AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯೊಳಗಡೆಯೇ ಕುರಿ-ಮೇಕೆಗಳನ್ನ ಬಿಟ್ಟು ಮನೆ ಸೀಜ್ ಮಾಡಿದ ಪೈನಾನ್ಸ್ ಸಿಬ್ಬಂದಿ; 2 ತಿಂಗಳಿಂದ ಮೇವು ನೀಡಲು ವೃದ್ದರ ಪರದಾಟ

ಆ ವೃದ್ದೆ ಮನೆ ಒಡೆಯನ ಚಿಕಿತ್ಸೆಗೆ ಎಂದು 2 ಲಕ್ಷ ರೂ. ಹಣವನ್ನ ಖಾಸಗಿ ಪೈನಾನ್ಸ್​ನಿಂದ ಸಾಲವಾಗಿ ಪಡೆದಿದ್ದು, 2 ಲಕ್ಷ ವರೆಗೂ ಹಣ ಸಂದಾಯವನ್ನು ಮಾಡಿದ್ದಳು.. ಆದ್ರೆ, ಕಟ್ಟಿದ ಹಣ ಬಡ್ಡಿಗೆ ಸರಿ ಹೋಯ್ತು ಎಂದು ಮನೆಗೆ ಬಂದ ಸಿಬ್ಬಂದಿ ವೃದ್ದರ ಬಳಿ ಅಮಾನವೀಯವಾಗಿ ನಡೆದುಕೊಂಡಿದ್ದಲ್ಲದೆ ಜಾನುವಾರುಗಳನ್ನ ಮನೆಯಲ್ಲಿಟ್ಟು ಲಾಕ್ ಮಾಡಿದ್ದಾರೆ. 2 ತಿಂಗಳ ಬಳಿ ಕುರಿ ಮೇಕೆಗಳು ಇಂದು ರಿಲೀಸ್ ಆಗಿವೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಮನೆಯೊಳಗಡೆಯೇ ಕುರಿ-ಮೇಕೆಗಳನ್ನ ಬಿಟ್ಟು ಮನೆ ಸೀಜ್ ಮಾಡಿದ ಪೈನಾನ್ಸ್ ಸಿಬ್ಬಂದಿ; 2 ತಿಂಗಳಿಂದ ಮೇವು ನೀಡಲು ವೃದ್ದರ ಪರದಾಟ
ಮನೆಯೊಳಗಡೆಯೇ ಕುರಿ-ಮೇಕೆಗಳನ್ನ ಬಿಟ್ಟು ಮನೆ ಸೀಜ್ ಮಾಡಿದ ಪೈನಾನ್ಸ್ ಸಿಬ್ಬಂದಿ
ನವೀನ್ ಕುಮಾರ್ ಟಿ
| Edited By: |

Updated on: Aug 14, 2024 | 5:48 PM

Share

ಬೆಂಗಳೂರು ಗ್ರಾಮಾಂತರ, ಆ.14: ಜಿಲ್ಲೆಯ ದೇವನಹಳ್ಳಿ() ತಾಲೂಕಿನ ವಿಜಯಪುರ ಪಟ್ಟಣದ ಜಯಲಕ್ಷ್ಮಮ್ಮ ಮತ್ತು ನಾಗಪ್ಪ ಎನ್ನುವ ಈ ದಂಪತಿ ಜೀವನೋಪಾಯಕ್ಕೆ ಎಂದು ಕುರಿ ಮತ್ತು ಮೇಕೆಗಳನ್ನ ಮೇಯಿಸಿಕೊಂಡಿದ್ದು, ಹಳೆಯ ಮನೆಯಲ್ಲೆ ವಾಸವಾಗಿದ್ದರು. ಜೊತೆಗೆ ಕಳೆದ ಒಂದು ವರ್ಷದಿಂದೆ ವೃದ್ದ ನಾಗಪ್ಪಗೆ ಅನಾರೋಗ್ಯವಾಗಿದೆ ಎಂದು ತಿಳಿದವರ ಮೂಲಕ ಜನಸ್ಮಾಲ್ ಪೈನಾನ್ಸ್ ಬ್ಯಾಂಕ್​ನಿಂದ 2 ಲಕ್ಷ ಹಣ ಪಡೆದಿದ್ದರಂತೆ. ಜೊತೆಗೆ 1 ಲಕ್ಷ 90 ಸಾವಿರ ಹಣವನ್ನ ವೃದ್ದೆ ತೀರಿಸಿದ್ದು, ಉಳಿದ ಹಣ ಕಟ್ಟಲು ತಡ ಮಾಡಿದ್ದಾರೆ.

ಹೀಗಾಗಿ ಕಟ್ಟಿದ ಹಣ ಬಡ್ಡಿಗೆ ಸರಿಹೋಯ್ತು, ಅಸಲು ಕಟ್ಟಬೇಕು ಎಂದು ಮನೆ ಬಳಿಗೆ ಬಂದ ಪೈನಾನ್ಸ್ ಸಿಬ್ಬಂದಿ, ಮನೆಯಲ್ಲೆ ಕುರಿ ಮೇಕೆ ಮತ್ತು ಕೋಳಿಯನ್ನ ಬಿಟ್ಟು ಮನೆ ಡೋರ್​ಗೆ ಬೀಗ ಹಾಕಿDevanahalli ಅಮಾನವೀಯವಾಗಿ ವರ್ತಿಸಿ ಲಾಕ್ ಮಾಡಿಕೊಂಡು ಹೋಗಿದ್ದಾರೆ. ಹೀಗಾಗಿ ಕಳೆದ ಎರಡು ತಿಂಗಳಿನಿಂದ ಮನೆಯ ಮೇಲ್ಚಾವಣಿಗೆ ಏಣಿ ಹಾಕಿಕೊಂಡು ಜಾನುವಾರುಗಳಿಗೆ ವೃದ್ದ ದಂಪತಿ ಮೇವು ನೀರು ನೀಡುತ್ತಾ ಮನೆಯಿಲ್ಲದೆ ಪರದಾಡಿದ್ದಾರೆ.

finance staff who siezed the house leaving the sheep and goats inside the house, Old people have been struggling to provide fodder for 2 months, Devanahalli News

ಇದನ್ನೂ ಓದಿ:ದೇವನಹಳ್ಳಿ: ಹುಟ್ಟಹಬ್ಬ ಆಚರಿಸಲು ಲಾಗ್​ಡ್ರೈವ್ ಹೊರಟಿದ್ದ ಯುವಕರ ವಾಹನ ಅಪಘಾತ, ಇಬ್ಬರು ಸಾವು

ವೃದ್ದ ದಂಪತಿ ಮನೆಯಿಲ್ಲದೆ ಜಾನುವಾರುಗಳನ್ನ ಸಾಕಲು ಪರದಾಡುತ್ತಿದ್ದ ವಿಚಾರ ತಿಳಿದು ಸ್ಥಳಕ್ಕೆ ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ ಅಧಿಕಾರಿಗಳ ಸಮೇತ ಭೇಟಿ ನೀಡಿದರು. ಜತೆಗೆ ಪೈನಾನ್ಸ್ ಸಿಬ್ಬಂದಿ ಬಗ್ಗೆ ಮಾಹಿತಿ ಪಡೆದ ತಹಶೀಲ್ದಾರ್, ಜಾನುವಾರುಗಳನ್ನ ಮನೆಯಲ್ಲಿಟ್ಟು ಸೀಜ್ ಮಾಡಿದಕ್ಕೆ ಪುಲ್ ಗರಂ ಆದರು. ಅಲ್ಲದೆ ಸಿಬ್ಬಂದಿಯಿಂದ ಮನೆಯ ಬೀಗ ಒಡೆದು ಹಾಕಿಸಿ ವೃದ್ದರನ್ನ ಮನೆ ಒಳಗಡೆ ಕಳಿಸಿದ್ದು, ಪೈನಾನ್ಸ್ ಸಿಬ್ಬಂದಿ ಕಿರುಕುಳ ನೀಡಲು ಬಂದ್ರೆ ತಮಗೆ ದೂರು ನೀಡುವಂತೆ ವೃದ್ದ ದಂಪತಿಗೆ ದೈರ್ಯ ಹೇಳಿದರು.

ಜೊತೆಗೆ ವೃದ್ದ ದಂಪತಿಯ ಪರಿಸ್ಥಿತಿಯನ್ನ ಕಂಡ ತಹಶಿಲ್ದಾರ್ ವೈಯುಕ್ತಿಕವಾಗಿ ವೃದ್ದರಿಗೆ 5 ಸಾವಿರ ನಗದು ಹಣವನ್ನ ನೀಡಿ ಸಹಾಯ ಮಾಡಿದ್ದು, ಮುಂದಿನ ದಿನಗಳಲ್ಲಿ ವೃದ್ದರಿಗೆ ಸರ್ಕಾರದ ವತಿಯಿಂದ ಸೂರು ಕಲ್ಪಿಸುವ ಭರವಸೆಯನ್ನ ನೀಡಿದರು. ಒಟ್ಟಾರೆ ವೃದ್ದರು ಜಾನುವಾರುಗಳನ್ನ ಮನೆಯಲ್ಲಿಟ್ಟು ಖಾಸಗಿ ಪೈನಾನ್ಸ್ ಸಿಬ್ಬಂದಿ ಮನೆಗೆ ಬೀಗ ಜಡಿದಿದ್ದು ನಿಜಕ್ಕೂ ಅಮಾನವೀಯ. ಇನ್ನು ಖಾಸಗಿ ಪೈನಾನ್ಸ್ ವಿರುದ್ದ ಕ್ರಿಮಿನಲ್ ಕೇಸ್ ದಾಖಲಿಸಲು ತಹಶೀಲ್ದಾರ್ ಮುಂದಾಗಿದ್ದು, ಮತ್ತೊಮ್ಮೆ ಇಂತಹ ಘಟನೆಗಳು ನಡೆಯದಂತೆ ಖಾಸಗಿ ಪೈನಾನ್ಸ್​ಗಳಿಗೆ ಬುದ್ದಿ ಕಲಿಸುವ ಕೆಲಸ ಮಾಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ