AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೀಣ್ಯ ಇಂಡಸ್ಟ್ರಿಗೂ ತಟ್ಟಿದ ಗ್ಯಾಸ್ ​ಎಫೆಕ್ಟ್: ಕೆಲಸವಿಲ್ಲದೇ ಕೈಕಟ್ಟಿ ಕುಳಿತ ಕಾರ್ಮಿಕರು; ಕೋಟ್ಯಂತರ ರೂ ನಷ್ಟ

ಮಧ್ಯಪ್ರಾಚ್ಯ ಯುದ್ಧದ ಕಾರಣ ವಾಣಿಜ್ಯ ಗ್ಯಾಸ್ ಸಿಲಿಂಡರ್​ಗಳ ತೀವ್ರ ಕೊರತೆ ಎದುರಾಗಿದೆ. ಹೋಟೆಲ್ ಉದ್ಯಮಕ್ಕೆ ಮಾತ್ರವಲ್ಲದೆ, ಪೀಣ್ಯ ಕೈಗಾರಿಕಾ ಪ್ರದೇಶದ ಸಾವಿರಾರು ಕಂಪನಿಗಳ ಮೇಲೆ ಭಾರಿ ಪರಿಣಾಮ ಬೀರಿದೆ. ಸಿಲಿಂಡರ್ ಇಲ್ಲದೆ ಉತ್ಪಾದನೆ ಸ್ಥಗಿತಗೊಂಡಿದ್ದು, ಕಾರ್ಮಿಕರು ಕೆಲಸವಿಲ್ಲದೆ ಖಾಲಿ ಕುಳಿತಿದ್ದಾರೆ. ಕೋಟ್ಯಂತರ ರೂಪಾಯಿ ನಷ್ಟ ಉಂಟಾಗಿದೆ.

ಪೀಣ್ಯ ಇಂಡಸ್ಟ್ರಿಗೂ ತಟ್ಟಿದ ಗ್ಯಾಸ್ ​ಎಫೆಕ್ಟ್: ಕೆಲಸವಿಲ್ಲದೇ ಕೈಕಟ್ಟಿ ಕುಳಿತ ಕಾರ್ಮಿಕರು; ಕೋಟ್ಯಂತರ ರೂ ನಷ್ಟ
ಪೀಣ್ಯ ಇಂಡಸ್ಟ್ರಿಯಲ್ Image Credit source: tv9 kannada
ಗಂಗಾಧರ​ ಬ. ಸಾಬೋಜಿ
|

Updated on: Mar 14, 2026 | 5:34 PM

Share

ನೆಲಮಂಗಲ, ಮಾರ್ಚ್​​ 14: ಮಧ್ಯಪ್ರಾಚ್ಯದಲ್ಲಿ ಯುದ್ದದ ಎಫೆಕ್ಟ್ ಹಿನ್ನೆಲೆ ಕಮರ್ಷಿಯಲ್ ಗ್ಯಾಸ್​ ಸಿಲಿಂಡರ್​ಗಳ (gas cylinder) ಅಭಾವ ಉಂಟಾಗಿದ್ದು, ಹೋಟೆಲ್ ಉದ್ಯಮದ ಮೇಲೆ ಎಫೆಕ್ಟ್ ಜೊತೆಗೆ ಪೀಣ್ಯ ಕೈಗಾರಿಕಾ ಪ್ರದೇಶದ ಮೇಲೂ ದೊಡ್ಡ ಪರಿಣಾಮ ಬೀರಿದೆ. ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಸಾವಿರಾರು ಕಚ್ಚಾ ವಸ್ತು ಪೂರೈಕೆ ಮಾಡುವ ಕಂಪನಿಗಳಿದ್ದು ಸಿಲಿಂಡರ್ ಎಫೆಕ್ಟ್​ನಿಂದ ಕೈಕೈ ಹಿಸುಕಿಕೊಳ್ಳುವಂತಾಗಿದೆ.

ಪೀಣ್ಯ ಕೈಗಾರಿಕಾ ಪ್ರದೇಶಕ್ಕೂ ತಟ್ಟಿದ ಕಮರ್ಷಿಯಲ್ ಸಿಲಿಂಡರ್ ಬಿಸಿ

ಕಮರ್ಷಿಯಲ್ ಸಿಲಿಂಡರ್ ಸ್ಟಾಕ್ ಬಂದ್ ಹಿನ್ನೆಲೆ ಹೋಟೆಲ್ ಉದ್ಯಮದ ಜೊತೆಗೆ ಪೀಣ್ಯ ಕೈಗಾರಿಕಾ ಪ್ರದೇಶದ ಮೇಲೆ ದೊಡ್ಡ ಪರಿಣಾಮ ಬೀರಿದೆ. ದಶಕಗಳ ಕಾಲ ನಡೆಸಿಕೊಂಡು ಬಂದಿರುವ ಕಂಪನಿಗಳು ಗ್ಯಾಸ್ ಸಿಲಿಂಡರ್ ಇಲ್ಲದೆ ಕೈಕಟ್ಟಿ ಕುಳಿತಿದ್ದಾರೆ. ಪೀಣ್ಯ ಕೈಗಾರಿಕಾ ಪ್ರದೇಶದ ಶ್ರೀ ಲಕ್ಷ್ಮಿ ಫ್ರೋಫೈಲ್ ಕಂಪನಿಯಲ್ಲಿ 50ಕ್ಕೂ ಹೆಚ್ಚು ಕಾರ್ಮಿಕರಿದ್ದು ಕೆಲಸವಿಲ್ಲದೆ ಕೈ ಕಟ್ಟಿ ಕುಳಿತಿದ್ದಾರೆ.

ಇದನ್ನೂ ಓದಿ: ಬುಕ್​​ ಆಗದ ಗ್ಯಾಸ್​​​: ಖಾಲಿ ಸಿಲಿಂಡರ್ ಹಿಡಿದು ಕುಳಿತ ಜನ; ಮನೆ ಅಡುಗೆಗೂ ಕುತ್ತು

ಇನ್ನು ಈ ಕಂಪನಿ 40 ಕಂಪನಿಗಳಿಗೆ ಕಚ್ಚಾ ವಸ್ತು ಪೂರೈಕೆ ಮಾಡುವ ಕಂಪನಿಯಾಗಿದ್ದು, 30 ವರ್ಷಗಳಿಂದ ನಡೆಸಿಕೊಂಡು ಬರ್ತಿದ್ದಾರೆ. ಇರಾಕ್ ಮತ್ತು ಇಸ್ರೇಲ್ ಯುದ್ದದಿಂದ ಗ್ಯಾಸ್ ಮೇಲೆ ಪರಿಣಾಮ ಬೀರಿದ್ದು ದಿನನಿತ್ಯ ಕಂಪನಿಯಲ್ಲಿ 50 ಕಾರ್ಮಿಕರಿಗೆ ಕೆಲಸ ಇಲ್ಲದಂತಾಗಿದೆ. ಪ್ರತಿನಿತ್ಯ 15 ಗ್ಯಾಸ್​​ ಸಿಲಿಂಡರ್ ಅವಶ್ಯಕತೆದೆ. ಇದೀಗ ಸಿಲಿಂಡರ್ ಇಲ್ಲದೆ ಕಾರ್ಮಿಕರು ಕೈ ಕಟ್ಟಿ ಕುಳಿತಿದ್ದಾರೆ. ಇದ್ರಿಂದ ಕೋಟ್ಯಂತರ ರೂ ನಷ್ಟವಾಗಿದೆ.

ಇದನ್ನೂ ಓದಿ: ಗ್ಯಾಸ್​​​ ಅಭಾವದ ಮಧ್ಯೆ ಮಂಗಳೂರಿನ ಹೋಟೆಲ್​​​ವೊಂದರಿಂದ ಭರ್ಜರಿ ಆಫರ್​​: ಷರತ್ತು ಅನ್ವಯ

ಒಟ್ಟಿನಲ್ಲಿ ಕಮರ್ಷಿಯಲ್ ಸಿಲಿಂಡರ್ ಎಫೆಕ್ಟ್​ನಿಂದ ಸಾಕಷ್ಟು ಉದ್ಯಮಗಳ ಮೇಲೆ ಪರಿಣಾಮ ಬೀರಿದ್ದು, ಪೀಣ್ಯ ಕೈಗಾರಿಕಾ ಪ್ರದೇಶದ ಮೇಲೂ ಇದರ ಎಫೆಕ್ಟ್ ತಟ್ಟಿದೆ.

ವರದಿ: ಮಂಜುನಾಥ್ ಟಿವಿನೈನ್ ನೆಲಮಂಗಲ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ