AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣ್ಣಲ್ಲಿ ಮಣ್ಣಾದ ಕೇಂದ್ರದ ಮಾಜಿ ಸಚಿವ ಆರ್ ಎಲ್ ಜಾಲಪ್ಪ; ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಅಂತಿಮ ದರ್ಶನ ಪಡೆದ ನಂತರ ಮಾತನಾಡಿದ ಡಿಕೆ ಶಿವಕುಮಾರ್, ರಾಜ್ಯದ ಹಿರಿಯ ನಾಯಕರು ನಮ್ಮ ಪಕ್ಷದ ಗಣ್ಯರು. ಸಹಕಾರ ಕ್ಷೇತ್ರಕ್ಕೆ ಒಂದು ಕಾಲದಲ್ಲಿ ಪಿತಾಮಹ. ಅವರ ದಿಟ್ಟ ಹೋರಾಟ ಅವರ ಸಾದನೆ ಇಂದು ಸಾಕ್ಷಿಯಾಗಿದೆ.

ಮಣ್ಣಲ್ಲಿ ಮಣ್ಣಾದ ಕೇಂದ್ರದ ಮಾಜಿ ಸಚಿವ ಆರ್ ಎಲ್ ಜಾಲಪ್ಪ; ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ
ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು
TV9 Web
| Edited By: |

Updated on: Dec 18, 2021 | 4:52 PM

Share

ದೇವನಹಳ್ಳಿ: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಸಚಿವ ಆರ್ ಎಲ್ ಜಾಲಪ್ಪ (RL Jalappa) ನಿನ್ನೆ ನಿಧರಾಗಿದ್ದಾರೆ. ಇಂದು (ಡಿ.18) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಕಾಲೇಜು ಆವರಣದಲ್ಲಿ ಈಡಿಗರ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗಿದೆ. ಪೊಲೀಸ್ ಬ್ಯಾಂಡ್ನೊಂದಿಗೆ ರಾಷ್ಟ್ರಗೀತೆ ನುಡಿಸಿ ಗೌರವ ಸಮರ್ಪಣೆ ಮಾಡಲಾಯ್ತು. ಈ ಸಂದರ್ಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ವೀರಪ್ಪ ಮೊಯ್ಲಿ, ಆರೋಗ್ಯ ಇಲಾಖೆ ಸಚಿವ ಕೆ ಸುಧಾಕರ್ ಸೇರಿ ಹಲವರು ಭಾಗಿಯಾಗಿದ್ದರು.

ಜಾಲಪ್ಪ ಹಿರಿಯ ಮಗ ಜೆ ನರಸಿಂಹಸ್ವಾಮಿ ಅಂತಿಮ ವಿಧಿವಿಧಾನ ನೆರವೇರಿಸಿದರು. ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಕ್ಕೆ ಹೇಳಿಕೆ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜಕಾರಣದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಜಾಲಪ್ಪ ಬಡವರು, ದಲಿತರು, ಹಿಂದುಳಿದವರ ಬಗ್ಗೆ ಸದಾ ಚಿಂತನೆ ಮಾಡುತ್ತಿದ್ದವರು. ದೇವೇಗೌಡ ಸಿಎಂ ಆದ ಮೇಲೆ, ನಾನು ಸಿಎಂ ಆಗಬೇಕೆಂದು ಗಲಾಟೆ ಮಾಡಿದ್ದರು. ನಾನು ಕಾಂಗ್ರೆಸ್ ಸೇರಲು ಜಾಲಪ್ಪ ಕಾರಣ. ಸಿಎಂ ಆಗಲೇಬೇಕು ನೀನು ಎಂದು ಕಾಂಗ್ರೆಸ್ಗೆ ಸೇರಿಸಿದ್ದರು. ನಾನು ಸಿಎಂ ಆಗಿದ್ದಾಗ ಬಡವರ ಬಗ್ಗೆ ಕಾಳಜಿವಹಿಸು ಎಂದು ಹೇಳಿದ್ದರು. ಅಹಿಂದ ಹುಟ್ಟು ಹಾಕಿದ್ದೇ ಆರ್ ಎಲ್ ಜಾಲಪ್ಪ ಅಂತ ಅಭಿಪ್ರಾಯಪಟ್ಟರು.

ಇನ್ನು ಅಂತಿಮ ದರ್ಶನ ಪಡೆದ ನಂತರ ಮಾತನಾಡಿದ ಡಿಕೆ ಶಿವಕುಮಾರ್, ರಾಜ್ಯದ ಹಿರಿಯ ನಾಯಕರು ನಮ್ಮ ಪಕ್ಷದ ಗಣ್ಯರು. ಸಹಕಾರ ಕ್ಷೇತ್ರಕ್ಕೆ ಒಂದು ಕಾಲದಲ್ಲಿ ಪಿತಾಮಹ. ಅವರ ದಿಟ್ಟ ಹೋರಾಟ ಅವರ ಸಾದನೆ ಇಂದು ಸಾಕ್ಷಿಯಾಗಿದೆ. ದೇವರಜ್ ಅರಸು ಅವರ ತತ್ವ ಸಿದ್ಧಾಂತ ರೂಡಿಸಿಕೊಂಡಿದ್ದವರು. ಕಾಂಗ್ರೆಸ್ನಿಂದ ಪಕ್ಷದ ಸಂಸದರಾಗಿ ಹಿರಿಯ ನಾಯಕರಾಗಿ ಎಲ್ಲರಿಗೂ ಮಾರ್ಗದರ್ಶನ ಮಾಡಿದ್ದರು. ಇಂದು ಯಾರು ಬೇಕಾದರು ಮೆಡಿಕಲ್ ಕಾಲೇಜು ಮಾಡುತ್ತಾರೆ. ಆದರೆ ಆಗಿನ ಕಾಲದಲ್ಲಿ ಅವರು ಸಾಧನೆ ಮಾಡಿದ್ದಾರೆ. ನಾನು ಡಿಕೆಶಿಯಾಗಿ ಇಂದು ಇಲ್ಲಿಗೆ ಬಂದಿಲ್ಲ. ಅವರ ಮಕ್ಕಳು ಕುಟುಂಬಸ್ಥರ ಜೊತೆ ಉತ್ತಮ ಒಡನಾಟದಿಂದ ಬಂದಿದ್ದೇನೆ ಅಂತ ಹೇಳಿದರು.

ಇದನ್ನೂ ಓದಿ

Rahul Gandhi: ಭಾರತದ ಹಣದುಬ್ಬರ, ನೋವಿಗೆ ಹಿಂದುತ್ವವಾದಿಗಳೇ ಕಾರಣ; ಅಮೇಥಿಯಲ್ಲಿ ರಾಹುಲ್ ಗಾಂಧಿ ಆಕ್ರೋಶ

 ಖ್ಯಾತ ಪ್ರೊಡಕ್ಷನ್​ ಹೌಸ್​ ಅಡಿಯಲ್ಲಿ ಕೆಲಸ ಮಾಡಲಿದ್ದಾರೆ ಆರ್ಯನ್​ ಖಾನ್​; ಶಾರುಖ್​ ಮಗನ ಬಗ್ಗೆ ಹೊಸ ಅಪ್​ಡೇಟ್​

ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ