AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಗಡಿಯಲ್ಲಿ 5 ಒಂಟೆಗಳ ರಕ್ಷಣೆ, ರಂಜಾನ್ ಹಬ್ಬಕ್ಕೆ ಬಲಿ ಕೊಡಲು ತಂದಿದ್ರಾ?

ಚೆನೈ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಪಸಂದ್ರ ಬಳಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಒಂಟೆಗಳನ್ನ ಪೊಲೀಸರು ರಕ್ಷಣೆ ಮಾಡಿದ್ದಾರೆ.

ಬೆಂಗಳೂರು ಗಡಿಯಲ್ಲಿ 5 ಒಂಟೆಗಳ ರಕ್ಷಣೆ, ರಂಜಾನ್ ಹಬ್ಬಕ್ಕೆ ಬಲಿ ಕೊಡಲು ತಂದಿದ್ರಾ?
5 ಒಂಟೆಗಳ ರಕ್ಷಣೆ
ರಮೇಶ್ ಬಿ. ಜವಳಗೇರಾ
|

Updated on: Apr 05, 2023 | 1:37 PM

Share

ಬೆಂಗಳೂರು: ಚೆನೈ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಪಸಂದ್ರ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ ಐದು ಒಂಟೆಗಳನ್ನು (camels) ರಕ್ಷಣೆ ಮಾಡಲಾಗಿದೆ. ರಂಜಾನ್ ಹಬ್ಬದ ವೇಳೆ ಬಲಿ ಕೊಡಲು ಒಂಟೆಗಳನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಪಸಂದ್ರ ಬಳಿ ಐದು ಒಂಟೆಗಳನ್ನು ತಂದು ಕಟ್ಟಿ ಹಾಕಲಾಗಿದೆ ಎಂದು ತಿಳಿದುಬಂದಿದೆ. ಖಚಿತ ಮಾಹಿತಿ ಆಧಾರದ ಮೇರೆಗೆ ಹಿಂದು ಸಂಘಟನೆಗಳ ಕಾರ್ಯಕರ್ತರು ದಾಳಿ ನಡೆಸಿ ಅರಣ್ಯ ಇಲಾಖೆ, ಪೋಲೀಸರು ಹಾಗೂ ಪಶುಸಂಗೋಪನೆ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕದ್ದ ಚಿನ್ನವನ್ನು ಗುಜರಿಗೆ ಹಾಕಿದ ಮುಗ್ಧ ಕಳ್ಳನ ರೋಚಕ ಕಥೆ ಇಲ್ಲಿದೆ!

ಹಿಂದೂ ಕಾರ್ಯಕರ್ತರು ದಾಳಿ ಮಾಡುತ್ತಿದ್ದಂತೆ ಸಾಗಾಟಗಾರರು ಒಂಟೆಗಳನ್ನು ಬಿಟ್ಟು ಪರಾರಿಯಾಗಿದ್ದಾರೆ. ಕಂದಾಯ ಇಲಾಖೆ ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ಒಂಟೆಗಳ ರಕ್ಷಣೆ ಮಾಡಿದ್ದಾರೆ. ಬೆಂಗಳೂರು ಸೇರಿದಂತೆ ಹಲವೆಡೆಗೆ ಒಂಟೆ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ರಾಜ್ಯದಲ್ಲಿ ಚುನಾವಣಾ ಚೆಕ್​ಪೋಸ್ಟ್​ಗಳ ನಿಯೋಜನೆ ಹಿನ್ನೆಲೆಯಲ್ಲಿ ಒಂಟೆಗಳನ್ನ ಸಾಗಿಸಲಾಗದೆ ಗೋಪಸಂದ್ರ ಅರಣ್ಯ ಪ್ರದೇಶದಲ್ಲಿ ಕಟ್ಟಿಹಾಕಿದ್ದರು ಎಂದು ತಿಳಿದುಬಂದಿದೆ. ಈ ಬಗ್ಗೆ ಹೊಸೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ., ರಕ್ಷಣೆ ಮಾಡಿದ ಒಂಟೆಗಳನ್ನು ಅಧಿಕಾರಿಗಳು ಗೋಶಾಲೆಗೆ ರವಾನೆ ಮಾಡಿದ್ದಾರೆ.

10 ವರ್ಷದಿಂದ ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದ ಮೂವರ ಸೆರೆ

ಬೆಂಗಳೂರು: 10 ವರ್ಷದಿಂದ ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದ ಮೂವರನ್ನು ಕೊನೆಗೂ ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರಿನಲ್ಲಿ ಮೊಹ್ಮದ್ ಜಬೀವುದ್ದೀನ್, ಮೊಹ್ಮದ್ ಮೆಹತಾಬ್, ದಿನೇಶ್​ ಅಲಿಯಾಸ್ ದಿನ ಎಂಬಾತನನ್ನು ಬಂಧಿಸಿದ ಸಿಸಿಬಿ ಪೊಲೀಸರು ಬಂದಿಸಿದ್ದಾರೆ. ಮೂವರು ಆರೋಪಿಗಳು ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ವಾರಂಟ್ ಜಾರಿ ಮಾಡಿದ್ದರೂ ಕೋರ್ಟ್​ಗೆ ಹಾಜರಾಗದೆ ನಾಪತ್ತೆಯಾಗಿದ್ದರು. ಕಳೆದ 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಈ ಮೂವರು ಪಾತಕಿಗಳನ್ನು ಸಿಸಿಬಿ ಪೊಲೀಸರು ಸೆರೆ ಹಿಡಿದು ಜೈಲಿಗಟ್ಟಿದ್ದಾರೆ.

ಇನ್ನಷ್ಟು ಕ್ರೈಂ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ