AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗದೇ ವಾಪಸ್​ ಬೆಂಗಳೂರಿಗೆ ಬಂದ ವಿಮಾನ: ಪ್ರಯಾಣಿಕರು ಕಂಗಾಲು

ಬೆಂಗಳೂರಿನಿಂದ ಹುಬ್ಬಳ್ಳಿಗೆ ಹೋಗಿದ್ದ ವಿಮಾನ ಲ್ಯಾಂಡ್ ಆಗದೇ ವಾಪಸ್ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿರುವ ಘಟನೆ ನಡೆದಿದೆ. ಇದರಿಂದ ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ಪ್ರಯಾಣಿಕರು ಕಂಗಾಲಾಗಿದ್ದಾರೆ. ಅಷ್ಟಕ್ಕೂ ವಿಮಾನ ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗದೇ ಬೆಂಗಳೂರಿಗೆ ವಾಪಸ್ ಆಗಿದ್ದೇಕೆ?

ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗದೇ ವಾಪಸ್​ ಬೆಂಗಳೂರಿಗೆ ಬಂದ ವಿಮಾನ: ಪ್ರಯಾಣಿಕರು ಕಂಗಾಲು
ಪ್ರಾತಿನಿಧಿಕ ಚಿತ್ರ
ನವೀನ್ ಕುಮಾರ್ ಟಿ
| Edited By: |

Updated on: Oct 13, 2023 | 10:43 AM

Share

ಬೆಂಗಳೂರು, (ಅಕ್ಟೋಬರ್ 13): ಬೆಂಗಳೂರಿನಿಂದ(Bengaluru) ಹುಬ್ಬಳ್ಳಿಗೆ (Hubballi) ಹೋಗಿದ್ದ ವಿಮಾನ (Flight) ಲ್ಯಾಂಡ್ ಆಗದೇ ವಾಪಸ್ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ (kempegowda international airport ) ಆಗಮಿಸಿದೆ. ಇದರಿಂದ ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ಪ್ರಯಾಣಿಕರು ಅರೇ ಇದೇನಿದು ವಿಮಾನ ವಾಪಸ್ ಬೆಂಗಳೂರಿಗೆ ಬಂದಿದೆ ಎಂದು ಹೌಹಾರಿದ್ದಾರೆ. ಹೌದು..ಹುಬ್ಬಳ್ಳಿಯಲ್ಲಿ ಮಳೆಯಾಗುತ್ತಿದೆ. ಇದರಿಂದ ವಿಮಾನವನ್ನು ಲ್ಯಾಂಡ್ ಮಾಡಲು ಸಾಧ್ಯವಾಗದಿದ್ದರಿಂದ ಪೈಲೆಟ್, ವಿಮಾನವನ್ನು ವಾಪಸ್​ ಬೆಂಗಳೂರಿಗೆ ತಿರುಗಿಸಿದ್ದಾನೆ. ಈ ಹಿನ್ನೆಲೆಯ್ಲಿ ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ಪ್ರಯಾಣಿಕರು ಕಂಗಾಲಾಗಿದ್ದಾರೆ.

ಇಂದು (ಅಕ್ಟೋಬರ್ 13) ಬೆಳಗ್ಗೆ 05:50ಕ್ಕೆ 6E7227 ನಂಬರಿನ ಇಂಡಿಗೋ ವಿಮಾನ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಹುಬ್ಬಳ್ಳಿಗೆ ತೆರಳಿದ್ದು, ಬೆಳಗ್ಗೆ 7 ಗಂಟೆಗೆ ಲ್ಯಾಂಡ್ ಆಗಬೇಕಿತ್ತು. ಆದ್ರೆ, ಹುಬ್ಬಳ್ಳಿಯಲ್ಲಿ ಹವಾಮಾನ ವೈಪರೀತ್ಯ ಕಾರಣದಿಂದ ವಿಮಾನವನ್ನು ಲ್ಯಾಂಡ್ ಮಾಡಲು ಪೈಲೆಟ್​ಗೆ ಸರಿಯಾಗಿ ರನ್​ವೇ ಕಾಣಿಸಿಲ್ಲ. ಇದರಿಂದ ವಿಮಾನ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗದೇ ವಾಪಸ್ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿದೆ. ಇದರಿಂದ ಹುಬ್ಬಳ್ಳಿಗೆ ಹೋಗಬೇಕೆಂದು ಸಾವಿರಾರು ರೂಪಾಯಿ ಕೊಟ್ಟು ವಿಮಾನ ಬುಕ್ ಮಾಡಿದ್ದ ಪ್ರಯಾಣಿಕರು ಪರದಾಡುವಂತಾಗಿದೆ.

ಇದನ್ನೂ ಓದಿ: ಹವಾಮಾನ ವೈಪರೀತ್ಯ: ಶಿವಮೊಗ್ಗ ಏರ್‌ಪೋರ್ಟ್‌ನಲ್ಲಿ ಲ್ಯಾಂಡ್​ ಆಗದೆ ಬೆಂಗಳೂರಿಗೆ ವಾಪಸ್ ಆದ ವಿಮಾನ

ಇದೇ ತರ ಇತ್ತೀಚೆಗೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನಡೆದಿತ್ತು. ಹವಾಮಾನ ವೈಪರೀತ್ಯದಿಂದಾಗಿ ಬೆಂಗಳೂರಿನಿಂದ ಹೋಗಿದ್ದ ವಿಮಾನ ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣ (Shivamogga airport) ದಲ್ಲಿ ಲ್ಯಾಂಡ್ ಆಗದೆ ವಾಪಸ್​ ಕೆಂಪೇಗೌಡ ವಿಮಾನ ನಿಲ್ದಾಣ ಬಂದಿತ್ತು. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ತುಂತುರು ಮಳೆ ಜೊತೆಗೆ ಭಾರೀ ಪ್ರಮಾಣದ ಮೋಡ ಆವರಿಸಿತ್ತು. ಹಾಗಾಗಿ ಪೈಲೆಟ್​​ಗೆ ರನ್​ ವೇ ಸರಿಯಾಗಿ ಕಾಣಿಸಿಲ್ಲ. ಈ ಹಿನ್ನೆಲೆ ಇಂಡಿಗೋ ವಿಮಾನ ಶಿವಮೊಗ್ಗ ವಿಮಾನ ನಿಲ್ದಾಣ ಸುತ್ತ ಕೆಲ ಕಾಲ ಹಾರಾಟ ಮಾಡಿದೆ. ಆದರೂ ರನ್​ ವೇ ಸರಿಯಾಗಿ ಕಾಣಿಸದಿರುವುದರಿಂದ ಬೆಂಗಳೂರಿಗೆ ವಾಪಸ್​ ಆಗಿದ್ದನ್ನು ಇಲ್ಲಿ ಸ್ಮರಿಸಬಹುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್