ಗಣೇಶ ಹಬ್ಬ, ಈದ್ ಮಿಲಾದ್ ಆಚರಣೆ; ಬೆಂಗಳೂರು ಗ್ರಾಮಾಂತರ ಪೊಲೀಸರು ಹೈ ಅಲರ್ಟ್, ಇಲ್ಲಿದೆ ವಿವರ​

ಗಣೇಶ ವಿಸರ್ಜನೆ ಎಲ್ಲಿ‌‌ ಮಾಡಲಾಗುತ್ತೆ, ಅಲ್ಲಿನ ಮಾಹಿತಿ ಪಡೆದು ಗಣೇಶ ವಿಸರ್ಜನೆ ಮಾಡುವ ಸ್ಥಳದಲ್ಲೂ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, ಗಣೇಶ ಕೂರಿಸಲು ಕೂಡ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಸೂಚಿಸಿದ್ದೇವೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲೆಯಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದರು.

ಗಣೇಶ ಹಬ್ಬ, ಈದ್ ಮಿಲಾದ್ ಆಚರಣೆ; ಬೆಂಗಳೂರು ಗ್ರಾಮಾಂತರ ಪೊಲೀಸರು ಹೈ ಅಲರ್ಟ್, ಇಲ್ಲಿದೆ ವಿವರ​
ಬೆಂಗಳೂರು ಗ್ರಾಮಾಂತರ ಎಸ್ಪಿ
Edited By: ಕಿರಣ್ ಹನುಮಂತ್​ ಮಾದಾರ್

Updated on: Sep 17, 2023 | 8:08 PM

ಬೆಂಗಳೂರು ಗ್ರಾಮಾಂತರ, ಸೆ.17: ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಆಚರಣೆ ಇರುವ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್​ ಬೀಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ (Bengaluru Rural) ಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ ಹೇಳಿದರು. ‘2 ಕೆಎಸ್​ಆರ್​ಪಿ (KSRP) ತುಕಡಿ ಹಾಗೂ ಡಿಎಆರ್​ ಸಿಬ್ಬಂದಿ, 300 ಹೋಂ ಗಾರ್ಡ್ಸ್​ ನಿಯೋಜನೆ ಮಾಡಲಾಗಿದ್ದು, ಅತೀಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಿದ್ದೇವೆ ಎಂದರು.

ವಿಸರ್ಜನೆ ಸ್ಥಳದಲ್ಲೂ ಹೈ ಅಲರ್ಟ್​

ಇನ್ನು ಗಣೇಶ ವಿಸರ್ಜನೆ ಎಲ್ಲಿ‌‌ ಮಾಡಲಾಗುತ್ತೆ, ಅಲ್ಲಿನ ಮಾಹಿತಿ ಪಡೆದು ಗಣೇಶ ವಿಸರ್ಜನೆ ಮಾಡುವ ಸ್ಥಳದಲ್ಲೂ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, ಗಣೇಶ ಕೂರಿಸಲು ಕೂಡ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಸೂಚಿಸಿದ್ದೇವೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲೆಯಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದರು. ಇದೇ ವೇಳೆ ‘ಈಗಾಗಲೇ ಗಣೇಶ ಕೂರಿಸಲು ಅನುಮತಿ ಪಡೆಯಲು ಸಿಂಗಲ್ ವಿಂಡೋ ಸಿಸ್ಟಮ್ ಮಾಡಿದ್ದೇವೆ ಎಂದರು.

ಇದನ್ನೂ ಓದಿ:ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆಗೆ ಮನವಿ ಪತ್ರ ಬಂದಿದೆ: ಸಚಿವ ಆರ್​ ಅಶೋಕ

ಗಣೇಶ ಕೂರಿಸಲು ಮುನ್ನೆಚ್ಚರಿಕೆ ಕ್ರಮ

ಗಣೇಶ ಕೂರಿಸಲು ಬೆಸ್ಕಾಂ, ಜಾಗದ ಅನುಮತಿ, ಅಗ್ನಿಶಾಮಕ ಸೆರಿದಂತೆ ಪೊಲೀಸ್ ಅನುಮತಿ ಸಿಂಗಲ್ ವಿಂಡೋದಲ್ಲಿ ಮಾಡಿಕೊಡುತ್ತಿದ್ದೇವೆ. ಗಣೇಶ ಕೂರಿಸಲು ಮುನ್ನೆಚ್ಚರಿಕೆ ಯಾವ ರೀತಿ ಕ್ರಮ ಅನುಸರಿಸಬೇಕು ಎಲ್ಲವನ್ನು ತಿಳಿ ಹೇಳಿದ್ದೇವೆ. ಜೊತೆಗೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಲ್ಲಾ‌ ಬಂದೋಬಸ್ತ್ ಮಾಡಿದ್ದೇವೆ. ಎಲ್ಲರೂ ಕಾನೂನು ಚೌಕಟ್ಟಿನಲ್ಲಿ ಹಬ್ಬ ಆಚರಣೆ ಮಾಡಿ ಶಾಂತಿ ಸುವ್ಯವಸ್ಥೆ ಪಾಲಿಸುವಂತೆ ಸೂಚನೆ ನೀಡಿದ್ದೇವೆ ಎಂದು ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us