AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ವರ್ಷದಿಂದ ಕೊರೊನಾ ಕರಿನೆರಳು; ಗಣೇಶ ಮೂರ್ತಿ ತಯಾರಕರು ಕಂಗಾಲು

ಸಾವಿರಾರು ಗಣೇಶ ಮೂರ್ತಿಗಳು ಮಾರುಕಟ್ಟೆಗೆ ಲಗ್ಗೆಯಿಡಲು ಕಲರ್ ಪುಲ್ ಬಣ್ಣಗಳೊಂದಿಗೆ ಸಿದ್ಧವಾಗಿದ್ದರೂ, ಹೊರಗಡೆ ಬರಲಾಗದೆ ಕುಳಿತ ಜಾಗದಲ್ಲೇ ಉಳಿದುಕೊಂಡಿದೆ. ಇದರಿಂದ ಗಣೇಶ ತಯಾರಿಕೆ ಕುಟುಂಬ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ.

ಎರಡು ವರ್ಷದಿಂದ ಕೊರೊನಾ ಕರಿನೆರಳು; ಗಣೇಶ ಮೂರ್ತಿ ತಯಾರಕರು ಕಂಗಾಲು
ಸಾಂದರ್ಭಿಕ ಚಿತ್ರ
TV9 Web
| Updated By: guruganesh bhat|

Updated on:Aug 24, 2021 | 2:30 PM

Share

ದೇವನಹಳ್ಳಿ: ಕಳೆದ ಎರಡು ವರ್ಷದಿಂದ ಮಹಾಮಾರಿ ಕೊರೊನಾ (Coronavirus) ಅದೇಷ್ಟೋ ಸಣ್ಣ ಉದ್ದಿಮೆಗಳಿಗೆ ಭಾರಿ ಹೊಡೆತ ಕೊಟ್ಟಿದೆ. ಇನ್ನೆನೂ ಕೊರೊನಾ ಕಡಿಮೆಯಾಗಿ ಆರ್ಥಿಕವಾಗಿ ಸುಧಾರಿಸಿಕೊಳ್ಳಬಹುದು ಎಂಬ ನಿರೀಕ್ಷೆಯಲ್ಲಿದ್ದವರಿಗೆ ಕೊರೊನಾ ಮೂರನೇ ಅಲೆ (Coronavirus 3rd Wave) ಬಂದು ಅಪ್ಪಳಿಸಿದೆ. ಮೂರನೇ ಅಲೆಯನ್ನ ನಿಯಂತ್ರಣ ಮಾಡಲು ಸರ್ಕಾರ ಈ ಬಾರಿ ತಂದಿರುವ ಮಾರ್ಗಸೂಚಿ ಗಣೇಶ ತಯಾರಿಕಾ ಕುಟುಂಬಗಳಿಗೆ ಆತಂಕ ತಂದೊಡ್ಡಿದೆ.

ಒಂದು ಕಡೆ ವ್ಯಾಪಾರವಾಗದೆ ಕಳೆದೊಂದು ವರ್ಷದಿಂದ ಬೃಹತ್ ಗಣೇಶ ಮೂರ್ತಿಗಳು ಹಾಗೆ ಉಳಿದಿದ್ದರೆ, ಮತ್ತೊಂದೆಡೆ ಕೊರೊನಾ ಮೂರನೇ ಅಲೆಯ ಆತಂಕದ ನಡುವೆ ಈ ಭಾರಿಯಾದರು ಒಂದಷ್ಟು ಹಣ ಸಿಗುತ್ತೆ, ಸಂಕಷ್ಟಗಳಿಂದ ಪಾರಾಗೋಣ ಅಂತ ಚಿಕ್ಕ ಚಿಕ್ಕ ಗಣೇಶ ಮೂರ್ತಿಗಳನ್ನ ಸಿದ್ಧಪಡಿಸುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ರಾಜಗೋಪಾಲ ಎನ್ನುವವರ ಕುಟುಂಬ ಕಳೆದ 50 ವರ್ಷದಿಂದ ಗಣೇಶ ಮೂರ್ತಿ ತಯಾರಿಕೆಯನ್ನೆ ಕಾಯಕವನ್ನಾಗಿ ಮಾಡಿಕೊಂಡಿದ್ದಾರೆ. ಜತೆಗೆ ಇಲ್ಲಿ ತಯಾರಿಕೆ ಮಾಡುವ ಗಣೇಶ ಮೂರ್ತಿಗಳಿಗೆ ಮಂಡ್ಯ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಿಂದ ಬೇಡಿಕೆಯಿದ್ದು, ಪ್ರತಿವರ್ಷ ಸಾಕಷ್ಟು ಜನ ಇಲ್ಲಿಗೆ ಬಂದು ಗಣೇಶ ಮೂರ್ತಿಗಳನ್ನ ಕೊಂಡುಕೊಳ್ಳುತ್ತಾರೆ. ಆದರೆ ಕಳೆದ ವರ್ಷದಿಂದ ಕೊರೊನಾ ಕರಿನೆರಳು ಈ ಕುಟುಂಬವನ್ನ ಭಾಧಿಸುತ್ತಿದೆ.

ಸಾವಿರಾರು ಗಣೇಶ ಮೂರ್ತಿಗಳು ಮಾರುಕಟ್ಟೆಗೆ ಲಗ್ಗೆಯಿಡಲು ಕಲರ್ ಪುಲ್ ಬಣ್ಣಗಳೊಂದಿಗೆ ಸಿದ್ಧವಾಗಿದ್ದರೂ ಹೊರಗಡೆ ಬರಲಾಗದೆ ಕುಳಿತ ಜಾಗದಲ್ಲೇ ಉಳಿದುಕೊಂಡಿದೆ. ಇದರಿಂದ ಗಣೇಶ ತಯಾರಿಕೆ ಕುಟುಂಬ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಈ ಬಾರಿ ಬೃಹತ್ ಗಣೇಶ ಮೂರ್ತಿಗಳನ್ನು ಕೂರಿಸಲು ಅನುಮತಿಯನ್ನ ನಿರಾಕರಿಸಿದ್ದು, ಸಣ್ಣ ಗಣೇಶ ಮೂರ್ತಿಗಳನ್ನ ಮನೆಯಲ್ಲಿ ಕೂರಿಸಿ ಸರಳವಾಗಿ ಹಬ್ಬ ಆಚರಣೆ ಮಾಡಿ ಅಂತಾ ಸರ್ಕಾರ ತಿಳಿಸಿದೆ. ಈ ನಿರ್ಧಾರ ಗಣೇಶ ತಯಾರಿಕೆ ಮಾಡುವವರಿಗೆ ಆತಂಕ ಮನೆ ಮಾಡಿದೆ.

ಕಳೆದ ಬಾರಿ ಎರಡು ಸಾವಿರ ಗಣೇಶ ಮೂರ್ತಿ ಮಾತ್ರ ವ್ಯಾಪಾರವಾಗಿ, ಐದು ಸಾವಿರ ಗಣೇಶ ಮೂರ್ತಿಗಳು ಉಳಿದಿದ್ದವು. ಈ ಬಾರಿ ನಿಯಮಗಳನ್ನ ಸ್ವಲ್ಪ ಬದಲು ಮಾಡಿದರೆ ನಾವು ಬದುಕುತ್ತೇವೆ ಅಂತಾ ಗಣೇಶ ತಯಾರಿಕಾ ಕುಟುಂಬಗಳು ಅಳಲನ್ನ ತೋಡಿಕೊಂಡಿವೆ.

ಇದನ್ನೂ ಓದಿ

Kalyan Singh: ಅಯೋಧ್ಯೆ ರಾಮ ಮಂದಿರದ ರಸ್ತೆಗೆ ಕಲ್ಯಾಣ್ ಸಿಂಗ್ ಹೆಸರು; ರಾಮ ಭಕ್ತನಿಗೆ ಸರ್ಕಾರಿ ಗೌರವ

ಶನಿವಾರ, ರವಿವಾರ ಅಷ್ಟೇ ಕೊರೊನಾ ಬರುತ್ತಾ? ಗಣೇಶೋತ್ಸವ ಆಚರಿಸುವವರು ಅಂಜಬೇಡಿ; ವೈರಲ್ ಆಯ್ತು ಯತ್ನಾಳ್ ಹೇಳಿಕೆ

(Ganesh idol makers are worried about the guidelines published by Karnataka government)

Published On - 2:28 pm, Tue, 24 August 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ