂ ತರಲು ಹೋಗಿದ್ದ ತಂದೆ-ಮಗ ದುರಂತ ಅಂತ್ಯಕಂಡಿದ್ದಾರೆ.

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮೀ ಹಬ್ಬಕ್ಕೆಂದು ತಾವರೆ ಹೂವು ಕೀಳಲು ಹೋಗಿ ತಂದೆ-ಮಗ ದುರಂತ ಸಾವು
ಮೃತ ತಂದೆ-ಮಗ
ನವೀನ್ ಕುಮಾರ್ ಟಿ
| Edited By: |

Updated on:Aug 24, 2023 | 10:08 AM

Share

ಬೆಂಗಳೂರು, (ಆಗಸ್ಟ್ 24): ವರಮಹಾಲಕ್ಷ್ಮಿ ಹಬ್ಬ (varalakshmi festival) ಮತ್ತೆ ಬಂದಿದೆ. ನಾಳೆ ಅಂದರೆ ಆಗಸ್ಟ್ 25ರಂದು ವರಮಹಾಲಕ್ಷ್ಮಿ ಹಬ್ಬ ಇದ್ದು, ವಿಶೇಷ ಪೂಜೆ-ಪುನಸ್ಕಾರಕ್ಕೆ ಜನರು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಅದರಂತೆ ವರಮಹಾಲಕ್ಷ್ಮೀ ಹಬ್ಬಕ್ಕೆಂದು ತಾವರೆ ಹೂವು ಕೀಳಲು ಹೋಗಿ ತಂದೆ-ಮಗ (Father And Son) ದುರಂತ ಅಂತ್ಯಕಂಡಿದ್ದಾರೆ. ಹೌದು… ತಾವರೆ ಹೂವು ಕೀಳಲು ಹೋಗಿ ತಂದೆ, ಮಗ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಭೂಚನಹಳ್ಳಿಯ ಕೆರೆಯಲ್ಲಿ ಈ ದುರ್ಘಟನೆ ನಡೆದಿದೆ. ದೊಡ್ಡಬಳ್ಳಾಪುರದ ಶಾಂತಿನಗರದ ನಿವಾಸಿಗಳಾದ ಪುಟ್ಟರಾಜು(42), ಮಗ ಕೇಶವ(14) ಮೃತ ದುರ್ದೈವಿಗಳು.

ವರಮಹಾಲಕ್ಷ್ಮಿ ಹಬ್ವಕ್ಕೆ ತಾವರೆ ಹೂ ತಂದು ಮಾರಾಟ ಮಾಡಲು ತಂದೆ ಮಗ ಪ್ಲಾನ್​ ಮಾಡಿದ್ದರು. ಹೀಗಾಗಿ ಹೂ ತರಲು ಭೂಚನಹಳ್ಳಿ ಕೆರೆಗೆ ಹೋಗಿದ್ದಾರೆ. ಮೊದಲು ಹೂ ಕೀಳಲು ಪುತ್ರ ಕೇಶವ ಕೆರೆಗೆ ಇಳಿದಿದ್ದಾನೆ. ಆದ್ರೆ, ಏಕಾಏಕಿ ನೀರಿನಲ್ಲಿ ಮುಳುಗಿದ್ದಾನೆ. ಕೂಡಲೇ ತಂದೆ ಪುಟ್ಟರಾಜು ಸಹ ಪುತ್ರನನ್ನು ರಕ್ಷಿಸಲು ನೀರಿಗಿಳಿದಿದ್ದಾರೆ. ಆದ್ರೆ, ದುರದೃಷ್ಟವಶಾತ್​ ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ವಿಜಯಪುರ: ಕ್ಯಾಂಟರ್ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್​ ಸವಾರರು ಸ್ಥಳದಲ್ಲೇ ಸಾವು

ಈ ದುರ್ಘಟನೆ ಸಂಭವಿಸಿದ ಸ್ವಲ್ಪ ಹೊತ್ತಿನ ನಂತರ ಮತ್ತೋರ್ವ ತಾವರೆ ಹೂ ಮಾರಾಟಗಾರ ಕೆರೆಯ ಬಳಿ ಹೋದಾಗ ದಡದಲ್ಲಿ ಮೊಬೈಲ್ ಮತ್ತು ಚಪ್ಪಲಿ ಪತ್ತೆಯಾಗಿವೆ. ಇದರಿಂದ ಅನುಮಾನಗೊಂಡು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಇನ್ನು ವಿಷಯ ತಿಳಿದು ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ತಂದೆ-ಮಗನ ಮೃತದೇಹಗಳಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:06 am, Thu, 24 August 23

‘ಆತ್ಮಸಾಕ್ಷಿ ಬೇಡ್ವಾ’; ಸುದೀಪ್ ಪ್ರಕರಣದ ಅಸಲಿಯತ್ತು ಬಿಚ್ಚಿಟ್ಟ ಚಕ್ರವರ್ತಿ
‘ಆತ್ಮಸಾಕ್ಷಿ ಬೇಡ್ವಾ’; ಸುದೀಪ್ ಪ್ರಕರಣದ ಅಸಲಿಯತ್ತು ಬಿಚ್ಚಿಟ್ಟ ಚಕ್ರವರ್ತಿ
VIDEO: ಮೊದಲ ಓವರ್​ನಲ್ಲೇ ಗೆರೆ ದಾಟಿ ಔಟಾದ ಬಾಬರ್ ಆಝಂ
VIDEO: ಮೊದಲ ಓವರ್​ನಲ್ಲೇ ಗೆರೆ ದಾಟಿ ಔಟಾದ ಬಾಬರ್ ಆಝಂ
ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕೈದಿಗಳ ಮಾರಾಮಾರಿ: ಕಲ್ಲಿನಿಂದ ಜಜ್ಜಿ ಹಲ್ಲೆ
ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕೈದಿಗಳ ಮಾರಾಮಾರಿ: ಕಲ್ಲಿನಿಂದ ಜಜ್ಜಿ ಹಲ್ಲೆ
ತೆಂಗಿನ ಗರಿಯಲ್ಲಿ ಅರಳಿದ ಡಾ. ಶಿವಕುಮಾರ ಸ್ವಾಮೀಜಿ ಕಲಾಕೃತಿ
ತೆಂಗಿನ ಗರಿಯಲ್ಲಿ ಅರಳಿದ ಡಾ. ಶಿವಕುಮಾರ ಸ್ವಾಮೀಜಿ ಕಲಾಕೃತಿ
ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್
ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್
ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್
ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್
ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು
ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು
ಇಂದು ಈ ರಾಶಿಯವರ ವೈವಾಹಿಕ ಜೀವನದಲ್ಲಿ ಅಸ್ಥಿರತೆ!
ಇಂದು ಈ ರಾಶಿಯವರ ವೈವಾಹಿಕ ಜೀವನದಲ್ಲಿ ಅಸ್ಥಿರತೆ!
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು