AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೀಣ್ಯ ಇಂಡಸ್ಟ್ರಿಗೂ ತಟ್ಟಿದ ಗ್ಯಾಸ್ ​ಎಫೆಕ್ಟ್: ಕೆಲಸವಿಲ್ಲದೇ ಕೈಕಟ್ಟಿ ಕುಳಿತ ಕಾರ್ಮಿಕರು; ಕೋಟ್ಯಂತರ ರೂ ನಷ್ಟ

ಮಧ್ಯಪ್ರಾಚ್ಯ ಯುದ್ಧದ ಕಾರಣ ವಾಣಿಜ್ಯ ಗ್ಯಾಸ್ ಸಿಲಿಂಡರ್​ಗಳ ತೀವ್ರ ಕೊರತೆ ಎದುರಾಗಿದೆ. ಹೋಟೆಲ್ ಉದ್ಯಮಕ್ಕೆ ಮಾತ್ರವಲ್ಲದೆ, ಪೀಣ್ಯ ಕೈಗಾರಿಕಾ ಪ್ರದೇಶದ ಸಾವಿರಾರು ಕಂಪನಿಗಳ ಮೇಲೆ ಭಾರಿ ಪರಿಣಾಮ ಬೀರಿದೆ. ಸಿಲಿಂಡರ್ ಇಲ್ಲದೆ ಉತ್ಪಾದನೆ ಸ್ಥಗಿತಗೊಂಡಿದ್ದು, ಕಾರ್ಮಿಕರು ಕೆಲಸವಿಲ್ಲದೆ ಖಾಲಿ ಕುಳಿತಿದ್ದಾರೆ. ಕೋಟ್ಯಂತರ ರೂಪಾಯಿ ನಷ್ಟ ಉಂಟಾಗಿದೆ.

ಪೀಣ್ಯ ಇಂಡಸ್ಟ್ರಿಗೂ ತಟ್ಟಿದ ಗ್ಯಾಸ್ ​ಎಫೆಕ್ಟ್: ಕೆಲಸವಿಲ್ಲದೇ ಕೈಕಟ್ಟಿ ಕುಳಿತ ಕಾರ್ಮಿಕರು; ಕೋಟ್ಯಂತರ ರೂ ನಷ್ಟ
ಪೀಣ್ಯ ಇಂಡಸ್ಟ್ರಿಯಲ್ Image Credit source: tv9 kannada
ಗಂಗಾಧರ​ ಬ. ಸಾಬೋಜಿ
|

Updated on: Mar 14, 2026 | 5:34 PM

Share

ನೆಲಮಂಗಲ, ಮಾರ್ಚ್​​ 14: ಮಧ್ಯಪ್ರಾಚ್ಯದಲ್ಲಿ ಯುದ್ದದ ಎಫೆಕ್ಟ್ ಹಿನ್ನೆಲೆ ಕಮರ್ಷಿಯಲ್ ಗ್ಯಾಸ್​ ಸಿಲಿಂಡರ್​ಗಳ (gas cylinder) ಅಭಾವ ಉಂಟಾಗಿದ್ದು, ಹೋಟೆಲ್ ಉದ್ಯಮದ ಮೇಲೆ ಎಫೆಕ್ಟ್ ಜೊತೆಗೆ ಪೀಣ್ಯ ಕೈಗಾರಿಕಾ ಪ್ರದೇಶದ ಮೇಲೂ ದೊಡ್ಡ ಪರಿಣಾಮ ಬೀರಿದೆ. ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಸಾವಿರಾರು ಕಚ್ಚಾ ವಸ್ತು ಪೂರೈಕೆ ಮಾಡುವ ಕಂಪನಿಗಳಿದ್ದು ಸಿಲಿಂಡರ್ ಎಫೆಕ್ಟ್​ನಿಂದ ಕೈಕೈ ಹಿಸುಕಿಕೊಳ್ಳುವಂತಾಗಿದೆ.

ಪೀಣ್ಯ ಕೈಗಾರಿಕಾ ಪ್ರದೇಶಕ್ಕೂ ತಟ್ಟಿದ ಕಮರ್ಷಿಯಲ್ ಸಿಲಿಂಡರ್ ಬಿಸಿ

ಕಮರ್ಷಿಯಲ್ ಸಿಲಿಂಡರ್ ಸ್ಟಾಕ್ ಬಂದ್ ಹಿನ್ನೆಲೆ ಹೋಟೆಲ್ ಉದ್ಯಮದ ಜೊತೆಗೆ ಪೀಣ್ಯ ಕೈಗಾರಿಕಾ ಪ್ರದೇಶದ ಮೇಲೆ ದೊಡ್ಡ ಪರಿಣಾಮ ಬೀರಿದೆ. ದಶಕಗಳ ಕಾಲ ನಡೆಸಿಕೊಂಡು ಬಂದಿರುವ ಕಂಪನಿಗಳು ಗ್ಯಾಸ್ ಸಿಲಿಂಡರ್ ಇಲ್ಲದೆ ಕೈಕಟ್ಟಿ ಕುಳಿತಿದ್ದಾರೆ. ಪೀಣ್ಯ ಕೈಗಾರಿಕಾ ಪ್ರದೇಶದ ಶ್ರೀ ಲಕ್ಷ್ಮಿ ಫ್ರೋಫೈಲ್ ಕಂಪನಿಯಲ್ಲಿ 50ಕ್ಕೂ ಹೆಚ್ಚು ಕಾರ್ಮಿಕರಿದ್ದು ಕೆಲಸವಿಲ್ಲದೆ ಕೈ ಕಟ್ಟಿ ಕುಳಿತಿದ್ದಾರೆ.

ಇದನ್ನೂ ಓದಿ: ಬುಕ್​​ ಆಗದ ಗ್ಯಾಸ್​​​: ಖಾಲಿ ಸಿಲಿಂಡರ್ ಹಿಡಿದು ಕುಳಿತ ಜನ; ಮನೆ ಅಡುಗೆಗೂ ಕುತ್ತು

ಇನ್ನು ಈ ಕಂಪನಿ 40 ಕಂಪನಿಗಳಿಗೆ ಕಚ್ಚಾ ವಸ್ತು ಪೂರೈಕೆ ಮಾಡುವ ಕಂಪನಿಯಾಗಿದ್ದು, 30 ವರ್ಷಗಳಿಂದ ನಡೆಸಿಕೊಂಡು ಬರ್ತಿದ್ದಾರೆ. ಇರಾಕ್ ಮತ್ತು ಇಸ್ರೇಲ್ ಯುದ್ದದಿಂದ ಗ್ಯಾಸ್ ಮೇಲೆ ಪರಿಣಾಮ ಬೀರಿದ್ದು ದಿನನಿತ್ಯ ಕಂಪನಿಯಲ್ಲಿ 50 ಕಾರ್ಮಿಕರಿಗೆ ಕೆಲಸ ಇಲ್ಲದಂತಾಗಿದೆ. ಪ್ರತಿನಿತ್ಯ 15 ಗ್ಯಾಸ್​​ ಸಿಲಿಂಡರ್ ಅವಶ್ಯಕತೆದೆ. ಇದೀಗ ಸಿಲಿಂಡರ್ ಇಲ್ಲದೆ ಕಾರ್ಮಿಕರು ಕೈ ಕಟ್ಟಿ ಕುಳಿತಿದ್ದಾರೆ. ಇದ್ರಿಂದ ಕೋಟ್ಯಂತರ ರೂ ನಷ್ಟವಾಗಿದೆ.

ಇದನ್ನೂ ಓದಿ: ಗ್ಯಾಸ್​​​ ಅಭಾವದ ಮಧ್ಯೆ ಮಂಗಳೂರಿನ ಹೋಟೆಲ್​​​ವೊಂದರಿಂದ ಭರ್ಜರಿ ಆಫರ್​​: ಷರತ್ತು ಅನ್ವಯ

ಒಟ್ಟಿನಲ್ಲಿ ಕಮರ್ಷಿಯಲ್ ಸಿಲಿಂಡರ್ ಎಫೆಕ್ಟ್​ನಿಂದ ಸಾಕಷ್ಟು ಉದ್ಯಮಗಳ ಮೇಲೆ ಪರಿಣಾಮ ಬೀರಿದ್ದು, ಪೀಣ್ಯ ಕೈಗಾರಿಕಾ ಪ್ರದೇಶದ ಮೇಲೂ ಇದರ ಎಫೆಕ್ಟ್ ತಟ್ಟಿದೆ.

ವರದಿ: ಮಂಜುನಾಥ್ ಟಿವಿನೈನ್ ನೆಲಮಂಗಲ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?